<p><strong>ಚಿಕ್ಕಮಗಳೂರು</strong>: ನಗರದ ಹೊರ ವಲಯದ ರಾಂಪುರ ಬಳಿ ರಸ್ತೆ ಅಭಿವೃದ್ಧಿ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗುರುವಾರ ನಡೆದ ಬೀದಿ ಜಗಳ ಸಂಬಂಧ ಪೊಲೀಸರು ಎರಡೂ ಪಕ್ಷಗಳ ನಾಲ್ವರ ವಿರುದ್ಧ ಸ್ವಾಯಂ ಪ್ರೇರಿತ ಎಫ್ಐಆರ್ ದಾಖಲಿಸಿದ್ದಾರೆ.</p><p>ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಬಿಜೆಪಿ ಕಾರ್ಯಕರ್ತ ರಾಜೇಶ್ ಕಲ್ಲುದೊಡ್ಡಿ, ಕಾಂಗ್ರೆಸ್ ಕಾರ್ಯಕರ್ತರಾದ ಕೌಶಿಕ್ ಮತ್ತು ಹೇಮಂತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇತರ 15ರಿಂದ 20 ಜನ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p><p>‘ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ರಾಂಪುರ ಬಳಿ ರಸ್ತೆ ಕಾಮಗಾರಿ ವೀಕ್ಷಣೆ ಮಾಡುತ್ತಿದ್ದಾಗ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಗುಂಪಾಗಿ ಸೇರಿ ಗಲಾಟೆ ಮಾಡಿ ಸಾರ್ವಜನಿಕರಿಗೆ ಉಪದ್ರವ ಮಾಡುತ್ತಿದ್ದರು. ಷ್ಟೇ ಬಾರಿ ಹೇಳಿದರೂ ಕೇಳದೆ ಏರಿದ ಧ್ವನಿಯಲ್ಲಿ ಕೂಗಾಡುತ್ತಾ ಕೈ–ಕೈ ಮಿಲಾಯಿಸಿಕೊಂಡು ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡುತ್ತಿದ್ದರು ಎಂದು ಗುಪ್ತ ಮಾಹಿತಿ ಕರ್ತವ್ಯದಲ್ಲಿರುವ ಹೆಡ್ ಕಾನ್ಸ್ಟೆಬಲ್ ಪ್ರವೀಣ್ ನೀಡಿರುವ ದೂರು ಆಧರಿಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ನಗರದ ಹೊರ ವಲಯದ ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಮಾಡಲು ಸಿ.ಟಿ.ರವಿ ಗುರುವಾರ ತೆರಳಿದ್ದರು. ಕಾಂಗ್ರೆಸ್ ಕಾರ್ಯಕರ್ತರು ಅಡ್ಡಲಾಗಿ ರಸ್ತೆಯಲ್ಲಿ ಕುಳಿತು ಘೋಷಣೆ ಕೂಗಿದ್ದರು. ಬಿಜೆಪಿ ಕಾರ್ಯಕರ್ತರು ಕೂಡ ಪ್ರತಿಯಾಗಿ ಘೋಷಣೆ ಕೂಗಿದ್ದರು. ಈ ಸಂದರ್ಭದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ನೂಕಾಟ, ತಳ್ಳಾಟ ಮಾಡಿ ಕೈ ಕೈ ಮಿಲಾಯಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ನಗರದ ಹೊರ ವಲಯದ ರಾಂಪುರ ಬಳಿ ರಸ್ತೆ ಅಭಿವೃದ್ಧಿ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗುರುವಾರ ನಡೆದ ಬೀದಿ ಜಗಳ ಸಂಬಂಧ ಪೊಲೀಸರು ಎರಡೂ ಪಕ್ಷಗಳ ನಾಲ್ವರ ವಿರುದ್ಧ ಸ್ವಾಯಂ ಪ್ರೇರಿತ ಎಫ್ಐಆರ್ ದಾಖಲಿಸಿದ್ದಾರೆ.</p><p>ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಬಿಜೆಪಿ ಕಾರ್ಯಕರ್ತ ರಾಜೇಶ್ ಕಲ್ಲುದೊಡ್ಡಿ, ಕಾಂಗ್ರೆಸ್ ಕಾರ್ಯಕರ್ತರಾದ ಕೌಶಿಕ್ ಮತ್ತು ಹೇಮಂತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇತರ 15ರಿಂದ 20 ಜನ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p><p>‘ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ರಾಂಪುರ ಬಳಿ ರಸ್ತೆ ಕಾಮಗಾರಿ ವೀಕ್ಷಣೆ ಮಾಡುತ್ತಿದ್ದಾಗ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಗುಂಪಾಗಿ ಸೇರಿ ಗಲಾಟೆ ಮಾಡಿ ಸಾರ್ವಜನಿಕರಿಗೆ ಉಪದ್ರವ ಮಾಡುತ್ತಿದ್ದರು. ಷ್ಟೇ ಬಾರಿ ಹೇಳಿದರೂ ಕೇಳದೆ ಏರಿದ ಧ್ವನಿಯಲ್ಲಿ ಕೂಗಾಡುತ್ತಾ ಕೈ–ಕೈ ಮಿಲಾಯಿಸಿಕೊಂಡು ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡುತ್ತಿದ್ದರು ಎಂದು ಗುಪ್ತ ಮಾಹಿತಿ ಕರ್ತವ್ಯದಲ್ಲಿರುವ ಹೆಡ್ ಕಾನ್ಸ್ಟೆಬಲ್ ಪ್ರವೀಣ್ ನೀಡಿರುವ ದೂರು ಆಧರಿಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ನಗರದ ಹೊರ ವಲಯದ ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಮಾಡಲು ಸಿ.ಟಿ.ರವಿ ಗುರುವಾರ ತೆರಳಿದ್ದರು. ಕಾಂಗ್ರೆಸ್ ಕಾರ್ಯಕರ್ತರು ಅಡ್ಡಲಾಗಿ ರಸ್ತೆಯಲ್ಲಿ ಕುಳಿತು ಘೋಷಣೆ ಕೂಗಿದ್ದರು. ಬಿಜೆಪಿ ಕಾರ್ಯಕರ್ತರು ಕೂಡ ಪ್ರತಿಯಾಗಿ ಘೋಷಣೆ ಕೂಗಿದ್ದರು. ಈ ಸಂದರ್ಭದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ನೂಕಾಟ, ತಳ್ಳಾಟ ಮಾಡಿ ಕೈ ಕೈ ಮಿಲಾಯಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>