<p><strong>ಚಿಕ್ಕಮಗಳೂರು:</strong> ತಾಲ್ಲೂಕಿನ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಉರುಸ್ ಮೆರವಣಿಗೆ ಬುಧವಾರ ಭಕ್ತಿ–ಭಾವದಿಂದ ನಡೆಯಿತು. ಒಳಗೆ ಪೂಜೆ ಮಾಡಲು ಅವಕಾಶ ನೀಡದ ಕಾರಣ ಗೇಟಿನ ಬಳಿಯೇ ಶಾ–ಖಾದ್ರಿ ಮತ್ತು ಇತರರು ಪ್ರತಿಭಟನಾತ್ಮಕ ಪ್ರಾರ್ಥನೆ ಸಲ್ಲಿಸಿದರು.</p><p>ಗಂಧವನ್ನು ಅತ್ತಿಗುಂಡಿಯಿಂದ ಮೆರವಣಿಗೆಯಲ್ಲಿ ಬಾಬಾಬುಡನ್ಗಿರಿಗೆ ಸಂಜೆ ತರಲಾಯಿತು. ಮೆರವಣಿಗೆಯುದ್ದಕ್ಕೂ ಭಕ್ತರು ಗೀತೆಗಳನ್ನು ಹಾಡಿದರು. ವಿವಿಧೆಡೆಯಿಂದ ಬಂದಿದ್ದ ಭಕ್ತರು, ಫಕೀರರು ಪಾಲ್ಗೊಂಡಿದ್ದರು. ಗಂಧವು ದರ್ಗಾದ ಗೇಟಿನ ಮುಂಭಾಗಕ್ಕೆ ತಲುಪುತ್ತಿದ್ದಂತೆ ಭಕ್ತರು ನಾಣ್ಯಗಳನ್ನು ಚಿಮ್ಮಿ ಹರಕೆ ಸಲ್ಲಿಸಿದರು. ಪ್ರವೇಶ ದ್ವಾರದ ಗೇಟಿನ ಬಳಿ ಬ್ಯಾರಿಕೇಡ್ಗಳನ್ನು ಅಳವಡಿಸಿ ಬಂದೋಬಸ್ತ್ ಮಾಡಲಾಗಿತ್ತು.</p><p>ಎಲ್ಲಾ ಭಕ್ತರಿಗೆ ದರ್ಗಾ ದರ್ಶನಕ್ಕೆ ಅವಕಾಶ ನೀಡಲಾಯಿತು. ದರ್ಗಾದಲ್ಲಿ ಪೂಜೆ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ನೀಡಲಿಲ್ಲ. ಶಾ ಖಾದ್ರಿ ಸೇರಿ ಹಲವರು ಗೇಟಿನ ಮುಂದೆಯೇ ಪ್ರಾರ್ಥನೆ ಸಲ್ಲಿಸಿದರು. ‘ಸುಪ್ರೀಂ ಕೋರ್ಟ್ ಆದೇಶ ಇದ್ದರೂ ಜಿಲ್ಲಾಡಳಿತ ಪಾಲನೆ ಮಾಡುತ್ತಿಲ್ಲ. ಇದನ್ನು ಖಂಡಿಸಿ ಗೇಟಿನ ಎದುರೇ ಪ್ರಾರ್ಥನೆ ಸಲ್ಲಿಸಿ ವಾಪಸ್ ಬಂದಿದ್ದೇವೆ’ ಎಂದು ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ತಾಲ್ಲೂಕಿನ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಉರುಸ್ ಮೆರವಣಿಗೆ ಬುಧವಾರ ಭಕ್ತಿ–ಭಾವದಿಂದ ನಡೆಯಿತು. ಒಳಗೆ ಪೂಜೆ ಮಾಡಲು ಅವಕಾಶ ನೀಡದ ಕಾರಣ ಗೇಟಿನ ಬಳಿಯೇ ಶಾ–ಖಾದ್ರಿ ಮತ್ತು ಇತರರು ಪ್ರತಿಭಟನಾತ್ಮಕ ಪ್ರಾರ್ಥನೆ ಸಲ್ಲಿಸಿದರು.</p><p>ಗಂಧವನ್ನು ಅತ್ತಿಗುಂಡಿಯಿಂದ ಮೆರವಣಿಗೆಯಲ್ಲಿ ಬಾಬಾಬುಡನ್ಗಿರಿಗೆ ಸಂಜೆ ತರಲಾಯಿತು. ಮೆರವಣಿಗೆಯುದ್ದಕ್ಕೂ ಭಕ್ತರು ಗೀತೆಗಳನ್ನು ಹಾಡಿದರು. ವಿವಿಧೆಡೆಯಿಂದ ಬಂದಿದ್ದ ಭಕ್ತರು, ಫಕೀರರು ಪಾಲ್ಗೊಂಡಿದ್ದರು. ಗಂಧವು ದರ್ಗಾದ ಗೇಟಿನ ಮುಂಭಾಗಕ್ಕೆ ತಲುಪುತ್ತಿದ್ದಂತೆ ಭಕ್ತರು ನಾಣ್ಯಗಳನ್ನು ಚಿಮ್ಮಿ ಹರಕೆ ಸಲ್ಲಿಸಿದರು. ಪ್ರವೇಶ ದ್ವಾರದ ಗೇಟಿನ ಬಳಿ ಬ್ಯಾರಿಕೇಡ್ಗಳನ್ನು ಅಳವಡಿಸಿ ಬಂದೋಬಸ್ತ್ ಮಾಡಲಾಗಿತ್ತು.</p><p>ಎಲ್ಲಾ ಭಕ್ತರಿಗೆ ದರ್ಗಾ ದರ್ಶನಕ್ಕೆ ಅವಕಾಶ ನೀಡಲಾಯಿತು. ದರ್ಗಾದಲ್ಲಿ ಪೂಜೆ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ನೀಡಲಿಲ್ಲ. ಶಾ ಖಾದ್ರಿ ಸೇರಿ ಹಲವರು ಗೇಟಿನ ಮುಂದೆಯೇ ಪ್ರಾರ್ಥನೆ ಸಲ್ಲಿಸಿದರು. ‘ಸುಪ್ರೀಂ ಕೋರ್ಟ್ ಆದೇಶ ಇದ್ದರೂ ಜಿಲ್ಲಾಡಳಿತ ಪಾಲನೆ ಮಾಡುತ್ತಿಲ್ಲ. ಇದನ್ನು ಖಂಡಿಸಿ ಗೇಟಿನ ಎದುರೇ ಪ್ರಾರ್ಥನೆ ಸಲ್ಲಿಸಿ ವಾಪಸ್ ಬಂದಿದ್ದೇವೆ’ ಎಂದು ಸೈಯದ್ ಗೌಸ್ ಮೊಹಿಯುದ್ದೀನ್ ಶಾ ಖಾದ್ರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>