<p><strong>ಕಳಸ</strong>: ಕೊಳಮಗೆಯಲ್ಲಿ ಭದ್ರಾ ನದಿಗೆ ಪಿಕ್ಅಪ್ ವಾಹನ ಬಿದ್ದ ನಂತರ ಕಣ್ಮರೆ ಆಗಿರುವ ಯುವಕ ಶಮಂತ್ ಮನೆಗೆ ಶಾಸಕಿ ನಯನಾ ಮೋಟಮ್ಮ ಭಾನುವಾರ ಭೇಟಿ ನೀಡಿದರು.</p>.<p>ಶಮಂತ್ ಮೃತಪಟ್ಟಿರಬಹುದು ಎಂಬ ದುಃಖದಿಂದ ಅವರ ತಾಯಿ ರವಿಕಲಾ ಅವರೂ ಅದೇ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>ಗಣಪತಿಕಟ್ಟೆ ಪ್ರದೇಶದ ಅವರ ಮನೆಗೆ ಭೇಟಿ ನೀಡಿದ್ದ ನಯನಾ ಮೋಟಮ್ಮ ಶಮಂತ ಅವರ ತಂದೆ ರಮೇಶ್, ಅಣ್ಣ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.</p>.<p>ಶಮಂತ ಅವರ ಪತ್ತೆಗೆ ಮೂರು ದಿನಗಳಿಂದ ಸತತ ಪ್ರಯತ್ನ ನಡೆದಿದೆ ಎಂದು ಅವರು ಕುಟುಂಬಸ್ಥರಿಗೆ ತಿಳಿಸಿದರು.</p>.<p>ಶಮಂತನ ತಂದೆ ರಮೇಶ್, ನಮ್ಮ ಜಮೀನಿಗೆ ಹಕ್ಕುಪತ್ರ ಕೊಡಬೇಕು. ನಮ್ಮನ್ನು ಇಲ್ಲಿಂದ ಒಕ್ಕಲೆಬ್ಬಿಸಲು ಅನೇಕ ವರ್ಷಗಳಿಂದ ಪ್ರಯತ್ನ ನಡೆದಿದೆ ಎಂದು ಶಾಸಕಿಯ ಬಳಿ ದೂರಿದರು.</p>.<p>ಶಮಂತ ವಾಸವಿದ್ದ ಭೂಮಿ ಯಾವ ಬಗೆಯದು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ತಹಶೀಲ್ದಾರ್ ಕಾವ್ಯಾ ಅವರಿಗೆ ನಯನಾ ಸೂಚಿಸಿದರು. ಶಮಂತ ಅವರ ಪತ್ತೆ ಬಳಿಕ ಮನೆಯ ಇತರ ಸಮಸ್ಯೆಗೆ ಬಗ್ಗೆ ಗಮನಹರಿಸೋಣ ಎಂದೂ ಅವರು ಸಮಾಧಾನಪಡಿಸಿದರು.</p>.<p>ಹಳುವಳ್ಳಿ ಮತ್ತು ಬಾಳೆಹೊಳೆ ಬಳಿ ಎನ್ಡಿಆರ್ಎಫ್ ವತಿಯಿಂದ ಶಮಂತನಿಗೆ ನಡೆಯುತ್ತಿರುವ ಹುಡುಕಾಟವನ್ನು ಅವರು ಪರಿಶೀಲಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಕೆ.ಆರ್.ಪ್ರಭಾಕರ್, ರಾಜೇಂದ್ರ ಹೆಬ್ಬಾರ್, ವಿಶ್ವನಾಥ್, ಶ್ರೇಣಿಕ, ರಫೀಕ್, ವೀರೇಂದ್ರ, ಮಹೇಶ್ ಭಾಗವಹಿಸಿದ್ದರು.</p>.<p>ಕಳಸ ಆಸುಪಾಸಿನ ಭದ್ರಾ ನದಿಯಲ್ಲಿ ಅಗ್ನಿಶಾಮಕ ದಳ, ಬಾಳೆಹೊಳೆ ಮತ್ತು ಹಳುವಳ್ಳಿ ಆಸುಪಾಸಿನಲ್ಲಿ ಎನ್ಡಿಆರ್ಎಫ್ ತಂಡ ದಿನಿವಿಡೀ ಹುಡುಕಾಟ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ</strong>: ಕೊಳಮಗೆಯಲ್ಲಿ ಭದ್ರಾ ನದಿಗೆ ಪಿಕ್ಅಪ್ ವಾಹನ ಬಿದ್ದ ನಂತರ ಕಣ್ಮರೆ ಆಗಿರುವ ಯುವಕ ಶಮಂತ್ ಮನೆಗೆ ಶಾಸಕಿ ನಯನಾ ಮೋಟಮ್ಮ ಭಾನುವಾರ ಭೇಟಿ ನೀಡಿದರು.</p>.<p>ಶಮಂತ್ ಮೃತಪಟ್ಟಿರಬಹುದು ಎಂಬ ದುಃಖದಿಂದ ಅವರ ತಾಯಿ ರವಿಕಲಾ ಅವರೂ ಅದೇ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>ಗಣಪತಿಕಟ್ಟೆ ಪ್ರದೇಶದ ಅವರ ಮನೆಗೆ ಭೇಟಿ ನೀಡಿದ್ದ ನಯನಾ ಮೋಟಮ್ಮ ಶಮಂತ ಅವರ ತಂದೆ ರಮೇಶ್, ಅಣ್ಣ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.</p>.<p>ಶಮಂತ ಅವರ ಪತ್ತೆಗೆ ಮೂರು ದಿನಗಳಿಂದ ಸತತ ಪ್ರಯತ್ನ ನಡೆದಿದೆ ಎಂದು ಅವರು ಕುಟುಂಬಸ್ಥರಿಗೆ ತಿಳಿಸಿದರು.</p>.<p>ಶಮಂತನ ತಂದೆ ರಮೇಶ್, ನಮ್ಮ ಜಮೀನಿಗೆ ಹಕ್ಕುಪತ್ರ ಕೊಡಬೇಕು. ನಮ್ಮನ್ನು ಇಲ್ಲಿಂದ ಒಕ್ಕಲೆಬ್ಬಿಸಲು ಅನೇಕ ವರ್ಷಗಳಿಂದ ಪ್ರಯತ್ನ ನಡೆದಿದೆ ಎಂದು ಶಾಸಕಿಯ ಬಳಿ ದೂರಿದರು.</p>.<p>ಶಮಂತ ವಾಸವಿದ್ದ ಭೂಮಿ ಯಾವ ಬಗೆಯದು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ತಹಶೀಲ್ದಾರ್ ಕಾವ್ಯಾ ಅವರಿಗೆ ನಯನಾ ಸೂಚಿಸಿದರು. ಶಮಂತ ಅವರ ಪತ್ತೆ ಬಳಿಕ ಮನೆಯ ಇತರ ಸಮಸ್ಯೆಗೆ ಬಗ್ಗೆ ಗಮನಹರಿಸೋಣ ಎಂದೂ ಅವರು ಸಮಾಧಾನಪಡಿಸಿದರು.</p>.<p>ಹಳುವಳ್ಳಿ ಮತ್ತು ಬಾಳೆಹೊಳೆ ಬಳಿ ಎನ್ಡಿಆರ್ಎಫ್ ವತಿಯಿಂದ ಶಮಂತನಿಗೆ ನಡೆಯುತ್ತಿರುವ ಹುಡುಕಾಟವನ್ನು ಅವರು ಪರಿಶೀಲಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಕೆ.ಆರ್.ಪ್ರಭಾಕರ್, ರಾಜೇಂದ್ರ ಹೆಬ್ಬಾರ್, ವಿಶ್ವನಾಥ್, ಶ್ರೇಣಿಕ, ರಫೀಕ್, ವೀರೇಂದ್ರ, ಮಹೇಶ್ ಭಾಗವಹಿಸಿದ್ದರು.</p>.<p>ಕಳಸ ಆಸುಪಾಸಿನ ಭದ್ರಾ ನದಿಯಲ್ಲಿ ಅಗ್ನಿಶಾಮಕ ದಳ, ಬಾಳೆಹೊಳೆ ಮತ್ತು ಹಳುವಳ್ಳಿ ಆಸುಪಾಸಿನಲ್ಲಿ ಎನ್ಡಿಆರ್ಎಫ್ ತಂಡ ದಿನಿವಿಡೀ ಹುಡುಕಾಟ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>