<p>ಚಿಕ್ಕಮಗಳೂರು: ಭದ್ರಾ ಹಿನ್ನೀರಿನಲ್ಲಿ ರಸ್ತೆ ಮುಳುಗಿದ್ದ ಕಾರಣ, ಪರ್ಯಾಯವಾಗಿ ಸೇತುವೆ ನಿರ್ಮಿಸಬೇಕು ದಶಕಗಳ ಬೇಡಿಕೆ ಈಡೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೊಸ ಸೇತುವೆ ಲೋಕಾರ್ಪಣೆ ಮಾಡಲಿದ್ದಾರೆ.</p>.<p>ಭದ್ರಾ ಅಣೆಕಟ್ಟೆ ನಿರ್ಮಾಣಕ್ಕೂ ಮೊದಲು ತಾಲ್ಲೂಕು ಕೇಂದ್ರದಿಂದ ಹೊನ್ನೆಕೂಡಿಗೆ, ಹಂದೂರು, ಚಿನ್ನಕೂಡಿಗೆ, ಚಿಕ್ಕಂದೂರು ಮಾರ್ಗವಾಗಿ ನಾಗೇಸಾಲೂರು, ಬಿಳಾಲ್ ಕೊಪ್ಪ, ಕಲ್ಮನೆಯ ಮೂಲಕ ಭದ್ರಾನದಿಗೆ ಮತ್ತು ಹೆಬ್ಬೆ ಗ್ರಾಮದಲ್ಲಿದ್ದ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿತ್ತು.</p>.<p>ಅಣೆಕಟ್ಟೆ ನಿರ್ಮಾಣದ ಬಳಿಕ ಹಿನ್ನೀರು ಆವರಿಸಿ ಈ ಸಂಪರ್ಕ ಕಡಿದು ಹೋಯಿತು. ಇಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರು ಹಲವು ಬಾರಿ ಮನವಿ ಸಲ್ಲಿಸಿದ್ದರು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು 2016ರ ಜೂನ್ 3ರಂದು ಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಸೇತುವೆ ನಿರ್ಮಾಣಕ್ಕೆ ಅಂದಿನ ವಿಧಾನ ಪರಿಷತ್ ಸದಸ್ಯರಾಗಿದ್ದ ಎಂ. ಶ್ರೀನಿವಾಸ್ ಮನವಿ ಮಾಡಿದ್ದರು.</p>.<p>ಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಿದ್ದರಾಮಯ್ಯ ಆದೇಶ ನೀಡಿದ್ದರು. ತಾಂತ್ರಿಕ ಸಮಿತಿ ಸ್ಥಳಕ್ಕೆ ಭೇಟಿ ನೀಡಿ ಕ್ರಿಯಾಯೋಜನೆ ರೂಪಿಸಿ ₹20 ಕೋಟಿ ಬೇಕಾಗಲಿದೆ ಎಂದು ವರದಿ ನೀಡಿತ್ತು. ಅನುದಾನ ಒದಗಿಸಿದ್ದ ಸಿದ್ದರಾಮಯ್ಯ, 2017ರ ನ. 30ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ಪುನಃ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ₹34.85 ಕೋಟಿ ಅನುದಾನ ಬಿಡುಗಡೆಯಾಯಿತು. 2018ರಲ್ಲಿ ಆರಂಭವಾಗಿದ್ದ ಕಾಮಗಾರಿ 2021ರಲ್ಲಿ ಪೂರ್ಣಗೊಳ್ಳಬೇಕಿತ್ತು. ಸರ್ಕಾರದ ಬದಲಾವಣೆ, ಕೋವಿಡ್ ಮತ್ತಿತರ ಕಾರಣಗಳಿಂದ ಕಾಮಗಾರಿ ಕುಂಟುತ್ತ ಸಾಗಿತ್ತು. ಕಾಮಗಾರಿ ಮೊತ್ತ ಮತ್ತಷ್ಟು ಹೆಚ್ಚಾಗಿ ಒಟ್ಟು ₹38.50 ಕೋಟಿಯಲ್ಲಿ 504 ಮೀಟರ್ ಉದ್ದದ ಸೇತುವೆ ನಿರ್ಮಾಣಗೊಂಡಿದೆ.</p>.<p>ಹೊನ್ನೆಕೂಡಿಗೆ ಗ್ರಾಮದಿಂದ ಸುತ್ತಿ ಬಳಸಿ ಎನ್.ಆರ್.ಪುರ ತಲುಪಲು 20 ಕಿ.ಮೀ. ದೂರವಾಗುತ್ತಿತ್ತು. ಹೊಸ ಸೇತುವೆ ನಿರ್ಮಾಣದಿಂದ ಕ್ರಮಿಸುವ ಅಂತರ 5 ಕಿ.ಮೀ.ಗೆ ತಗ್ಗಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-51-1567852980</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಭದ್ರಾ ಹಿನ್ನೀರಿನಲ್ಲಿ ರಸ್ತೆ ಮುಳುಗಿದ್ದ ಕಾರಣ, ಪರ್ಯಾಯವಾಗಿ ಸೇತುವೆ ನಿರ್ಮಿಸಬೇಕು ದಶಕಗಳ ಬೇಡಿಕೆ ಈಡೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೊಸ ಸೇತುವೆ ಲೋಕಾರ್ಪಣೆ ಮಾಡಲಿದ್ದಾರೆ.</p>.<p>ಭದ್ರಾ ಅಣೆಕಟ್ಟೆ ನಿರ್ಮಾಣಕ್ಕೂ ಮೊದಲು ತಾಲ್ಲೂಕು ಕೇಂದ್ರದಿಂದ ಹೊನ್ನೆಕೂಡಿಗೆ, ಹಂದೂರು, ಚಿನ್ನಕೂಡಿಗೆ, ಚಿಕ್ಕಂದೂರು ಮಾರ್ಗವಾಗಿ ನಾಗೇಸಾಲೂರು, ಬಿಳಾಲ್ ಕೊಪ್ಪ, ಕಲ್ಮನೆಯ ಮೂಲಕ ಭದ್ರಾನದಿಗೆ ಮತ್ತು ಹೆಬ್ಬೆ ಗ್ರಾಮದಲ್ಲಿದ್ದ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿತ್ತು.</p>.<p>ಅಣೆಕಟ್ಟೆ ನಿರ್ಮಾಣದ ಬಳಿಕ ಹಿನ್ನೀರು ಆವರಿಸಿ ಈ ಸಂಪರ್ಕ ಕಡಿದು ಹೋಯಿತು. ಇಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರು ಹಲವು ಬಾರಿ ಮನವಿ ಸಲ್ಲಿಸಿದ್ದರು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು 2016ರ ಜೂನ್ 3ರಂದು ಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಸೇತುವೆ ನಿರ್ಮಾಣಕ್ಕೆ ಅಂದಿನ ವಿಧಾನ ಪರಿಷತ್ ಸದಸ್ಯರಾಗಿದ್ದ ಎಂ. ಶ್ರೀನಿವಾಸ್ ಮನವಿ ಮಾಡಿದ್ದರು.</p>.<p>ಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಿದ್ದರಾಮಯ್ಯ ಆದೇಶ ನೀಡಿದ್ದರು. ತಾಂತ್ರಿಕ ಸಮಿತಿ ಸ್ಥಳಕ್ಕೆ ಭೇಟಿ ನೀಡಿ ಕ್ರಿಯಾಯೋಜನೆ ರೂಪಿಸಿ ₹20 ಕೋಟಿ ಬೇಕಾಗಲಿದೆ ಎಂದು ವರದಿ ನೀಡಿತ್ತು. ಅನುದಾನ ಒದಗಿಸಿದ್ದ ಸಿದ್ದರಾಮಯ್ಯ, 2017ರ ನ. 30ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ಪುನಃ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ₹34.85 ಕೋಟಿ ಅನುದಾನ ಬಿಡುಗಡೆಯಾಯಿತು. 2018ರಲ್ಲಿ ಆರಂಭವಾಗಿದ್ದ ಕಾಮಗಾರಿ 2021ರಲ್ಲಿ ಪೂರ್ಣಗೊಳ್ಳಬೇಕಿತ್ತು. ಸರ್ಕಾರದ ಬದಲಾವಣೆ, ಕೋವಿಡ್ ಮತ್ತಿತರ ಕಾರಣಗಳಿಂದ ಕಾಮಗಾರಿ ಕುಂಟುತ್ತ ಸಾಗಿತ್ತು. ಕಾಮಗಾರಿ ಮೊತ್ತ ಮತ್ತಷ್ಟು ಹೆಚ್ಚಾಗಿ ಒಟ್ಟು ₹38.50 ಕೋಟಿಯಲ್ಲಿ 504 ಮೀಟರ್ ಉದ್ದದ ಸೇತುವೆ ನಿರ್ಮಾಣಗೊಂಡಿದೆ.</p>.<p>ಹೊನ್ನೆಕೂಡಿಗೆ ಗ್ರಾಮದಿಂದ ಸುತ್ತಿ ಬಳಸಿ ಎನ್.ಆರ್.ಪುರ ತಲುಪಲು 20 ಕಿ.ಮೀ. ದೂರವಾಗುತ್ತಿತ್ತು. ಹೊಸ ಸೇತುವೆ ನಿರ್ಮಾಣದಿಂದ ಕ್ರಮಿಸುವ ಅಂತರ 5 ಕಿ.ಮೀ.ಗೆ ತಗ್ಗಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-51-1567852980</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>