<p><strong>ಸೂಸಲವಾನಿ (ನರಸಿಂಹರಾಜಪುರ):</strong> ತಾಲ್ಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಸಲವಾನಿ ಗ್ರಾಮದ ಬಕ್ರಿಹಳ್ಳ ಏತನೀರಾವರಿ ಯೋಜನೆಯ ಸಮೀಪದ ತೋಟಕ್ಕೆ ಬುಧವಾರ ರಾತ್ರಿ ಒಂಟಿ ಸಲಗ ದಾಳಿ ಮಾಡಿದ್ದು, ತೆಂಗು ಮತ್ತು ಬಾಳೆ ಬೆಳೆ ನಾಶ ಮಾಡಿದೆ.</p>.<p>ಸೂಸಲವಾನಿ ಗ್ರಾಮದ ಕೆ.ಕೆ.ಸುನಿ ಎಂಬುವರ ತೋಟಕ್ಕೆ ದಾಳಿ ಮಾಡಿದ ಒಂಟಿ ಸಲಗ 7 ತೆಂಗಿನ ಮರಗಳಿಗೆ ಹಾನಿ ಮಾಡಿದೆ. ಹಲವು ಬಾಳೆ ಗೀಡಗಳನ್ನು ನಾಶ ಮಾಡಿದೆ. ಹಲವು ದಿನಗಳಿಂದ ಒಂಟಿ ಸಲಗ ಈ ವ್ಯಾಪ್ತಿಯ ಗ್ರಾಮಗಳಲ್ಲಿ ತೋಟಕ್ಕೆ ನುಗ್ಗಿ ಬೆಳೆ ನಾಶ ಮಾಡುತ್ತಿದೆ. ಉಪಟಳ ನೀಡುತ್ತಿರುವ ಕಾಡಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಗ್ರಾಮಸ್ಥರ ಸಹಾಯದಿಂದ ಅರಣ್ಯಕ್ಕೆ ಓಡಿಸಿದ್ದಾರೆ.</p>.<p>ಭದ್ರಾಹಿನ್ನೀರು ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಸುಮಾರು 22ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಣಿಸಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-126-72945838</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಸಲವಾನಿ (ನರಸಿಂಹರಾಜಪುರ):</strong> ತಾಲ್ಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಸಲವಾನಿ ಗ್ರಾಮದ ಬಕ್ರಿಹಳ್ಳ ಏತನೀರಾವರಿ ಯೋಜನೆಯ ಸಮೀಪದ ತೋಟಕ್ಕೆ ಬುಧವಾರ ರಾತ್ರಿ ಒಂಟಿ ಸಲಗ ದಾಳಿ ಮಾಡಿದ್ದು, ತೆಂಗು ಮತ್ತು ಬಾಳೆ ಬೆಳೆ ನಾಶ ಮಾಡಿದೆ.</p>.<p>ಸೂಸಲವಾನಿ ಗ್ರಾಮದ ಕೆ.ಕೆ.ಸುನಿ ಎಂಬುವರ ತೋಟಕ್ಕೆ ದಾಳಿ ಮಾಡಿದ ಒಂಟಿ ಸಲಗ 7 ತೆಂಗಿನ ಮರಗಳಿಗೆ ಹಾನಿ ಮಾಡಿದೆ. ಹಲವು ಬಾಳೆ ಗೀಡಗಳನ್ನು ನಾಶ ಮಾಡಿದೆ. ಹಲವು ದಿನಗಳಿಂದ ಒಂಟಿ ಸಲಗ ಈ ವ್ಯಾಪ್ತಿಯ ಗ್ರಾಮಗಳಲ್ಲಿ ತೋಟಕ್ಕೆ ನುಗ್ಗಿ ಬೆಳೆ ನಾಶ ಮಾಡುತ್ತಿದೆ. ಉಪಟಳ ನೀಡುತ್ತಿರುವ ಕಾಡಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಗ್ರಾಮಸ್ಥರ ಸಹಾಯದಿಂದ ಅರಣ್ಯಕ್ಕೆ ಓಡಿಸಿದ್ದಾರೆ.</p>.<p>ಭದ್ರಾಹಿನ್ನೀರು ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಸುಮಾರು 22ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಣಿಸಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-126-72945838</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>