<p><strong>ಚಿಕ್ಕಮಗಳೂರು</strong>: ಮಳೆಗಾಲ ಸಮೀಪಿಸುತ್ತಿದ್ದು, ಜಿಲ್ಲೆಯಲ್ಲಿ ವಿದ್ಯುತ್ ಪರಿವರ್ತಕಗಳು ಮತ್ತು ಕಂಬಗಳ ಪೈಕಿ ಹಲವು ಅಪಾಯಕಾರಿ ಸ್ಥಿತಿಯಲ್ಲಿವೆ. ಕೈಗೆ ಎಟಕುವಷ್ಟು ಹತ್ತಿರದಲ್ಲೇ ಇರುವ ವಿದ್ಯುತ್ ಪರಿವರ್ತಕಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ.</p>.<p>ಮುಖ್ಯರಸ್ತೆ, ಗಲ್ಲಿ ರಸ್ತೆಗಳ ಅಲ್ಲಲ್ಲಿ ಅಳವಡಿಸಿರುವ ವಿದ್ಯುತ್ ಪರಿವರ್ತಕಗಳ ಬಳಿ ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತ ಸಂಭವಿಸುವುದು ಖಚಿತ. ಸುರಕ್ಷತೆ ಇಲ್ಲದಿದ್ದರೂ ಈ ಸ್ಥಳಗಳಲ್ಲಿ ಅಪಾಯ ಲೆಕ್ಕಿಸದೆ ಜನ ಓಡಾಡುತ್ತಿದ್ದಾರೆ.</p>.<p>ಮಳೆ ಸಂದರ್ಭದಲ್ಲಿ ವಿದ್ಯುತ್ ಪರಿವರ್ತಕಗಳಿಗೆ ಮರಗಳು, ಬಳ್ಳಿಗಳು ತಗುಲಿದರೆ ಪರಿವರ್ತಕಗಳು ಸುಟ್ಟು ಹೋಗುವ ಸಾಧ್ಯತೆ ಹೆಚ್ಚು. ಮಳೆಗಾಲಕ್ಕೆ ಮುನ್ನವೇ ಮೆಸ್ಕಾಂ ಸಿಬ್ಬಂದಿ ನಿರ್ವಹಣೆ ಮಾಡುವುದು ಸಾಮಾನ್ಯ. ಆದರೆ, ಈ ವರ್ಷ ಜೂನ್ ಸಮೀಪಿಸುತ್ತಿದ್ದು, ಇನ್ನೂ ಹಲವೆಡೆ ಅಪಾಯಕಾರಿ ಸ್ಥಿತಿಯಲ್ಲೇ ಉಳಿದುಕೊಂಡಿವೆ.</p>.<p>ಕಡೂರಿನಲ್ಲಿ ಇತ್ತೀಚೆಗೆ ವಿದ್ಯುತ್ ತಂತಿ ತಗುಲಿ ರೈತ ಮೃತಪಟ್ಟಿದ್ದು, ಮಲೆನಾಡಿನಲ್ಲಿ ಮಳೆ ನಡುವೆ ರಸ್ತೆ ಬದಿಯ ವಿದ್ಯುತ್ ಪರಿವರ್ತಕ ಸುಟ್ಟು ಆತಂಕ ಸೃಷ್ಟಿಸಿತ್ತು. ಅವಘಡಗಳು ಸಂಭವಿಸುವ ಮುನ್ನ ಎಚ್ಚರ ವಹಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.</p>.<p>ಮಳೆಗಾಲಕ್ಕೂ ಮುನ್ನ ಮಾರ್ಗ ನಿರ್ವಹಣೆ ಕಾರ್ಯ ನಡೆಯುತ್ತಿದೆ. ಅದಕ್ಕಾಗಿ ಪ್ರತ್ಯೇಕ ಸಿಬ್ಬಂದಿಯನ್ನೂ ನಿಯೋಜನೆ ಮಾಡಲಾಗಿದೆ ಎಂದು ಮೆಸ್ಕಾಂ ಅಧಿಕಾರಿಯೊಬ್ಬರು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-126-1113469951</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಮಳೆಗಾಲ ಸಮೀಪಿಸುತ್ತಿದ್ದು, ಜಿಲ್ಲೆಯಲ್ಲಿ ವಿದ್ಯುತ್ ಪರಿವರ್ತಕಗಳು ಮತ್ತು ಕಂಬಗಳ ಪೈಕಿ ಹಲವು ಅಪಾಯಕಾರಿ ಸ್ಥಿತಿಯಲ್ಲಿವೆ. ಕೈಗೆ ಎಟಕುವಷ್ಟು ಹತ್ತಿರದಲ್ಲೇ ಇರುವ ವಿದ್ಯುತ್ ಪರಿವರ್ತಕಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ.</p>.<p>ಮುಖ್ಯರಸ್ತೆ, ಗಲ್ಲಿ ರಸ್ತೆಗಳ ಅಲ್ಲಲ್ಲಿ ಅಳವಡಿಸಿರುವ ವಿದ್ಯುತ್ ಪರಿವರ್ತಕಗಳ ಬಳಿ ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತ ಸಂಭವಿಸುವುದು ಖಚಿತ. ಸುರಕ್ಷತೆ ಇಲ್ಲದಿದ್ದರೂ ಈ ಸ್ಥಳಗಳಲ್ಲಿ ಅಪಾಯ ಲೆಕ್ಕಿಸದೆ ಜನ ಓಡಾಡುತ್ತಿದ್ದಾರೆ.</p>.<p>ಮಳೆ ಸಂದರ್ಭದಲ್ಲಿ ವಿದ್ಯುತ್ ಪರಿವರ್ತಕಗಳಿಗೆ ಮರಗಳು, ಬಳ್ಳಿಗಳು ತಗುಲಿದರೆ ಪರಿವರ್ತಕಗಳು ಸುಟ್ಟು ಹೋಗುವ ಸಾಧ್ಯತೆ ಹೆಚ್ಚು. ಮಳೆಗಾಲಕ್ಕೆ ಮುನ್ನವೇ ಮೆಸ್ಕಾಂ ಸಿಬ್ಬಂದಿ ನಿರ್ವಹಣೆ ಮಾಡುವುದು ಸಾಮಾನ್ಯ. ಆದರೆ, ಈ ವರ್ಷ ಜೂನ್ ಸಮೀಪಿಸುತ್ತಿದ್ದು, ಇನ್ನೂ ಹಲವೆಡೆ ಅಪಾಯಕಾರಿ ಸ್ಥಿತಿಯಲ್ಲೇ ಉಳಿದುಕೊಂಡಿವೆ.</p>.<p>ಕಡೂರಿನಲ್ಲಿ ಇತ್ತೀಚೆಗೆ ವಿದ್ಯುತ್ ತಂತಿ ತಗುಲಿ ರೈತ ಮೃತಪಟ್ಟಿದ್ದು, ಮಲೆನಾಡಿನಲ್ಲಿ ಮಳೆ ನಡುವೆ ರಸ್ತೆ ಬದಿಯ ವಿದ್ಯುತ್ ಪರಿವರ್ತಕ ಸುಟ್ಟು ಆತಂಕ ಸೃಷ್ಟಿಸಿತ್ತು. ಅವಘಡಗಳು ಸಂಭವಿಸುವ ಮುನ್ನ ಎಚ್ಚರ ವಹಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.</p>.<p>ಮಳೆಗಾಲಕ್ಕೂ ಮುನ್ನ ಮಾರ್ಗ ನಿರ್ವಹಣೆ ಕಾರ್ಯ ನಡೆಯುತ್ತಿದೆ. ಅದಕ್ಕಾಗಿ ಪ್ರತ್ಯೇಕ ಸಿಬ್ಬಂದಿಯನ್ನೂ ನಿಯೋಜನೆ ಮಾಡಲಾಗಿದೆ ಎಂದು ಮೆಸ್ಕಾಂ ಅಧಿಕಾರಿಯೊಬ್ಬರು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-126-1113469951</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>