<p><strong>ಚಿಕ್ಕಮಗಳೂರು</strong>: ‘ಕಾಡು ನಾಶದಿಂದ ಆನೆಗಳು ನಡಿಗೆ ಬರುತ್ತಿವೆ. ಆನೆ ಹಾವಳಿಯಿಂದ ಇತ್ತೀಚೆಗೆ ಇಬ್ಬರು ಮೃತಪಟ್ಟಿದ್ದಾರೆ, ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು...’ </p>.<p>ಹೀಗೆ ಆನೆ ಮಾನವ ಸಂಘರ್ಷದ ವಿಷಯ ಪ್ರಸ್ತಾಪವಾಗಿದ್ದು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲೆ ವಿಭಾಗದ ಯುವ ಸಂಸತ್ ಸ್ಪರ್ಧೆಯಲ್ಲಿ.</p>.<p>ವಿರೋಧ ಪಕ್ಷದ ಸಾಲಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೊಬ್ಬರು ವಿಷಯ ಪ್ರಸ್ತಾಪಿಸಿ, ‘ಶೃಂಗೇರಿ ಬಳಿ ಇತ್ತೀಚೆಗೆ ಇಬ್ಬರ ಪ್ರಾಣವನ್ನು ಕಾಡಾನೆ ಬಲಿ ತೆಗೆದುಕೊಂಡಿದೆ. ಇದಕ್ಕೆ ಸರ್ಕಾರವೇ ಹೊಣೆ. ಆನೆ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಆಡಳಿತ ಪಕ್ಷದ ಸಾಲಿನಲ್ಲಿ ಕುಳಿತಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಕೂಡ ಇದೇ ವಿಷಯ ಪ್ರಾಸ್ತಾಪಿಸಿದರು. ಕಾಡು ನಾಶದಿಂದ ಆನೆ ಸೇರಿ ಕಾಡುಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಕಾಡು ರಕ್ಷಣೆಯಾಗಬೇಕು, ಕಾಡುಪ್ರಾಣಿಗಳೂ ಉಳಿಯಬೇಕು. ಕಾಡಂಚಿನಲ್ಲಿ ಇರುವ ಜನರ ರಕ್ಷಣೆಯೂ ಆಗಬೇಕು ಎಂದರು.</p>.<p>‘ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿಗಳು ಶಾಲೆಗೆ ಬರಲು ಸಾಧ್ಯವಾಗುತ್ತಿಲ್ಲ. ಶಿಕ್ಷಕರು ಸಹ ಸಮಯಕ್ಕೆ ಸರಿಯಾಗಿ ಶಾಲೆ–ಕಾಲೇಜುಗಳಿಗೆ ಬರಲು ಸಾಧ್ಯವಾಗದೆ ಪಾಠ–ಪ್ರವಚನಗಳಿಗೆ ತೊಂದರೆಯಾಗಿದೆ. ರಸ್ತೆ ಗುಂಡಿ ಮುಚ್ಚುವ ಕೆಲಸವೂ ಆರಂಭವಾಗಿಲ್ಲ’ ಎಂದು ಮತ್ತೊಬ್ಬ ವಿದ್ಯಾರ್ಥಿನಿ ಹೇಳಿದರು.</p>.<p>ಬಸ್ಗಳ ಸಂಖ್ಯೆ ಕಡಿಮೆ ಇರುವುದರಿಂದ ಗ್ರಾಮೀಣ ಪ್ರದೇಶಕ್ಕೆ ಸೂಕ್ತ ಬಸ್ ವ್ಯವಸ್ಥೆ ಇಲ್ಲ. ವಿದ್ಯಾರ್ಥಿಗಳಿಗೆ ಐದು ವರ್ಷಗಳಿಂದ ಸೈಕಲ್ ನೀಡುವುದನ್ನು ನಿಲ್ಲಿಸಲಾಗಿದೆ. ಈ ಎಲ್ಲಾ ಕಾರಣಗಳಿಂದ ವಿದ್ಯಾರ್ಥಿಗಳು ಶಾಲೆಗೆ ಬರುವುದು ಕಷ್ಟವಾಗಿದೆ ಎಂದರು.</p>.<p>‘ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಲಾಗಿದೆ. ಮಳೆಗಾಲ ಮುಗಿದ ಕೂಡಲೇ ಕಾಮಗಾರಿ ಆರಂಭವಾಗಲಿದೆ. ಸೈಕಲ್ ಕೂಡ ನೀಡಲಾಗುತ್ತಿದೆ. ಕೆಲವೆಡೆ ಬಸ್ ಸೌಕರ್ಯವನ್ನೂ ಕಲ್ಪಿಸಲಾಗಿದೆ. ಇದು ವಿರೋಧ ಪಕ್ಷದವರ ಗಮನಕ್ಕೆ ಬಂದಿಲ್ಲ ಎನ್ನಿಸುತ್ತದೆ’ ಎಂಬ ಉತ್ತರವನ್ನು ಆಡಳಿತ ಪಕ್ಷದವರು ನೀಡಿದರು.</p>.<p>ಬಸ್ಗಳ್ನು ಖರೀದಿಸಿ ಹೆಚ್ಚುವರಿ ಬಸ್ ಸೌಕರ್ಯ ಕಲ್ಪಿಸುವ ಸಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಸಾರಿಗೆ ಸಚಿವರ ಸ್ಥಾನದಲ್ಲಿದ್ದ ವಿದ್ಯಾರ್ಥಿ ಉತ್ತರ ನೀಡಿದರು.</p>.<p>ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸೇರಿ ಮೂಲಸೌಕರ್ಯ ಇಲ್ಲ. ಸರಿಪಡಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಮತ್ತೊಬ್ಬ ವಿದ್ಯಾರ್ಥಿನಿ ಪ್ರಶ್ನಿಸಿದರು.</p>.<p>‘ಶಾಲೆಗಳಲ್ಲಿ ಶೌಚಾಲಯ ಸೇರಿ ಎಲ್ಲಾ ಸೌಕರ್ಯಗಳನ್ನು ನೀಡಲಾಗಿದೆ. ಯಾವ ಶಾಲೆಯಲ್ಲಿ ಸಮಸ್ಯೆ ಇದೆ ಎಂಬುದನ್ನು ನಿಖರವಾಗಿ ತಿಳಿಸಿದರೆ ಅಧಿಕಾರಿಗಳನ್ನು ಕಳುಹಿಸಿ ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಆಡಳಿತ ಪಕ್ಷದ ಸಾಲಿನಲ್ಲಿದ್ದ ವಿದ್ಯಾರ್ಥಿಗಳು ಸಮರ್ಥಿಸಿಕೊಂಡರು.</p>.<p>ಯಾವ ಕಲಾಪಗಳಿಗೂ ಕಡಿಮೆ ಇಲ್ಲ ಎಂಬಂತೆ ಜಿಲ್ಲೆಯ ವರ್ತಮಾನದ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಯುವ ಸಂಸತ್ನಲ್ಲಿ ಪ್ರಸ್ತಾಪಿಸಿದರು. ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಗದಿರುವ ಕುರಿತು, ಬುಡಕಟ್ಟು ಜನರಿಗೆ ಬಿಪಿಎಲ್ ಕಾರ್ಡ್ ಸೌಲಭ್ಯ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಚರ್ಚೆ ನಡೆಸಿದರು.</p>.<p>ಕಳಸಾಪುರ ಕರ್ನಾಟಕ ಪಬ್ಲಿಕ್ ಶಾಲೆಯ(ಕೆಪಿಎಸ್) ಸಿಂಚನಾ ಆರ್. ಪ್ರಕಾಶ್ ಮತ್ತು ಗುಬ್ಬಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಗಗನ್ ನಾಯ್ಕ್ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ಆಯ್ಕೆಯಾದರು.</p>.<p>ಯುವ ಸಂಸತ್ ಸ್ಪರ್ಧೆಯ ನೂಡಲ್ ಅಧಿಕಾರಿ ಕೆ.ಜಿ. ಕಾಂತರಾಜ್, ಶಿಕ್ಷಣಾಕಾರಿ ನಾಗರಾಜ್, ಯುವ ಸಂಸತ್ ಸ್ಪರ್ಧೆ ಸಮಿತಿಯ ಸದಸ್ಯ ಎಸ್.ಆರ್. ಸತೀಶ್, ಮಹದೇವಪ್ಪ ಕುಂದರಗಿ, ಲಕ್ಷ್ಮಣ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಜಿ. ನೀಲಕಂಠಪ್ಪ ಇದ್ದರು. </p>.<p><strong>‘ನಾಯಕನಾಗಲು ಅಡ್ಡದಾರಿ ಇಲ್ಲ’</strong></p><p>‘ನಾಯಕನಾಗಲು ಅಡ್ಡದಾರಿ ಇಲ್ಲ. ಜನ ಪರವಾದ ಕೆಲಸಗಳಿಂದ ಮಾತ್ರ ನಾಯಕನಾಗಲು ಸಾಧ್ಯ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.</p><p>‘ಡೊನೇಷನ್ ನೀಡಿದರೆ ದಾನಿಗಳಾಗಬಹುದು. ನಾಯಕನಾಗಲು ಸಾಧ್ಯವಿಲ್ಲ. ಫ್ಲೆಕ್ಸ್ ಹಾಕಿ ಸಾಮಾಜಿಕ ಮಾಧ್ಯಮಗಳಲ್ಲಿ ಕಂಟೆಂಟ್ ಹಾಕಿ ವಾಟ್ಸ್ಆ್ಯಪ್ ಫೇಸ್ಬುಕ್ ನಾಯಕನಾಗಬಹುದು. ಜನನಾಯಕನಾಗಲು ಸಾಧ್ಯವಿಲ್ಲ’ ಎಂದರು.</p><p>ರಾಜಕೀಯ ಕ್ಷೇತ್ರಕ್ಕೆ ಉತ್ತಮ ವ್ಯಕ್ತಿಗಳ ಪ್ರವೇಶದ ಅಗತ್ಯ ಇದೆ. ರಾಜಕೀಯ ಕಡೆಗಣಿಸುವ ಕ್ಷೇತ್ರ ಅಲ್ಲ. ರಾಜಕೀಯಕ್ಕೆ ಪ್ರವೇಶ ಮಾಡುವವರಿಗೆ ವಿಷಯ ಜ್ಞಾನ ಹಾಗೂ ಆತ್ಮ ವಿಶ್ವಾಸ ಮುಖ್ಯ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ಕಾಡು ನಾಶದಿಂದ ಆನೆಗಳು ನಡಿಗೆ ಬರುತ್ತಿವೆ. ಆನೆ ಹಾವಳಿಯಿಂದ ಇತ್ತೀಚೆಗೆ ಇಬ್ಬರು ಮೃತಪಟ್ಟಿದ್ದಾರೆ, ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು...’ </p>.<p>ಹೀಗೆ ಆನೆ ಮಾನವ ಸಂಘರ್ಷದ ವಿಷಯ ಪ್ರಸ್ತಾಪವಾಗಿದ್ದು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲೆ ವಿಭಾಗದ ಯುವ ಸಂಸತ್ ಸ್ಪರ್ಧೆಯಲ್ಲಿ.</p>.<p>ವಿರೋಧ ಪಕ್ಷದ ಸಾಲಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೊಬ್ಬರು ವಿಷಯ ಪ್ರಸ್ತಾಪಿಸಿ, ‘ಶೃಂಗೇರಿ ಬಳಿ ಇತ್ತೀಚೆಗೆ ಇಬ್ಬರ ಪ್ರಾಣವನ್ನು ಕಾಡಾನೆ ಬಲಿ ತೆಗೆದುಕೊಂಡಿದೆ. ಇದಕ್ಕೆ ಸರ್ಕಾರವೇ ಹೊಣೆ. ಆನೆ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಆಡಳಿತ ಪಕ್ಷದ ಸಾಲಿನಲ್ಲಿ ಕುಳಿತಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಕೂಡ ಇದೇ ವಿಷಯ ಪ್ರಾಸ್ತಾಪಿಸಿದರು. ಕಾಡು ನಾಶದಿಂದ ಆನೆ ಸೇರಿ ಕಾಡುಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಕಾಡು ರಕ್ಷಣೆಯಾಗಬೇಕು, ಕಾಡುಪ್ರಾಣಿಗಳೂ ಉಳಿಯಬೇಕು. ಕಾಡಂಚಿನಲ್ಲಿ ಇರುವ ಜನರ ರಕ್ಷಣೆಯೂ ಆಗಬೇಕು ಎಂದರು.</p>.<p>‘ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿಗಳು ಶಾಲೆಗೆ ಬರಲು ಸಾಧ್ಯವಾಗುತ್ತಿಲ್ಲ. ಶಿಕ್ಷಕರು ಸಹ ಸಮಯಕ್ಕೆ ಸರಿಯಾಗಿ ಶಾಲೆ–ಕಾಲೇಜುಗಳಿಗೆ ಬರಲು ಸಾಧ್ಯವಾಗದೆ ಪಾಠ–ಪ್ರವಚನಗಳಿಗೆ ತೊಂದರೆಯಾಗಿದೆ. ರಸ್ತೆ ಗುಂಡಿ ಮುಚ್ಚುವ ಕೆಲಸವೂ ಆರಂಭವಾಗಿಲ್ಲ’ ಎಂದು ಮತ್ತೊಬ್ಬ ವಿದ್ಯಾರ್ಥಿನಿ ಹೇಳಿದರು.</p>.<p>ಬಸ್ಗಳ ಸಂಖ್ಯೆ ಕಡಿಮೆ ಇರುವುದರಿಂದ ಗ್ರಾಮೀಣ ಪ್ರದೇಶಕ್ಕೆ ಸೂಕ್ತ ಬಸ್ ವ್ಯವಸ್ಥೆ ಇಲ್ಲ. ವಿದ್ಯಾರ್ಥಿಗಳಿಗೆ ಐದು ವರ್ಷಗಳಿಂದ ಸೈಕಲ್ ನೀಡುವುದನ್ನು ನಿಲ್ಲಿಸಲಾಗಿದೆ. ಈ ಎಲ್ಲಾ ಕಾರಣಗಳಿಂದ ವಿದ್ಯಾರ್ಥಿಗಳು ಶಾಲೆಗೆ ಬರುವುದು ಕಷ್ಟವಾಗಿದೆ ಎಂದರು.</p>.<p>‘ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಲಾಗಿದೆ. ಮಳೆಗಾಲ ಮುಗಿದ ಕೂಡಲೇ ಕಾಮಗಾರಿ ಆರಂಭವಾಗಲಿದೆ. ಸೈಕಲ್ ಕೂಡ ನೀಡಲಾಗುತ್ತಿದೆ. ಕೆಲವೆಡೆ ಬಸ್ ಸೌಕರ್ಯವನ್ನೂ ಕಲ್ಪಿಸಲಾಗಿದೆ. ಇದು ವಿರೋಧ ಪಕ್ಷದವರ ಗಮನಕ್ಕೆ ಬಂದಿಲ್ಲ ಎನ್ನಿಸುತ್ತದೆ’ ಎಂಬ ಉತ್ತರವನ್ನು ಆಡಳಿತ ಪಕ್ಷದವರು ನೀಡಿದರು.</p>.<p>ಬಸ್ಗಳ್ನು ಖರೀದಿಸಿ ಹೆಚ್ಚುವರಿ ಬಸ್ ಸೌಕರ್ಯ ಕಲ್ಪಿಸುವ ಸಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಸಾರಿಗೆ ಸಚಿವರ ಸ್ಥಾನದಲ್ಲಿದ್ದ ವಿದ್ಯಾರ್ಥಿ ಉತ್ತರ ನೀಡಿದರು.</p>.<p>ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸೇರಿ ಮೂಲಸೌಕರ್ಯ ಇಲ್ಲ. ಸರಿಪಡಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಮತ್ತೊಬ್ಬ ವಿದ್ಯಾರ್ಥಿನಿ ಪ್ರಶ್ನಿಸಿದರು.</p>.<p>‘ಶಾಲೆಗಳಲ್ಲಿ ಶೌಚಾಲಯ ಸೇರಿ ಎಲ್ಲಾ ಸೌಕರ್ಯಗಳನ್ನು ನೀಡಲಾಗಿದೆ. ಯಾವ ಶಾಲೆಯಲ್ಲಿ ಸಮಸ್ಯೆ ಇದೆ ಎಂಬುದನ್ನು ನಿಖರವಾಗಿ ತಿಳಿಸಿದರೆ ಅಧಿಕಾರಿಗಳನ್ನು ಕಳುಹಿಸಿ ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಆಡಳಿತ ಪಕ್ಷದ ಸಾಲಿನಲ್ಲಿದ್ದ ವಿದ್ಯಾರ್ಥಿಗಳು ಸಮರ್ಥಿಸಿಕೊಂಡರು.</p>.<p>ಯಾವ ಕಲಾಪಗಳಿಗೂ ಕಡಿಮೆ ಇಲ್ಲ ಎಂಬಂತೆ ಜಿಲ್ಲೆಯ ವರ್ತಮಾನದ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಯುವ ಸಂಸತ್ನಲ್ಲಿ ಪ್ರಸ್ತಾಪಿಸಿದರು. ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಗದಿರುವ ಕುರಿತು, ಬುಡಕಟ್ಟು ಜನರಿಗೆ ಬಿಪಿಎಲ್ ಕಾರ್ಡ್ ಸೌಲಭ್ಯ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಚರ್ಚೆ ನಡೆಸಿದರು.</p>.<p>ಕಳಸಾಪುರ ಕರ್ನಾಟಕ ಪಬ್ಲಿಕ್ ಶಾಲೆಯ(ಕೆಪಿಎಸ್) ಸಿಂಚನಾ ಆರ್. ಪ್ರಕಾಶ್ ಮತ್ತು ಗುಬ್ಬಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಗಗನ್ ನಾಯ್ಕ್ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ಆಯ್ಕೆಯಾದರು.</p>.<p>ಯುವ ಸಂಸತ್ ಸ್ಪರ್ಧೆಯ ನೂಡಲ್ ಅಧಿಕಾರಿ ಕೆ.ಜಿ. ಕಾಂತರಾಜ್, ಶಿಕ್ಷಣಾಕಾರಿ ನಾಗರಾಜ್, ಯುವ ಸಂಸತ್ ಸ್ಪರ್ಧೆ ಸಮಿತಿಯ ಸದಸ್ಯ ಎಸ್.ಆರ್. ಸತೀಶ್, ಮಹದೇವಪ್ಪ ಕುಂದರಗಿ, ಲಕ್ಷ್ಮಣ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಜಿ. ನೀಲಕಂಠಪ್ಪ ಇದ್ದರು. </p>.<p><strong>‘ನಾಯಕನಾಗಲು ಅಡ್ಡದಾರಿ ಇಲ್ಲ’</strong></p><p>‘ನಾಯಕನಾಗಲು ಅಡ್ಡದಾರಿ ಇಲ್ಲ. ಜನ ಪರವಾದ ಕೆಲಸಗಳಿಂದ ಮಾತ್ರ ನಾಯಕನಾಗಲು ಸಾಧ್ಯ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.</p><p>‘ಡೊನೇಷನ್ ನೀಡಿದರೆ ದಾನಿಗಳಾಗಬಹುದು. ನಾಯಕನಾಗಲು ಸಾಧ್ಯವಿಲ್ಲ. ಫ್ಲೆಕ್ಸ್ ಹಾಕಿ ಸಾಮಾಜಿಕ ಮಾಧ್ಯಮಗಳಲ್ಲಿ ಕಂಟೆಂಟ್ ಹಾಕಿ ವಾಟ್ಸ್ಆ್ಯಪ್ ಫೇಸ್ಬುಕ್ ನಾಯಕನಾಗಬಹುದು. ಜನನಾಯಕನಾಗಲು ಸಾಧ್ಯವಿಲ್ಲ’ ಎಂದರು.</p><p>ರಾಜಕೀಯ ಕ್ಷೇತ್ರಕ್ಕೆ ಉತ್ತಮ ವ್ಯಕ್ತಿಗಳ ಪ್ರವೇಶದ ಅಗತ್ಯ ಇದೆ. ರಾಜಕೀಯ ಕಡೆಗಣಿಸುವ ಕ್ಷೇತ್ರ ಅಲ್ಲ. ರಾಜಕೀಯಕ್ಕೆ ಪ್ರವೇಶ ಮಾಡುವವರಿಗೆ ವಿಷಯ ಜ್ಞಾನ ಹಾಗೂ ಆತ್ಮ ವಿಶ್ವಾಸ ಮುಖ್ಯ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>