<p><strong>ಚಿಕ್ಕಮಗಳೂರು:</strong> ಸಂವಿಧಾನದ ಬದಲಾವಣೆ ಕುರಿತು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರ ಇದ್ದ ಪೋಸ್ಟರ್ಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.</p><p>ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಂಗಳವಾರ ಬಿಜೆಪಿ ನಗರ ಮಂಡಲದಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು.</p><p>ಈ ವೇಳೆ ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹಿಸಲು ಕಾರ್ಯಕರ್ತರು ಮುಂದಾದರು. ಪೊಲೀಸರು ಇದಕ್ಕೆ ಅಡ್ಡಿಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.</p><p>ಕೆಲವರು ಬೇಲೂರು ರಸ್ತೆ ಕಡೆಗೆ ಹೋಗಿ ‘ಎಲ್ಲಿದ್ದ ಆನ್ನಭಾಗ್ಯ ಯೋಜನೆ’ ಪೋಸ್ಟರ್ನಲ್ಲಿ ಡಿ.ಕೆ.ಶಿವಕುಮಾರ್ ಚಿತ್ರಕ್ಕೆ ಮೊಟ್ಟೆ ಎಸೆದರು. ಪೊಲೀಸರು ಅವರನ್ನೂ ತಡೆಯಲು ಯತ್ನಿಸಿದರು. ದೂರದಿಂದಲೇ ಕಾರ್ಯಕರ್ತನೊಬ್ಬ ಮೊಟ್ಟೆ ಎಸೆದ. ಬಳಿಕ ಪೊಲೀಸರು ಅಲ್ಲಿಂದ ಎಲ್ಲರನ್ನೂ ವಾಪಸ್ ಕಳುಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಸಂವಿಧಾನದ ಬದಲಾವಣೆ ಕುರಿತು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರ ಇದ್ದ ಪೋಸ್ಟರ್ಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.</p><p>ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಂಗಳವಾರ ಬಿಜೆಪಿ ನಗರ ಮಂಡಲದಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು.</p><p>ಈ ವೇಳೆ ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹಿಸಲು ಕಾರ್ಯಕರ್ತರು ಮುಂದಾದರು. ಪೊಲೀಸರು ಇದಕ್ಕೆ ಅಡ್ಡಿಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.</p><p>ಕೆಲವರು ಬೇಲೂರು ರಸ್ತೆ ಕಡೆಗೆ ಹೋಗಿ ‘ಎಲ್ಲಿದ್ದ ಆನ್ನಭಾಗ್ಯ ಯೋಜನೆ’ ಪೋಸ್ಟರ್ನಲ್ಲಿ ಡಿ.ಕೆ.ಶಿವಕುಮಾರ್ ಚಿತ್ರಕ್ಕೆ ಮೊಟ್ಟೆ ಎಸೆದರು. ಪೊಲೀಸರು ಅವರನ್ನೂ ತಡೆಯಲು ಯತ್ನಿಸಿದರು. ದೂರದಿಂದಲೇ ಕಾರ್ಯಕರ್ತನೊಬ್ಬ ಮೊಟ್ಟೆ ಎಸೆದ. ಬಳಿಕ ಪೊಲೀಸರು ಅಲ್ಲಿಂದ ಎಲ್ಲರನ್ನೂ ವಾಪಸ್ ಕಳುಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>