ಶುಕ್ರವಾರ, 9 ಜನವರಿ 2026
×
ADVERTISEMENT
ADVERTISEMENT

ಚಿಕ್ಕಮಗಳೂರು | ಡಿಸಿಸಿ ಬ್ಯಾಂಕ್ ಚುನಾವಣೆ: ಗರಿಗೆದರಿದ ಅಖಾಡ

ಸಿ.ಟಿ.ರವಿ, ಎಸ್.ಎಲ್.ಭೋಜೇಗೌಡ ಸೇರಿ ಪ್ರಮುಖರಿಂದ ನಾಮಪತ್ರ ಸಲ್ಲಿಕೆ
Published : 9 ಜನವರಿ 2026, 5:05 IST
Last Updated : 9 ಜನವರಿ 2026, 5:05 IST
ಫಾಲೋ ಮಾಡಿ
Comments
ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮುಂದುವರಿಯಲಿದೆ. ಅದೇ ರೀತಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿಯೂ ಕಾರ್ಯಕರ್ತರ ಅಭಿಪ್ರಾಯದಂತೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಲಾಗುತ್ತಿದೆ.
ಎಸ್.ಎಲ್.ಭೋಜೇಗೌಡ ವಿಧಾನ ಪರಿಷತ್ ಸದಸ್ಯ
‘ವೈಯಕ್ತಿಕ ನಿರ್ಧಾರವಲ್ಲ ಪಕ್ಷದ ತೀರ್ಮಾನ’
‘ಬಿಜೆಪಿ- ಜೆಡಿಎಸ್ ಸಮನ್ವಯ ಸಮಿತಿ ರಚನೆ ಮಾಡಿಕೊಂಡು ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಬಿಜೆಪಿ 11 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಎರಡು ಪಕ್ಷದ ಮುಖಂಡರು ಚರ್ಚಿಸಿ ತೀರ್ಮಾನ ತಗೆದುಕೊಳ್ಳಲಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು. ‘ಸಹಕಾರ ಕ್ಷೇತ್ರದಲ್ಲಿ ರಾಜಕಾರಣ ರಾಜಕೀಯ ಪಕ್ಷಗಳು ಇಲ್ಲ. ಆದರೂ ಆಂತರಿಕವಾಗಿ ಹೊಂದಾಣಿಕೆ ಮಾಡಿಕೊಂಡು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಸ್ಪರ್ಧೆ ಮಾಡಿರುವುದು ವೈಯಕ್ತಿಕ ಆಕಾಂಕ್ಷೆಯಿಂದಲ್ಲ. ನಮ್ಮ ನಿರ್ದೇಶಕರ ಇಚ್ಛೆ ಹಾಗೂ ಪಕ್ಷದ ನಿರ್ಣಯದಂತೆ ಸ್ಪರ್ಧೆ ಮಾಡಿದ್ದೇನೆ’ ಎಂದು ಸ್ಪಷ್ಟಪಡಿಸಿದರು.
ನಾಮಪತ್ರ ಹಿಂಪಡೆಯುವ ವೇಳೆ ವಿಸ್ತರಣೆ
ಡಿಸಿಸಿ ಬ್ಯಾಂಕ್ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನದ ಅವಧಿ ವಿಸ್ತರಿಸಿ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಾಮಪತ್ರ ಹಿಂಪಡೆಯಲು ಜ.11ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಇದ್ದ ಅವಧಿಯನ್ನು 3 ಗಂಟೆ ತನಕ ವಿಸ್ತರಿಸಲಾಗಿದೆ. ಬಳಿಕವೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT