<p>ಮೂಡಿಗೆರೆ (ಚಿಕ್ಕಮಗಳೂರು): ಬಾಳೂರು ಹೋಬಳಿಯ ಕೆಳಗೂರು ಗ್ರಾಮದ ಮೇಗೂರು ಕಾಫಿ ಎಸ್ಟೇಟ್ನಲ್ಲಿ ಕೂಲಿ ಕಾರ್ಮಿಕರ ಕುಟುಂಬದ ಒಂದೂವರೆ ವರ್ಷದ ಮಗು ಶಿವಂ ನಾಪತ್ತೆಯಾಗಿ, ಮಳೆ ಮತ್ತು ಕತ್ತಲೆ ನಡುವೆಯೂ 12 ಗಂಟೆಗಳ ನಿರಂತರ ಹುಡುಕಾಟದ ನಂತರ ಪತ್ತೆಯಾಗಿದೆ.</p>.<p>ಮಧ್ಯ ಪ್ರದೇಶದ ಕೂಲಿ ಕಾರ್ಮಿಕರ ಕುಟುಂಬ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಕೂಲಿ ಕೆಲಸಕ್ಕೆ ತೆರಳಿತ್ತು. ಅಕ್ಕಪಕ್ಕದ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಮಗು ನಾಪತ್ತೆಯಾಗಿತ್ತು. ಸಂಜೆ ಕೆಲಸ ಮುಗಿಸಿ ಮನೆಗೆ ಬಂದ ಪೋಷಕರು ಮಗು ಕಾಣಿಸದಿರುವುದನ್ನು ಗಮನಿಸಿ ಆತಂಕಕ್ಕೀಡಾಗಿದ್ದರು.</p>.<p>ತಕ್ಷಣವೇ ಬಾಳೂರು ಠಾಣೆ ಪೊಲೀಸರು, ಸ್ಥಳೀಯರು, ಡಾಗ್ ಸ್ಕ್ವಾಡ್ ತಂಡ ಶೋಧ ಆರಂಭಿಸಿತು. ಮಳೆಯ ನಡುವೆಯೇ ಇಡೀ ರಾತ್ರಿ ಪೊಲೀಸರು ತೀವ್ರ ಶೋಧ ನಡೆಸಿದರು.</p>.<p>ಮೂಡಿಗೆರೆ ಸರ್ಕಲ್ ಇನ್ಸ್ಪೆಕ್ಟರ್ ರಾಜಶೇಖರ್ ನೇತೃತ್ವದಲ್ಲಿ, ಬಣಕಲ್ ಸಬ್ ಇನ್ಸ್ಪೆಕ್ಟರ್ ದಿಲೀಪ್ ಹಾಗೂ ಬಾಳೂರು ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದರು.</p>.<p>ನಸುಕಿನಲ್ಲಿ ಮನೆಯಿಂದ 500 ಮೀಟರ್ ದೂರದ ಹಳ್ಳದ ಸಮೀಪದ ಗುಂಡಿಯಲ್ಲಿ ಮಳೆ ಮಧ್ಯೆ ಮಗು ನಡುಗುತ್ತಾ ಕುಳಿತಿತ್ತು. ಮಗು ಕಂಡ ಕ್ಷಣ ಸ್ಥಳೀಯರು, ಕುಟುಂಬದವರುಕಣ್ಣೀರಿಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-51-1964297068</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಡಿಗೆರೆ (ಚಿಕ್ಕಮಗಳೂರು): ಬಾಳೂರು ಹೋಬಳಿಯ ಕೆಳಗೂರು ಗ್ರಾಮದ ಮೇಗೂರು ಕಾಫಿ ಎಸ್ಟೇಟ್ನಲ್ಲಿ ಕೂಲಿ ಕಾರ್ಮಿಕರ ಕುಟುಂಬದ ಒಂದೂವರೆ ವರ್ಷದ ಮಗು ಶಿವಂ ನಾಪತ್ತೆಯಾಗಿ, ಮಳೆ ಮತ್ತು ಕತ್ತಲೆ ನಡುವೆಯೂ 12 ಗಂಟೆಗಳ ನಿರಂತರ ಹುಡುಕಾಟದ ನಂತರ ಪತ್ತೆಯಾಗಿದೆ.</p>.<p>ಮಧ್ಯ ಪ್ರದೇಶದ ಕೂಲಿ ಕಾರ್ಮಿಕರ ಕುಟುಂಬ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಕೂಲಿ ಕೆಲಸಕ್ಕೆ ತೆರಳಿತ್ತು. ಅಕ್ಕಪಕ್ಕದ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಮಗು ನಾಪತ್ತೆಯಾಗಿತ್ತು. ಸಂಜೆ ಕೆಲಸ ಮುಗಿಸಿ ಮನೆಗೆ ಬಂದ ಪೋಷಕರು ಮಗು ಕಾಣಿಸದಿರುವುದನ್ನು ಗಮನಿಸಿ ಆತಂಕಕ್ಕೀಡಾಗಿದ್ದರು.</p>.<p>ತಕ್ಷಣವೇ ಬಾಳೂರು ಠಾಣೆ ಪೊಲೀಸರು, ಸ್ಥಳೀಯರು, ಡಾಗ್ ಸ್ಕ್ವಾಡ್ ತಂಡ ಶೋಧ ಆರಂಭಿಸಿತು. ಮಳೆಯ ನಡುವೆಯೇ ಇಡೀ ರಾತ್ರಿ ಪೊಲೀಸರು ತೀವ್ರ ಶೋಧ ನಡೆಸಿದರು.</p>.<p>ಮೂಡಿಗೆರೆ ಸರ್ಕಲ್ ಇನ್ಸ್ಪೆಕ್ಟರ್ ರಾಜಶೇಖರ್ ನೇತೃತ್ವದಲ್ಲಿ, ಬಣಕಲ್ ಸಬ್ ಇನ್ಸ್ಪೆಕ್ಟರ್ ದಿಲೀಪ್ ಹಾಗೂ ಬಾಳೂರು ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದರು.</p>.<p>ನಸುಕಿನಲ್ಲಿ ಮನೆಯಿಂದ 500 ಮೀಟರ್ ದೂರದ ಹಳ್ಳದ ಸಮೀಪದ ಗುಂಡಿಯಲ್ಲಿ ಮಳೆ ಮಧ್ಯೆ ಮಗು ನಡುಗುತ್ತಾ ಕುಳಿತಿತ್ತು. ಮಗು ಕಂಡ ಕ್ಷಣ ಸ್ಥಳೀಯರು, ಕುಟುಂಬದವರುಕಣ್ಣೀರಿಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-51-1964297068</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>