<p>ಚಿಕ್ಕಮಗಳೂರು: ತಾಲ್ಲೂಕಿನ ಹೊಸಕೋಟೆ ಗ್ರಾಮದ ಸರ್ಕಾರಿ ಖಾಲಿ ಜಾಗದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ವೇಳೆ ಕೆಲವರು ಅಡ್ಡಿ ಪಡಿಸಿದ್ದಾರೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಸಂಸ ರಾಜ್ಯ ಸಮಿತಿ ಸದಸ್ಯ ಮರ್ಲೆ ಅಣ್ಣಯ್ಯ ಒತ್ತಾಯಿಸಿದರು.</p>.<p>ಅಂಬೇಡ್ಕರ್ ಭಾವಚಿತ್ರದೊಂದಿಗೆ ಜಯಂತಿ ಆಚರಿಸುತ್ತಿದ್ದಾಗ ಇದೇ ಗ್ರಾಮದ ಮೇಲ್ಜಾತಿಯವರು ಅಡ್ಡ ಬಂದಿದ್ದಾರೆ. ಕೆಲ ಯುವಕರು ಅಂಬೇಡ್ಕರ್ ಭಾವಚಿತ್ರಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುವಂತೆ ಪ್ರಚೋದಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ದೂರಿದರು.</p>.<p>ಸರ್ಕಾರಿ ಜಾಗದಲ್ಲಿ ಜಯಂತಿ ಆಚರಿಸಲು ಅವಕಾಶ ನೀಡಬಾರದು. ಬಹಿಷ್ಕಾರ ಹಾಕಬೇಕು ಎಂದು ನಿಂದಿಸಿದ್ದಾರೆ. ಭಾವಚಿತ್ರವನ್ನೂ ಹಾನಿ ಮಾಡಿದ್ದಾರೆ ಎಂದರು.</p>.<p>ನೀಲಿ ಬಾವುಟದಲ್ಲಿ ಅಂಬೇಡ್ಕರ್ ಭಾವಚಿತ್ರ ಇದ್ದುದನ್ನು ಕಿತ್ತು ಹಾಕಿದರು. ದೀಪದ ಕಂಬಗಳನ್ನು ಎತ್ತಿ ಬಿಸಾಕಿದರು ಮತ್ತು ಈ ಖಾಲಿ ಸರ್ಕಾರಿ ಜಾಗದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಬೇಡಿ ಎಂದು ಜಾತಿ ನಿಂದನೆ ಮಾಡಿದರು ಎಂದು ದೂರಿದರು.</p>.<p>ಅಂಬೇಡ್ಕರ್ ಜಯಂತಿ ಆಚರಣೆಗೆ ಅಡ್ಡಿಪಡಿಸಿ ಜಾತಿ ನಿಂದನೆ ಮಾಡಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ದಸಂಸ ಮುಖಂಡರಾದ ವೀರಭದ್ರಪ್ಪ, ರೇವಣ್ಣ, ಗಣೇಶ್, ಸಿದ್ದಯ್ಯ, ಆನಂದ, ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-126-614406167</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ತಾಲ್ಲೂಕಿನ ಹೊಸಕೋಟೆ ಗ್ರಾಮದ ಸರ್ಕಾರಿ ಖಾಲಿ ಜಾಗದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ವೇಳೆ ಕೆಲವರು ಅಡ್ಡಿ ಪಡಿಸಿದ್ದಾರೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಸಂಸ ರಾಜ್ಯ ಸಮಿತಿ ಸದಸ್ಯ ಮರ್ಲೆ ಅಣ್ಣಯ್ಯ ಒತ್ತಾಯಿಸಿದರು.</p>.<p>ಅಂಬೇಡ್ಕರ್ ಭಾವಚಿತ್ರದೊಂದಿಗೆ ಜಯಂತಿ ಆಚರಿಸುತ್ತಿದ್ದಾಗ ಇದೇ ಗ್ರಾಮದ ಮೇಲ್ಜಾತಿಯವರು ಅಡ್ಡ ಬಂದಿದ್ದಾರೆ. ಕೆಲ ಯುವಕರು ಅಂಬೇಡ್ಕರ್ ಭಾವಚಿತ್ರಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುವಂತೆ ಪ್ರಚೋದಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ದೂರಿದರು.</p>.<p>ಸರ್ಕಾರಿ ಜಾಗದಲ್ಲಿ ಜಯಂತಿ ಆಚರಿಸಲು ಅವಕಾಶ ನೀಡಬಾರದು. ಬಹಿಷ್ಕಾರ ಹಾಕಬೇಕು ಎಂದು ನಿಂದಿಸಿದ್ದಾರೆ. ಭಾವಚಿತ್ರವನ್ನೂ ಹಾನಿ ಮಾಡಿದ್ದಾರೆ ಎಂದರು.</p>.<p>ನೀಲಿ ಬಾವುಟದಲ್ಲಿ ಅಂಬೇಡ್ಕರ್ ಭಾವಚಿತ್ರ ಇದ್ದುದನ್ನು ಕಿತ್ತು ಹಾಕಿದರು. ದೀಪದ ಕಂಬಗಳನ್ನು ಎತ್ತಿ ಬಿಸಾಕಿದರು ಮತ್ತು ಈ ಖಾಲಿ ಸರ್ಕಾರಿ ಜಾಗದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಬೇಡಿ ಎಂದು ಜಾತಿ ನಿಂದನೆ ಮಾಡಿದರು ಎಂದು ದೂರಿದರು.</p>.<p>ಅಂಬೇಡ್ಕರ್ ಜಯಂತಿ ಆಚರಣೆಗೆ ಅಡ್ಡಿಪಡಿಸಿ ಜಾತಿ ನಿಂದನೆ ಮಾಡಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ದಸಂಸ ಮುಖಂಡರಾದ ವೀರಭದ್ರಪ್ಪ, ರೇವಣ್ಣ, ಗಣೇಶ್, ಸಿದ್ದಯ್ಯ, ಆನಂದ, ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-126-614406167</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>