<p>ಆಲ್ದೂರು: ಸಮೀಪದ ಹಳೆಯ ಫಾರೆಸ್ಟ್ ಗೇಟ್ ವೃತ್ತದಿಂದ ವಗರ್ ರಸ್ತೆ ವಾರ್ಡ್ ಮತ್ತು ದೋಣಗುಡಿಗೆ ಕುಂದೂರು ವರೆಗಿನ 13 ಕಿ.ಮೀ ರಸ್ತೆಯ ಡಾಂಬರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಸಂಚಾರ ದುಸ್ತರವಾಗಿದೆ.</p>.<p>2013- 14ರಲ್ಲಿ ಈ ರಸ್ತೆಯ ಡಾಂಬರೀಕರಣ ಮತ್ತು 2018ರಲ್ಲಿ ಗುಂಡಿಗಳಿಗೆ ತೇಪೆ ಕಾಮಗಾರಿ ನಡೆದಿತ್ತು. ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟಿಪ್ಪರ್ ಲಾರಿಗಳು ಓಡಾಡುವುದರಿಂದ 11 ವರ್ಷಗಳಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಮುಸ್ತಫ ಶಾಸಕಿ ನಯನಾ ಮೋಟಮ್ಮ ಅವರನ್ನು ಆಗ್ರಹಿಸಿದರು.</p>.<p>ಟಿಪ್ಪರ್ ಲಾರಿಗಳ ಓಡಾಟದಿಂದ ದೂಳಿನ ಸಮಸ್ಯೆ ಹೆಚ್ಚಾಗಿದೆ. ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರು ಜೀವ ಭಯದಲ್ಲೇ ವಾಹನ ಚಲಾಯಿಸಬೇಕಾದ ಸ್ಥಿತಿ ಇದೆ. ಮಳೆ ಬಂದಾಗ ರಸ್ತೆಯಲ್ಲೇ ನೀರು ಹರಿಯುತ್ತಿದ್ದು, ರಸ್ತೆ ಕಾಣದಂತಾಗುತ್ತದೆ ಎಂದು ಸ್ಥಳೀಯ ಹರೀಶ್ ತಿಳಿಸಿದರು.</p>.<p>ರಸ್ತೆ ಪಕ್ಕದಲ್ಲಿ ಚರಂಡಿ ಇಲ್ಲದೆ ಬೇಗನೆ ರಸ್ತೆ ಹದಗೆಟ್ಟಿದೆ. ರಸ್ತೆ ಕಾಮಗಾರಿ ನಡೆಸುವುದರ ಜೊತೆಗೆ ಎರಡೂ ಬದಿಯಲ್ಲಿ ಚರಂಡಿ ನಿರ್ಮಿಸಬೇಕು ಎಂದು ದೋಣಗುಡಿಗೆ ರಾಜೇಶ್ ಒತ್ತಾಯಿಸಿದರು.</p>.<p>ಮುಖ್ಯಮಂತ್ರಿಯ ಮೂಲಸೌಕರ್ಯ ವಿಶೇಷ ಅನುದಾನದಿಂದ ಆಲ್ದೂರು ವಗರ್ ರಸ್ತೆಯ ಕುಂದೂರುವರೆಗಿನ 13 ಕಿ.ಮೀ. ಸಂಪರ್ಕ ರಸ್ತೆಗೆ ₹4 ಕೋಟಿ ಅನುದಾನ ಒದಗಿಸಲಾಗಿದ್ದು, ತೀವ್ರವಾಗಿ ಹದಗೆಟ್ಟಿರುವ ರಸ್ತೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಆಗಲಿದೆ. ಕಾವೇರಿ ನೀರಾವರಿ ನಿಗಮದಿಂದ ಸಾರಳ್ಳಿ ಸೇತುವೆ ನಿರ್ಮಿಸಲು ₹2.5 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಶಾಸಕಿ ನಯನಾ ಮೋಟಮ್ಮ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-126-1655598901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲ್ದೂರು: ಸಮೀಪದ ಹಳೆಯ ಫಾರೆಸ್ಟ್ ಗೇಟ್ ವೃತ್ತದಿಂದ ವಗರ್ ರಸ್ತೆ ವಾರ್ಡ್ ಮತ್ತು ದೋಣಗುಡಿಗೆ ಕುಂದೂರು ವರೆಗಿನ 13 ಕಿ.ಮೀ ರಸ್ತೆಯ ಡಾಂಬರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಸಂಚಾರ ದುಸ್ತರವಾಗಿದೆ.</p>.<p>2013- 14ರಲ್ಲಿ ಈ ರಸ್ತೆಯ ಡಾಂಬರೀಕರಣ ಮತ್ತು 2018ರಲ್ಲಿ ಗುಂಡಿಗಳಿಗೆ ತೇಪೆ ಕಾಮಗಾರಿ ನಡೆದಿತ್ತು. ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟಿಪ್ಪರ್ ಲಾರಿಗಳು ಓಡಾಡುವುದರಿಂದ 11 ವರ್ಷಗಳಲ್ಲಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಮುಸ್ತಫ ಶಾಸಕಿ ನಯನಾ ಮೋಟಮ್ಮ ಅವರನ್ನು ಆಗ್ರಹಿಸಿದರು.</p>.<p>ಟಿಪ್ಪರ್ ಲಾರಿಗಳ ಓಡಾಟದಿಂದ ದೂಳಿನ ಸಮಸ್ಯೆ ಹೆಚ್ಚಾಗಿದೆ. ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರು ಜೀವ ಭಯದಲ್ಲೇ ವಾಹನ ಚಲಾಯಿಸಬೇಕಾದ ಸ್ಥಿತಿ ಇದೆ. ಮಳೆ ಬಂದಾಗ ರಸ್ತೆಯಲ್ಲೇ ನೀರು ಹರಿಯುತ್ತಿದ್ದು, ರಸ್ತೆ ಕಾಣದಂತಾಗುತ್ತದೆ ಎಂದು ಸ್ಥಳೀಯ ಹರೀಶ್ ತಿಳಿಸಿದರು.</p>.<p>ರಸ್ತೆ ಪಕ್ಕದಲ್ಲಿ ಚರಂಡಿ ಇಲ್ಲದೆ ಬೇಗನೆ ರಸ್ತೆ ಹದಗೆಟ್ಟಿದೆ. ರಸ್ತೆ ಕಾಮಗಾರಿ ನಡೆಸುವುದರ ಜೊತೆಗೆ ಎರಡೂ ಬದಿಯಲ್ಲಿ ಚರಂಡಿ ನಿರ್ಮಿಸಬೇಕು ಎಂದು ದೋಣಗುಡಿಗೆ ರಾಜೇಶ್ ಒತ್ತಾಯಿಸಿದರು.</p>.<p>ಮುಖ್ಯಮಂತ್ರಿಯ ಮೂಲಸೌಕರ್ಯ ವಿಶೇಷ ಅನುದಾನದಿಂದ ಆಲ್ದೂರು ವಗರ್ ರಸ್ತೆಯ ಕುಂದೂರುವರೆಗಿನ 13 ಕಿ.ಮೀ. ಸಂಪರ್ಕ ರಸ್ತೆಗೆ ₹4 ಕೋಟಿ ಅನುದಾನ ಒದಗಿಸಲಾಗಿದ್ದು, ತೀವ್ರವಾಗಿ ಹದಗೆಟ್ಟಿರುವ ರಸ್ತೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಆಗಲಿದೆ. ಕಾವೇರಿ ನೀರಾವರಿ ನಿಗಮದಿಂದ ಸಾರಳ್ಳಿ ಸೇತುವೆ ನಿರ್ಮಿಸಲು ₹2.5 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಶಾಸಕಿ ನಯನಾ ಮೋಟಮ್ಮ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-126-1655598901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>