<p><strong>ಚಿಕ್ಕಮಗಳೂರು</strong>: ₹1 ಸಾವಿರಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಪ್ರಕರಣದ ಆರೋಪಿಗೆ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿದೆ.</p>.<p>ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ರೈಲ್ವೆ ಕ್ಯಾಂಪ್ ನಿವಾಸಿ ಮಂಜುನಾಥ (39) ಶಿಕ್ಷೆಗೆ ಒಳಗಾಗಿರುವ ಅಪರಾಧಿ. 2021ರ ಜುಲೈ 27ರಂದು ವೆಂಕಟಾಚಲಪತಿ ಎಂಬವರ ಕೊಲೆ ಅಜ್ಜಂಪುರದಲ್ಲಿ ನಡೆದಿತ್ತು.</p>.<p>ಮಂಜುನಾಥ ಮತ್ತು ಮೃತ ವೆಂಕಟಾಚಲಪತಿ ಇಬ್ಬರೂ ಅಜ್ಜಂಪುರದ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ವೆಂಕಟಾಚಲಪತಿ ಕೊಡಬೇಕಿದ್ದ ₹1 ಸಾವಿರವನ್ನು ಮಂಜುನಾಥ ಕೇಳಿದ್ದು, ಈ ವೇಳೆ ಮಾತಿನ ಚಕಮಕಿ ನಡೆದಿತ್ತು. ರಾತ್ರಿ ವೆಂಕಟಾಚಲಪರಿ ರಂಗ ಮಂದಿರದಲ್ಲಿ ಮಲಗಿದ್ದಾಗ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಅಜ್ಜಂಪುರ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಮಂಗಳವಾರ ಆದೇಶ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ₹1 ಸಾವಿರಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಪ್ರಕರಣದ ಆರೋಪಿಗೆ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿದೆ.</p>.<p>ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ರೈಲ್ವೆ ಕ್ಯಾಂಪ್ ನಿವಾಸಿ ಮಂಜುನಾಥ (39) ಶಿಕ್ಷೆಗೆ ಒಳಗಾಗಿರುವ ಅಪರಾಧಿ. 2021ರ ಜುಲೈ 27ರಂದು ವೆಂಕಟಾಚಲಪತಿ ಎಂಬವರ ಕೊಲೆ ಅಜ್ಜಂಪುರದಲ್ಲಿ ನಡೆದಿತ್ತು.</p>.<p>ಮಂಜುನಾಥ ಮತ್ತು ಮೃತ ವೆಂಕಟಾಚಲಪತಿ ಇಬ್ಬರೂ ಅಜ್ಜಂಪುರದ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ವೆಂಕಟಾಚಲಪತಿ ಕೊಡಬೇಕಿದ್ದ ₹1 ಸಾವಿರವನ್ನು ಮಂಜುನಾಥ ಕೇಳಿದ್ದು, ಈ ವೇಳೆ ಮಾತಿನ ಚಕಮಕಿ ನಡೆದಿತ್ತು. ರಾತ್ರಿ ವೆಂಕಟಾಚಲಪರಿ ರಂಗ ಮಂದಿರದಲ್ಲಿ ಮಲಗಿದ್ದಾಗ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಅಜ್ಜಂಪುರ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಮಂಗಳವಾರ ಆದೇಶ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>