<p>ಚಿಕ್ಕಮಗಳೂರು: ನಗರದ ಅಂಬೇಡ್ಕರ್ ಬೀದಿಯಲ್ಲಿನ ಶಾಂತಿನಗರ ಬಡಾವಣೆಯಲ್ಲಿ ಖಾಸಗಿಯವರು ಒತ್ತುವರಿ ಮಾಡಿದ್ದ ಜಾಗವನ್ನು ಗುರುವಾರ ತೆರವುಗೊಳಿಸಲಾಯಿತು. ಅಂಬೇಡ್ಕರ್ ಭವನ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಜಾಗ ನಿಗದಿ ಮಾಡುವ ಹಲವು ವರ್ಷಗಳ ಹೋರಾಟಕ್ಕೆ ಫಲ ದೊರೆತಿದೆ.</p>.<p>ಸರ್ವೆ ನಂಬರ್ 54, ಖಾತೆ ಸಂಖ್ಯೆ 9999ರಲ್ಲಿ ಸರ್ಕಾರಿ ಜಾಗ ಒತ್ತುವರಿಯಾಗಿತ್ತು. ಒತ್ತುವರಿ ಗುರುತಿಸಿದ್ದ ಅಧಿಕಾರಿಗಳು, ತೆರವುಗೊಳಿಸಲು ಆದೇಶಿಸಿದ್ದರು. ಆದರೂ, ತೆರವು ಕಾರ್ಯ ನನೆಗುದಿಗೆ ಬಿದ್ದಿತ್ತು, ದಲಿತ ಜನಸೇನಾ ಕಾರ್ಯಕರ್ತರ ಒತ್ತಾಯದ ಮೇರೆಗೆ ಗುರುವಾರ ಮಾಡಲಾಯಿತು.</p>.<p>ಪೊಲೀಸ್ ರಕ್ಷಣೆಯಲ್ಲಿ ಕಂದಾಯ ಇಲಾಖೆ ಮತ್ತು ನಗರಸಭೆ ಸಿಬ್ಬಂದಿ ತೆರವು ಮಾಡಿದರು. ಈ ಸಂದರ್ಭದಲ್ಲಿ ಸಮಯಾವಕಾಶ ಕೇಳಿದ ಕಾಫಿ ಕ್ಯೂರಿಂಗ್ ಆಡಳಿತ ಮಂಡಳಿ, ತಾವೇ ತೆರವುಗೊಳಿಸುವುದಾಗಿ ತಿಳಿಸಿದರು. ಆದರೆ, ಸ್ಥಳೀಯರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಇದರಿಂದ ಸ್ಥಳೀಯರು ಹಾಗೂ ಕಾಫಿ ಕ್ಯೂರಿಂಗ್ ಆಡಳಿತ ಮಂಡಳಿಯವರ ನಡುವೆ ವಾಗ್ವಾದ ನಡೆಯಿತು. ಪೊಲೀಸರು ಎರಡು ಕಡೆಯವರ ಮನವೊಲಿಸಿ ತೆರವು ಕಾರ್ಯಾಚರಣೆ ನಡೆಸಿದರು.</p>.<p>ಹಲವು ವರ್ಷಗಳ ನಮ್ಮ ಬೇಡಿಕೆಗೆ ಇಂದು ನ್ಯಾಯ ದೊರಕಿದೆ. ಈ ಜಾಗ ಬಡವರಿಗೆ ಉಪಯೋಗವಾಗಲಿದೆ ಎಂದು ದಲಿತ ಜನ ಸೇನಾ ಜಿಲ್ಲಾ ಘಟಕ ಅಧ್ಯಕ್ಷ ಅನಿಲ್ ಆನಂದ್ ಹೇಳಿದರು. ತೆರವು ಕಾರ್ಯಾಚರಣೆ ಬಳಿಕ ಸ್ಥಳೀಯರ ಜಯಘೋಷ ಮೊಳಗಿಸಿ ಸಂಭ್ರಮಿಸಿದರು.</p>.<p>ತಾಲ್ಲೂಕು ಕಚೇರಿ ಕಂದಾಯ ಅಧಿಕಾರಿ ಸಂತೋಷ್, ಗ್ರಾಮ ಆಡಳಿತಾಧಿಕಾರಿ ಚೇತನ್, ದೊರೆ, ನಗರಸಭೆ ಸಿಬ್ಬಂದಿ ಮುರುಗೇಶ್, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಭಯ್ ಪ್ರಕಾಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-126-910502127</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ನಗರದ ಅಂಬೇಡ್ಕರ್ ಬೀದಿಯಲ್ಲಿನ ಶಾಂತಿನಗರ ಬಡಾವಣೆಯಲ್ಲಿ ಖಾಸಗಿಯವರು ಒತ್ತುವರಿ ಮಾಡಿದ್ದ ಜಾಗವನ್ನು ಗುರುವಾರ ತೆರವುಗೊಳಿಸಲಾಯಿತು. ಅಂಬೇಡ್ಕರ್ ಭವನ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಜಾಗ ನಿಗದಿ ಮಾಡುವ ಹಲವು ವರ್ಷಗಳ ಹೋರಾಟಕ್ಕೆ ಫಲ ದೊರೆತಿದೆ.</p>.<p>ಸರ್ವೆ ನಂಬರ್ 54, ಖಾತೆ ಸಂಖ್ಯೆ 9999ರಲ್ಲಿ ಸರ್ಕಾರಿ ಜಾಗ ಒತ್ತುವರಿಯಾಗಿತ್ತು. ಒತ್ತುವರಿ ಗುರುತಿಸಿದ್ದ ಅಧಿಕಾರಿಗಳು, ತೆರವುಗೊಳಿಸಲು ಆದೇಶಿಸಿದ್ದರು. ಆದರೂ, ತೆರವು ಕಾರ್ಯ ನನೆಗುದಿಗೆ ಬಿದ್ದಿತ್ತು, ದಲಿತ ಜನಸೇನಾ ಕಾರ್ಯಕರ್ತರ ಒತ್ತಾಯದ ಮೇರೆಗೆ ಗುರುವಾರ ಮಾಡಲಾಯಿತು.</p>.<p>ಪೊಲೀಸ್ ರಕ್ಷಣೆಯಲ್ಲಿ ಕಂದಾಯ ಇಲಾಖೆ ಮತ್ತು ನಗರಸಭೆ ಸಿಬ್ಬಂದಿ ತೆರವು ಮಾಡಿದರು. ಈ ಸಂದರ್ಭದಲ್ಲಿ ಸಮಯಾವಕಾಶ ಕೇಳಿದ ಕಾಫಿ ಕ್ಯೂರಿಂಗ್ ಆಡಳಿತ ಮಂಡಳಿ, ತಾವೇ ತೆರವುಗೊಳಿಸುವುದಾಗಿ ತಿಳಿಸಿದರು. ಆದರೆ, ಸ್ಥಳೀಯರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.</p>.<p>ಇದರಿಂದ ಸ್ಥಳೀಯರು ಹಾಗೂ ಕಾಫಿ ಕ್ಯೂರಿಂಗ್ ಆಡಳಿತ ಮಂಡಳಿಯವರ ನಡುವೆ ವಾಗ್ವಾದ ನಡೆಯಿತು. ಪೊಲೀಸರು ಎರಡು ಕಡೆಯವರ ಮನವೊಲಿಸಿ ತೆರವು ಕಾರ್ಯಾಚರಣೆ ನಡೆಸಿದರು.</p>.<p>ಹಲವು ವರ್ಷಗಳ ನಮ್ಮ ಬೇಡಿಕೆಗೆ ಇಂದು ನ್ಯಾಯ ದೊರಕಿದೆ. ಈ ಜಾಗ ಬಡವರಿಗೆ ಉಪಯೋಗವಾಗಲಿದೆ ಎಂದು ದಲಿತ ಜನ ಸೇನಾ ಜಿಲ್ಲಾ ಘಟಕ ಅಧ್ಯಕ್ಷ ಅನಿಲ್ ಆನಂದ್ ಹೇಳಿದರು. ತೆರವು ಕಾರ್ಯಾಚರಣೆ ಬಳಿಕ ಸ್ಥಳೀಯರ ಜಯಘೋಷ ಮೊಳಗಿಸಿ ಸಂಭ್ರಮಿಸಿದರು.</p>.<p>ತಾಲ್ಲೂಕು ಕಚೇರಿ ಕಂದಾಯ ಅಧಿಕಾರಿ ಸಂತೋಷ್, ಗ್ರಾಮ ಆಡಳಿತಾಧಿಕಾರಿ ಚೇತನ್, ದೊರೆ, ನಗರಸಭೆ ಸಿಬ್ಬಂದಿ ಮುರುಗೇಶ್, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಭಯ್ ಪ್ರಕಾಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-126-910502127</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>