<p>ಚಿಕ್ಕಮಗಳೂರು: ರಾಜ್ಯ ಸರ್ಕಾರ ಬಡವರ ಆರೋಗ್ಯ ಕಾಪಾಡಲು ಗ್ರಾಮೀಣ ಭಾಗದಲ್ಲಿ ಆಸ್ಪತ್ರೆಗಳನ್ನು ಆರಂಭಿಸುವ ಮಹತ್ವದ ಯೋಜನೆ ಕೈಗೊಂಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.</p>.<p>ಬಾಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಾಣೂರು ಶಿವಪುರ ಗ್ರಾಮದಲ್ಲಿ ₹65 ಲಕ್ಷ ವೆಚ್ಚದಲ್ಲಿ ಆಯುಷ್ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ತಲಾ ₹65 ಲಕ್ಷ ವೆಚ್ಚದಲ್ಲಿ 17 ಅಯುಷ್ ಆಸ್ಪತ್ರೆಗಳು ಮಂಜೂರು ಆಗಿವೆ. ಈಗಾಗಲೇ 7 ಆಸ್ಪತ್ರೆಗಳಿಗೆ ನಿವೇಶನ ಗುರುತಿಸಿ ಟೆಂಡರ್ ಕರೆಯಲಾಗಿದೆ. ಇನ್ನು ಉಳಿದ 10 ಆಸ್ಪತ್ರೆಗಳಿಗೆ ಜಾಗ ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು.</p>.<p>ಆಸ್ಪತ್ರೆ ಕಟ್ಟಡ ಗುಣಮಟ್ಟದಿಂದ ನಿರ್ಮಾಣವಾಗಬೇಕು. ನಿರ್ಮಾಣದ ಬಳಿಕ ಆಸ್ಪತ್ರೆಗೆ ಆಯುಷ್ ವೈದ್ಯರನ್ನು ನೇಮಕ ಮಾಡಲಾಗುವುದು. ಇದರಿಂದ ಚಿಕ್ಕಬಾಣೂರು, ಗುಬ್ಬಿಹಳ್ಳಿ, ಬ್ರಹ್ಮಸಮುದ್ರ, ಮಂಜೀಹಳ್ಳಿ ಮುಂತಾದ ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಗ್ರಾಮೀಣ ಭಾಗದ ಜನರು ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಅದೇ ರೀತಿ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.</p>.<p>ಬಯಲು ಭಾಗದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಭೆ ನಡೆದಿದ್ದು, ಅವಶ್ಯಕತೆ ಇರುವ ಕಡೆ ನೀರು ಪೂರೈಕೆಯಾಗಲಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಆಸ್ಪತ್ರೆಗೆ ನಿವೇಶನ ನೀಡಿರುವ ದಾನಿ ವಿಶ್ವನಾಥ್, ಗ್ರಾ.ಪಂ. ಸದಸ್ಯ ಉಮಾಕಾಂತ್, ಮಾಜಿ ಅಧ್ಯಕ್ಷ ಧನಂಜಯ್, ನಟೇಶ್, ಮಲ್ಲಿಕಾರ್ಜುನ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-126-2054532121</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ರಾಜ್ಯ ಸರ್ಕಾರ ಬಡವರ ಆರೋಗ್ಯ ಕಾಪಾಡಲು ಗ್ರಾಮೀಣ ಭಾಗದಲ್ಲಿ ಆಸ್ಪತ್ರೆಗಳನ್ನು ಆರಂಭಿಸುವ ಮಹತ್ವದ ಯೋಜನೆ ಕೈಗೊಂಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.</p>.<p>ಬಾಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬಾಣೂರು ಶಿವಪುರ ಗ್ರಾಮದಲ್ಲಿ ₹65 ಲಕ್ಷ ವೆಚ್ಚದಲ್ಲಿ ಆಯುಷ್ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ತಲಾ ₹65 ಲಕ್ಷ ವೆಚ್ಚದಲ್ಲಿ 17 ಅಯುಷ್ ಆಸ್ಪತ್ರೆಗಳು ಮಂಜೂರು ಆಗಿವೆ. ಈಗಾಗಲೇ 7 ಆಸ್ಪತ್ರೆಗಳಿಗೆ ನಿವೇಶನ ಗುರುತಿಸಿ ಟೆಂಡರ್ ಕರೆಯಲಾಗಿದೆ. ಇನ್ನು ಉಳಿದ 10 ಆಸ್ಪತ್ರೆಗಳಿಗೆ ಜಾಗ ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು.</p>.<p>ಆಸ್ಪತ್ರೆ ಕಟ್ಟಡ ಗುಣಮಟ್ಟದಿಂದ ನಿರ್ಮಾಣವಾಗಬೇಕು. ನಿರ್ಮಾಣದ ಬಳಿಕ ಆಸ್ಪತ್ರೆಗೆ ಆಯುಷ್ ವೈದ್ಯರನ್ನು ನೇಮಕ ಮಾಡಲಾಗುವುದು. ಇದರಿಂದ ಚಿಕ್ಕಬಾಣೂರು, ಗುಬ್ಬಿಹಳ್ಳಿ, ಬ್ರಹ್ಮಸಮುದ್ರ, ಮಂಜೀಹಳ್ಳಿ ಮುಂತಾದ ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.</p>.<p>ಗ್ರಾಮೀಣ ಭಾಗದ ಜನರು ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಅದೇ ರೀತಿ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.</p>.<p>ಬಯಲು ಭಾಗದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಭೆ ನಡೆದಿದ್ದು, ಅವಶ್ಯಕತೆ ಇರುವ ಕಡೆ ನೀರು ಪೂರೈಕೆಯಾಗಲಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಆಸ್ಪತ್ರೆಗೆ ನಿವೇಶನ ನೀಡಿರುವ ದಾನಿ ವಿಶ್ವನಾಥ್, ಗ್ರಾ.ಪಂ. ಸದಸ್ಯ ಉಮಾಕಾಂತ್, ಮಾಜಿ ಅಧ್ಯಕ್ಷ ಧನಂಜಯ್, ನಟೇಶ್, ಮಲ್ಲಿಕಾರ್ಜುನ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-126-2054532121</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>