<p>ಆಲ್ದೂರು: ಸಮೀಪದ ಅಡ್ಡಮಕ್ಕಿ ಗ್ರಾಮದಲ್ಲಿ ಸೋಮವಾರ ಸಬ್ ಇನ್ಸ್ಪೆಕ್ಟರ್ ರವಿ ಜಿ.ಎ ನೇತೃತ್ವದಲ್ಲಿ ಕಾನೂನು ಅರಿವು ಮತ್ತು ಸಾರ್ವಜನಿಕ ಸಭೆ ನಡೆಯಿತು.</p>.<p>ಅಡ್ಡಮಕ್ಕಿ ಮತ್ತು ಹರವಿನಗಂಡಿ ಪಾಳ್ಯದ ಗ್ರಾಮಸ್ಥರ ನಡುವೆ ಗಣಪತಿ ಉತ್ಸವ ಆಯೋಜನೆಯ ಜಾಗದ ಕುರಿತು ಇದ್ದ ಗೊಂದಲ ಬಗೆಹರಿಸಿಕೊಳ್ಳುವಂತೆ ಸಭೆಯಲ್ಲಿ ಸಲಹೆ ನೀಡಲಾಯಿತು.</p>.<p>ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದು ಅಶಾಂತಿಯ ವಾತಾವರಣ ಸೃಷ್ಟಿಸುವವರ ವಿರುದ್ಧ ಪ್ರಕರಣ ದಾಖಲಿಸ ಲಾಗುವುದು ಎಂದು ಸಬ್ ಇನ್ಸ್ಪೆಕ್ಟರ್ ರವಿ ಜಿ.ಎ ಎಚ್ಚರಿಕೆ ನೀಡಿದರು.</p>.<p>ಕೆಲವು ಮನೆ ಮತ್ತು ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಗ್ರಾಮಸ್ಥರು ದೂರು ನೀಡಿದರು. ಮಾರಾಟ ಮಾಡುವವರ ಕುರಿತು ಸ್ಪಷ್ಟ ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.</p>.<p>ಕಾನೂನು ಸೌಲಭ್ಯ, ಪೊಕ್ಸೋ ಪ್ರಕರಣ, ತುರ್ತು ಸಂದರ್ಭ 112ರ ಸಹಾಯವಾಣಿ ಕುರಿತ ಮಾಹಿತಿ ನೀಡಲಾಯಿತು. ಎಎಸ್ಐಗಳಾದ ಸತೀಶ್ ನಾಯಕ್, ಪ್ರಸನ್ನ, ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-126-1787319047</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲ್ದೂರು: ಸಮೀಪದ ಅಡ್ಡಮಕ್ಕಿ ಗ್ರಾಮದಲ್ಲಿ ಸೋಮವಾರ ಸಬ್ ಇನ್ಸ್ಪೆಕ್ಟರ್ ರವಿ ಜಿ.ಎ ನೇತೃತ್ವದಲ್ಲಿ ಕಾನೂನು ಅರಿವು ಮತ್ತು ಸಾರ್ವಜನಿಕ ಸಭೆ ನಡೆಯಿತು.</p>.<p>ಅಡ್ಡಮಕ್ಕಿ ಮತ್ತು ಹರವಿನಗಂಡಿ ಪಾಳ್ಯದ ಗ್ರಾಮಸ್ಥರ ನಡುವೆ ಗಣಪತಿ ಉತ್ಸವ ಆಯೋಜನೆಯ ಜಾಗದ ಕುರಿತು ಇದ್ದ ಗೊಂದಲ ಬಗೆಹರಿಸಿಕೊಳ್ಳುವಂತೆ ಸಭೆಯಲ್ಲಿ ಸಲಹೆ ನೀಡಲಾಯಿತು.</p>.<p>ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದು ಅಶಾಂತಿಯ ವಾತಾವರಣ ಸೃಷ್ಟಿಸುವವರ ವಿರುದ್ಧ ಪ್ರಕರಣ ದಾಖಲಿಸ ಲಾಗುವುದು ಎಂದು ಸಬ್ ಇನ್ಸ್ಪೆಕ್ಟರ್ ರವಿ ಜಿ.ಎ ಎಚ್ಚರಿಕೆ ನೀಡಿದರು.</p>.<p>ಕೆಲವು ಮನೆ ಮತ್ತು ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಗ್ರಾಮಸ್ಥರು ದೂರು ನೀಡಿದರು. ಮಾರಾಟ ಮಾಡುವವರ ಕುರಿತು ಸ್ಪಷ್ಟ ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.</p>.<p>ಕಾನೂನು ಸೌಲಭ್ಯ, ಪೊಕ್ಸೋ ಪ್ರಕರಣ, ತುರ್ತು ಸಂದರ್ಭ 112ರ ಸಹಾಯವಾಣಿ ಕುರಿತ ಮಾಹಿತಿ ನೀಡಲಾಯಿತು. ಎಎಸ್ಐಗಳಾದ ಸತೀಶ್ ನಾಯಕ್, ಪ್ರಸನ್ನ, ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-126-1787319047</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>