<p>ಚಿಕ್ಕಮಗಳೂರು: ಜಿಲ್ಲಾ ಬೋವಿ ಸಮಾಜಕ್ಕೆ ನೂತನ ಕಾರ್ಯಾಧ್ಯಕ್ಷರಾಗಿ ಜಿ.ರಮೇಶ್ ಮತ್ತು ತರೀಕೆರೆ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ವಕೀಲ ಪರಮೇಶ್ ಆಯ್ಕೆಯಾದರು.</p>.<p>ಸಮಾಜದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ದಿಲೀಪ್ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಕೊಲ್ಲಾಭೊವಿ ನೇತೃತ್ವದಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಜಿ.ರಮೇಶ್, ‘ಜಿಲ್ಲೆಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಸಮುದಾಯವು ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿನ್ನೆಡೆ ಹೊಂದಿದೆ. ಎಲ್ಲರೂ ಒಗ್ಗಟ್ಟಾಗಿ ಸರ್ಕಾರದ ಗಮನ ಸೆಳೆಯಬೇಕು’ ಎಂದರು.</p>.<p>ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಬೋವಿ ಸಮಾಜದ ಬೃಹತ್ ಸಮಾವೇಶ ಹಾಗೂ ಸಮುದಾಯದ ಅನುಕೂಲಕ್ಕೆ ಸಮುದಾಯ ಭವನ ನಿರ್ಮಿಸಲು ಶಾಸಕರ ಗಮನ ಸೆಳೆಯಲಾಗುವುದು. ಒಳ ಮೀಸಲಾತಿಯಿಂದ ಬೋವಿ ಸಮು ದಾಯಕ್ಕೆ ಸಮಸ್ಯೆಯಾಗಿದ್ದು, ಹಳೇ ಮೀಸಲಾತಿ ಜಾರಿಗೊಳಿಸಬೇಕು ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಬೋವಿ ಸಮಾಜದ ಬಹುತೇಕರು ಸರ್ಕಾರದ ಸೌಲಭ್ಯದಿಂದ ವಂಚಿತರಾಗಿದ್ದು, ಸ್ಥಳೀಯ ಜನ ಪ್ರತಿನಿಧಿಗಳು ಸಹಕಾರ ನೀಡಬೇಕು. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬೋವಿ ಸಮುದಾಯಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.</p>.<p>ಆಯ್ಕೆಯಾದ ಪದಾಧಿಕಾರಿಗಳು: ಟಿ.ವಿ.ಕೃಷ್ಣಪ್ಪ (ಜಿಲ್ಲಾ ಖಜಾಂಚಿ), ಗೌರೀಶ್ (ತರೀಕೆರೆ ಕಾರ್ಯಾಧ್ಯಕ್ಷ), ಧನಪಾಲ್(ಗೌರವಾಧ್ಯಕ್ಷ), ಶಿವಶಂಕರ್(ಉಪಾಧ್ಯಕ್ಷ), ಪರಮೇಶ್(ಪ್ರಧಾನ ಕಾರ್ಯದರ್ಶಿ), ಕುಮಾರ್ (ಸಂಘಟನಾ ಕಾರ್ಯದರ್ಶಿ).</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-126-821761806</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಜಿಲ್ಲಾ ಬೋವಿ ಸಮಾಜಕ್ಕೆ ನೂತನ ಕಾರ್ಯಾಧ್ಯಕ್ಷರಾಗಿ ಜಿ.ರಮೇಶ್ ಮತ್ತು ತರೀಕೆರೆ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ವಕೀಲ ಪರಮೇಶ್ ಆಯ್ಕೆಯಾದರು.</p>.<p>ಸಮಾಜದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ದಿಲೀಪ್ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಕೊಲ್ಲಾಭೊವಿ ನೇತೃತ್ವದಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಜಿ.ರಮೇಶ್, ‘ಜಿಲ್ಲೆಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಸಮುದಾಯವು ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿನ್ನೆಡೆ ಹೊಂದಿದೆ. ಎಲ್ಲರೂ ಒಗ್ಗಟ್ಟಾಗಿ ಸರ್ಕಾರದ ಗಮನ ಸೆಳೆಯಬೇಕು’ ಎಂದರು.</p>.<p>ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಬೋವಿ ಸಮಾಜದ ಬೃಹತ್ ಸಮಾವೇಶ ಹಾಗೂ ಸಮುದಾಯದ ಅನುಕೂಲಕ್ಕೆ ಸಮುದಾಯ ಭವನ ನಿರ್ಮಿಸಲು ಶಾಸಕರ ಗಮನ ಸೆಳೆಯಲಾಗುವುದು. ಒಳ ಮೀಸಲಾತಿಯಿಂದ ಬೋವಿ ಸಮು ದಾಯಕ್ಕೆ ಸಮಸ್ಯೆಯಾಗಿದ್ದು, ಹಳೇ ಮೀಸಲಾತಿ ಜಾರಿಗೊಳಿಸಬೇಕು ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಬೋವಿ ಸಮಾಜದ ಬಹುತೇಕರು ಸರ್ಕಾರದ ಸೌಲಭ್ಯದಿಂದ ವಂಚಿತರಾಗಿದ್ದು, ಸ್ಥಳೀಯ ಜನ ಪ್ರತಿನಿಧಿಗಳು ಸಹಕಾರ ನೀಡಬೇಕು. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬೋವಿ ಸಮುದಾಯಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.</p>.<p>ಆಯ್ಕೆಯಾದ ಪದಾಧಿಕಾರಿಗಳು: ಟಿ.ವಿ.ಕೃಷ್ಣಪ್ಪ (ಜಿಲ್ಲಾ ಖಜಾಂಚಿ), ಗೌರೀಶ್ (ತರೀಕೆರೆ ಕಾರ್ಯಾಧ್ಯಕ್ಷ), ಧನಪಾಲ್(ಗೌರವಾಧ್ಯಕ್ಷ), ಶಿವಶಂಕರ್(ಉಪಾಧ್ಯಕ್ಷ), ಪರಮೇಶ್(ಪ್ರಧಾನ ಕಾರ್ಯದರ್ಶಿ), ಕುಮಾರ್ (ಸಂಘಟನಾ ಕಾರ್ಯದರ್ಶಿ).</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-126-821761806</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>