<p>ಚಿಕ್ಕಮಗಳೂರು: ಮೂರು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ರಸ್ತೆ ಅಭಿವೃದ್ಧಿ, ಸೇತುವೆ, ಬಸ್ ನಿಲ್ದಾಣ ನಿರ್ಮಾಣ ಸೇರಿ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯಲ್ಲೂ ಮುಂಚೂಣಿ ಸಾಧಿಸಲಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.</p>.<p>ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ₹50 ಕೋಟಿ ಮಂಜೂರಾಗಿದೆ. ಇದರಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆಗಳಿಗೆ ₹17 ಕೋಟಿ, ಚಿಕ್ಕಮಗಳೂರು ನಗರದ ರಸ್ತೆಗಳಿಗೆ ₹10.50 ಕೋಟಿ, ಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ ₹7.50 ಕೋಟಿ, ದೇವಸ್ಥಾನಗಳ ಅಭಿವೃದ್ಧಿಗೆ ₹4 ಕೋಟಿ, ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ₹10 ಕೋಟಿ, ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ₹1 ಕೋಟಿ ಅನುದಾನ ನೀಡಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.</p>.<p>ಲೋಕೋಪಯೋಗಿ ಇಲಾಖೆಯಿಂದ ಕಾಲುಸಂಕ ನಿರ್ಮಾಣಕ್ಕೆ ₹2.20 ಕೋಟಿ ಅನುದಾನ ಮಂಜೂರಾಗಿದೆ. ಕಬ್ಬಳ್ಳಿ, ಕ್ಯಾತನಬೀಡು ಹಾಗೂ ಜೋಡಿಲಿಂಗದಹಳ್ಳಿ ಸೇತುವೆಗಳ ನಿರ್ಮಾಣಕ್ಕೆ ₹10 ಕೋಟಿ, ರಾಜ್ಯ ಹೆದ್ದಾರಿ ಕಾಮಗಾರಿಗೆ ₹9.99 ಕೋಟಿ, ತಡೆಗೋಡೆ ಕಾಮಗಾರಿಗಳಿಗೆ ₹4.45 ಕೋಟಿ ಅನುದಾನ ಸರ್ಕಾರದಿಂದ ಬಂದಿದೆ ಎಂದು ಹೇಳಿದರು.</p>.<p>ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹17 ಕೋಟಿ, ಮಳೆ ಹಾನಿ ಕಾಮಗಾರಿಗಳಿಗೆ ₹5 ಕೋಟಿ ಮಂಜೂರು ಮಾಡಲಾಗಿದೆ. ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಹೆಚ್ಚುವರಿ ಕಾಮಗಾರಿಗಳಿಗೆ ₹6.27 ಕೋಟಿ ಬಿಡುಗಡೆಯಾಗಿದೆ ಎಂದು ತಿಳಿಸಿದರು.</p>.<p>ನಗರದಲ್ಲಿ ಸುಸಜ್ಜಿತ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ₹19.87 ಕೋಟಿ ಬಂದಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಮಳೆ ಮತ್ತು ಪ್ರವಾಹದಿಂದ ಹಾನಿಗೀಡಾದ ಗ್ರಾಮೀಣ ರಸ್ತೆ, ಸೇತುವೆ ಮತ್ತು ಚರಂಡಿ ಕಾಮಗಾರಿಗಳಿಗೆ ₹10 ಕೋಟಿ ಬಿಡುಗಡೆಯಾಗಿದೆ ಎಂದು ವಿವರಿಸಿದರು.</p>.<p>ಪ್ರಗತಿ ಪಥ ಯೋಜನೆಯಡಿ ₹22 ಕೋಟಿ ಮಂಜೂರಾಗಿದ್ದು, ಜಿಲ್ಲೆಯ 30 ಕಿ.ಮೀ ಸರ್ವಋತು ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಾಗಲಿದೆ. ಜಿಲ್ಲಾಧಿಕಾರಿ ಕಚೇರಿ ಕಟ್ಟಡ ನಿರ್ಮಿಸಲು ಈ ಹಿಂದೆ ₹30 ಕೋಟಿಗೆ ಅನುಮೋದನೆಯಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಬಂದ ನಂತರ ಹೆಚ್ಚುವರಿ ₹26.48 ಕೋಟಿ ಅನುದಾನಕ್ಕೆ ಮಂಜೂರಾತಿ ನೀಡಲಾಗಿದೆ. ₹15.35 ಕೋಟಿ ಬಿಡುಗಡೆಯೂ ಆಗಿದೆ ಎಂದರು.</p>.<p>ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲದಿದ್ದರೆ ಗ್ಯಾರಂಟಿ ಯೋಜನೆಗಳ ಜತೆಗೆ ರಸ್ತೆ ಸೇರಿ ಮೂಲಸೌಕರ್ಯ ಅಭಿವೃದ್ಧಿ ಹೇಗೆ ಸಾಧ್ಯವಾಗುತ್ತಿತ್ತು. ಸರ್ಕಾರ ಆರ್ಥಿಕವಾಗಿ ಸಮರ್ಥವಾಗಿದೆ ಎಂದು ಹೇಳಿದರು.</p>.<p>ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಾನಂದಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಮುಖಂಡರಾದ ನಯಾಜ್ ಅಹಮದ್, ಮಲ್ಲೇಶ್, ಶಿವಕುಮಾರ್ ಹಿರೇಗೌಜ, ರೂಬಿನ್ ಮೋಸಸ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-126-168012732</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಮೂರು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ರಸ್ತೆ ಅಭಿವೃದ್ಧಿ, ಸೇತುವೆ, ಬಸ್ ನಿಲ್ದಾಣ ನಿರ್ಮಾಣ ಸೇರಿ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯಲ್ಲೂ ಮುಂಚೂಣಿ ಸಾಧಿಸಲಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.</p>.<p>ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ₹50 ಕೋಟಿ ಮಂಜೂರಾಗಿದೆ. ಇದರಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆಗಳಿಗೆ ₹17 ಕೋಟಿ, ಚಿಕ್ಕಮಗಳೂರು ನಗರದ ರಸ್ತೆಗಳಿಗೆ ₹10.50 ಕೋಟಿ, ಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ ₹7.50 ಕೋಟಿ, ದೇವಸ್ಥಾನಗಳ ಅಭಿವೃದ್ಧಿಗೆ ₹4 ಕೋಟಿ, ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ₹10 ಕೋಟಿ, ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ₹1 ಕೋಟಿ ಅನುದಾನ ನೀಡಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.</p>.<p>ಲೋಕೋಪಯೋಗಿ ಇಲಾಖೆಯಿಂದ ಕಾಲುಸಂಕ ನಿರ್ಮಾಣಕ್ಕೆ ₹2.20 ಕೋಟಿ ಅನುದಾನ ಮಂಜೂರಾಗಿದೆ. ಕಬ್ಬಳ್ಳಿ, ಕ್ಯಾತನಬೀಡು ಹಾಗೂ ಜೋಡಿಲಿಂಗದಹಳ್ಳಿ ಸೇತುವೆಗಳ ನಿರ್ಮಾಣಕ್ಕೆ ₹10 ಕೋಟಿ, ರಾಜ್ಯ ಹೆದ್ದಾರಿ ಕಾಮಗಾರಿಗೆ ₹9.99 ಕೋಟಿ, ತಡೆಗೋಡೆ ಕಾಮಗಾರಿಗಳಿಗೆ ₹4.45 ಕೋಟಿ ಅನುದಾನ ಸರ್ಕಾರದಿಂದ ಬಂದಿದೆ ಎಂದು ಹೇಳಿದರು.</p>.<p>ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹17 ಕೋಟಿ, ಮಳೆ ಹಾನಿ ಕಾಮಗಾರಿಗಳಿಗೆ ₹5 ಕೋಟಿ ಮಂಜೂರು ಮಾಡಲಾಗಿದೆ. ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಹೆಚ್ಚುವರಿ ಕಾಮಗಾರಿಗಳಿಗೆ ₹6.27 ಕೋಟಿ ಬಿಡುಗಡೆಯಾಗಿದೆ ಎಂದು ತಿಳಿಸಿದರು.</p>.<p>ನಗರದಲ್ಲಿ ಸುಸಜ್ಜಿತ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ₹19.87 ಕೋಟಿ ಬಂದಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಮಳೆ ಮತ್ತು ಪ್ರವಾಹದಿಂದ ಹಾನಿಗೀಡಾದ ಗ್ರಾಮೀಣ ರಸ್ತೆ, ಸೇತುವೆ ಮತ್ತು ಚರಂಡಿ ಕಾಮಗಾರಿಗಳಿಗೆ ₹10 ಕೋಟಿ ಬಿಡುಗಡೆಯಾಗಿದೆ ಎಂದು ವಿವರಿಸಿದರು.</p>.<p>ಪ್ರಗತಿ ಪಥ ಯೋಜನೆಯಡಿ ₹22 ಕೋಟಿ ಮಂಜೂರಾಗಿದ್ದು, ಜಿಲ್ಲೆಯ 30 ಕಿ.ಮೀ ಸರ್ವಋತು ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಾಗಲಿದೆ. ಜಿಲ್ಲಾಧಿಕಾರಿ ಕಚೇರಿ ಕಟ್ಟಡ ನಿರ್ಮಿಸಲು ಈ ಹಿಂದೆ ₹30 ಕೋಟಿಗೆ ಅನುಮೋದನೆಯಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಬಂದ ನಂತರ ಹೆಚ್ಚುವರಿ ₹26.48 ಕೋಟಿ ಅನುದಾನಕ್ಕೆ ಮಂಜೂರಾತಿ ನೀಡಲಾಗಿದೆ. ₹15.35 ಕೋಟಿ ಬಿಡುಗಡೆಯೂ ಆಗಿದೆ ಎಂದರು.</p>.<p>ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲದಿದ್ದರೆ ಗ್ಯಾರಂಟಿ ಯೋಜನೆಗಳ ಜತೆಗೆ ರಸ್ತೆ ಸೇರಿ ಮೂಲಸೌಕರ್ಯ ಅಭಿವೃದ್ಧಿ ಹೇಗೆ ಸಾಧ್ಯವಾಗುತ್ತಿತ್ತು. ಸರ್ಕಾರ ಆರ್ಥಿಕವಾಗಿ ಸಮರ್ಥವಾಗಿದೆ ಎಂದು ಹೇಳಿದರು.</p>.<p>ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಾನಂದಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಮುಖಂಡರಾದ ನಯಾಜ್ ಅಹಮದ್, ಮಲ್ಲೇಶ್, ಶಿವಕುಮಾರ್ ಹಿರೇಗೌಜ, ರೂಬಿನ್ ಮೋಸಸ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-126-168012732</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>