<p><strong>ಚಿಕ್ಕಮಗಳೂರು</strong>: ದೇವೀರಮ್ಮ ದೀಪೋತ್ಸವದ ಅಂಗವಾಗಿ ಮಂಗಳವಾರ ದೇವಿಯನ್ನು ಗುಡಿ ತುಂಬಿಸಲಾಯಿತು.</p>.<p>ಗಾಳಿಯ ರೂಪದಲ್ಲಿ ದೇವಿ ಗರ್ಭಗುಡಿ ಪ್ರವೇಶ ಮಾಡುತ್ತಾಳೆ ಎಂಬುದು ಭಕ್ತರ ನಂಬಿಕೆ. ಈ ಕ್ಷಣಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ನಂತರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೇರವೇರಿದವು.</p>.<p>ಎರಡು ದಿನ ಬೆಟ್ಟದ ಮೇಲೆ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಸೋಮವಾರ ರಾತ್ರಿ ಬೆಟ್ಟದ ಮೇಲೆ ದೀಪೋತ್ಸವ ನೇರವೇರಿತು. ಮಂಗಳವಾರ ಬೆಳಿಗ್ಗೆ ದೇವಿಯನ್ನು ವಿಶೇಷವಾಗಿ ಅಲಂಕರಿಸಿ ಗರ್ಭಗುಡಿಯ ಮುಂಭಾಗಕ್ಕೆ ಪರದೇ ಹಾಕಲಾಗಿತ್ತು.</p>.<p>ಏಳುಗಿರಿ, ಎಪ್ಪತ್ತುಗಿರಿ, ದೇವಿರಮ್ಮನ ಪಾದಕ್ಕೆ ಉಘೇ ಉಘೇ ಎನ್ನುತ್ತಿದ್ದಂತೆ ದೇವಸ್ಥಾನದ ಗರ್ಭಗುಡಿಗೆ ಹಾಕಲಾಗಿದ್ದ ಪರದೆ ಸರಿಯಿತು. ಗಾಳಿ ರೂಪದಲ್ಲಿ ದೇವಿ ಪ್ರವೇಶವಾಯಿತು ಎಂದು ಭಕ್ತರು ಸಂಭ್ರಮಿಸಿದರು. ಈ ಕ್ಷಣಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ನಂತರ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.</p>.<p>ುಪ ಲೋಕಾಯುಕ್ತ ಕೆ.ಎನ್. ಫಣೀಂದ್ರ, ಸಂಸದ ತೇಜಸ್ವಿ ಸೂರ್ಯ, ಶಾಸಕ ಎಚ್.ಡಿ. ತಮ್ಮಯ್ಯ, ರವಿ ಸುಬ್ರಹ್ಮಣ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.</p>.<p>ಅರಸರ ಮನೆತನದಿಂದ ಬಾಗಿನ ಅರ್ಪಣೆ: ಪ್ರತೀತಿಯಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಮಂಗಳವಾರ ಬಾಗಿನ ಅರ್ಪಿಸಲಾಯಿತು. ಮೈಸೂರು ಸಂಸ್ಥಾನದ ಪರವಾಗಿ ಬಂದಿದ್ದ ಅರಸು ಸಂಘದ ರಾಜ್ಯ ಘಟಕ ಅಧ್ಯಕ್ಷ ದಿನೇಶ್, ಹಣ್ಣು, ಕಾಯಿ, ವಿಳ್ಯೆದೆಲೆ, ಸೀರೆ, ಅರಿಶಿನ-ಕುಂಕುಮ ಅರ್ಪಣೆ ಮಾಡಿ ದೇವಿಯ ದರ್ಶನ ಪಡೆದರು. ನಂತರ ಸಂಜೆ ಬೆಣ್ಣೆ ಬಟ್ಟೆ ಸುಡುವ ಕಾರ್ಯಕ್ರಮ ನೇರವೇರಿತು.</p>.<p><strong>ಹಲವು ಕಾರ್ಯಕ್ರಮ</strong></p><p>ದೀಪೋತ್ಸವದ ನಾಲ್ಕನೇ ದಿನವಾದ ಬುಧವಾರ ಮಲ್ಲೇನಹಳ್ಳಿಯ ಬಿಂಡಿಗ ದೇವಿರಮ್ಮ ದೇವಸ್ಥಾನದಲ್ಲಿ ದೇವಿಗೆ ಬೆಳಿಗ್ಗೆ 8 ಗಂಟೆಯಿಂದ ಮಹಾಮಂಗಳಾರತಿ ಪೂಜಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಮಹಾಗಣಪತಿ ಪೂಜೆ ಪುಣ್ಯಾಹ ಅಗ್ನಿಕುಂಡ ಪೂಜೆ ಕಳಸ ಸ್ಥಾಪನೆ ಕುಂಕುಮಾರ್ಚನೆ ನೇರವೇರಲಿದ್ದು ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ದೇವೀರಮ್ಮ ದೀಪೋತ್ಸವದ ಅಂಗವಾಗಿ ಮಂಗಳವಾರ ದೇವಿಯನ್ನು ಗುಡಿ ತುಂಬಿಸಲಾಯಿತು.</p>.<p>ಗಾಳಿಯ ರೂಪದಲ್ಲಿ ದೇವಿ ಗರ್ಭಗುಡಿ ಪ್ರವೇಶ ಮಾಡುತ್ತಾಳೆ ಎಂಬುದು ಭಕ್ತರ ನಂಬಿಕೆ. ಈ ಕ್ಷಣಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ನಂತರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೇರವೇರಿದವು.</p>.<p>ಎರಡು ದಿನ ಬೆಟ್ಟದ ಮೇಲೆ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಸೋಮವಾರ ರಾತ್ರಿ ಬೆಟ್ಟದ ಮೇಲೆ ದೀಪೋತ್ಸವ ನೇರವೇರಿತು. ಮಂಗಳವಾರ ಬೆಳಿಗ್ಗೆ ದೇವಿಯನ್ನು ವಿಶೇಷವಾಗಿ ಅಲಂಕರಿಸಿ ಗರ್ಭಗುಡಿಯ ಮುಂಭಾಗಕ್ಕೆ ಪರದೇ ಹಾಕಲಾಗಿತ್ತು.</p>.<p>ಏಳುಗಿರಿ, ಎಪ್ಪತ್ತುಗಿರಿ, ದೇವಿರಮ್ಮನ ಪಾದಕ್ಕೆ ಉಘೇ ಉಘೇ ಎನ್ನುತ್ತಿದ್ದಂತೆ ದೇವಸ್ಥಾನದ ಗರ್ಭಗುಡಿಗೆ ಹಾಕಲಾಗಿದ್ದ ಪರದೆ ಸರಿಯಿತು. ಗಾಳಿ ರೂಪದಲ್ಲಿ ದೇವಿ ಪ್ರವೇಶವಾಯಿತು ಎಂದು ಭಕ್ತರು ಸಂಭ್ರಮಿಸಿದರು. ಈ ಕ್ಷಣಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ನಂತರ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.</p>.<p>ುಪ ಲೋಕಾಯುಕ್ತ ಕೆ.ಎನ್. ಫಣೀಂದ್ರ, ಸಂಸದ ತೇಜಸ್ವಿ ಸೂರ್ಯ, ಶಾಸಕ ಎಚ್.ಡಿ. ತಮ್ಮಯ್ಯ, ರವಿ ಸುಬ್ರಹ್ಮಣ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.</p>.<p>ಅರಸರ ಮನೆತನದಿಂದ ಬಾಗಿನ ಅರ್ಪಣೆ: ಪ್ರತೀತಿಯಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಮಂಗಳವಾರ ಬಾಗಿನ ಅರ್ಪಿಸಲಾಯಿತು. ಮೈಸೂರು ಸಂಸ್ಥಾನದ ಪರವಾಗಿ ಬಂದಿದ್ದ ಅರಸು ಸಂಘದ ರಾಜ್ಯ ಘಟಕ ಅಧ್ಯಕ್ಷ ದಿನೇಶ್, ಹಣ್ಣು, ಕಾಯಿ, ವಿಳ್ಯೆದೆಲೆ, ಸೀರೆ, ಅರಿಶಿನ-ಕುಂಕುಮ ಅರ್ಪಣೆ ಮಾಡಿ ದೇವಿಯ ದರ್ಶನ ಪಡೆದರು. ನಂತರ ಸಂಜೆ ಬೆಣ್ಣೆ ಬಟ್ಟೆ ಸುಡುವ ಕಾರ್ಯಕ್ರಮ ನೇರವೇರಿತು.</p>.<p><strong>ಹಲವು ಕಾರ್ಯಕ್ರಮ</strong></p><p>ದೀಪೋತ್ಸವದ ನಾಲ್ಕನೇ ದಿನವಾದ ಬುಧವಾರ ಮಲ್ಲೇನಹಳ್ಳಿಯ ಬಿಂಡಿಗ ದೇವಿರಮ್ಮ ದೇವಸ್ಥಾನದಲ್ಲಿ ದೇವಿಗೆ ಬೆಳಿಗ್ಗೆ 8 ಗಂಟೆಯಿಂದ ಮಹಾಮಂಗಳಾರತಿ ಪೂಜಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಮಹಾಗಣಪತಿ ಪೂಜೆ ಪುಣ್ಯಾಹ ಅಗ್ನಿಕುಂಡ ಪೂಜೆ ಕಳಸ ಸ್ಥಾಪನೆ ಕುಂಕುಮಾರ್ಚನೆ ನೇರವೇರಲಿದ್ದು ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>