<p>ಚಿಕ್ಕಮಗಳೂರು: ಮೂಡಿಗೆರೆ ಮತ್ತು ಕಡೂರು ತಾಲ್ಲೂಕಿನ ಹಲವು ರೈತರ ಹಕ್ಕುಪತ್ರಗಳನ್ನು ಕಂದಾಯ ಅಧಿಕಾರಿಗಳು ಸುಳ್ಳು ಆರೋಪ ಮಾಡಿ ವಜಾ ಮಾಡಿದ್ದಾರೆ ಎಂದು ರೈತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಲಕ್ಷ್ಮಣ ಕುಮಾರ್ ಆರೋಪಿಸಿದರು.</p>.<p>ಮೂಡಿಗೆರೆ ತಾಲ್ಲೂಕಿನಲ್ಲಿ ಮೂರು ಸಾವಿರ ಹಾಗೂ ಕಡೂರು ತಾಲ್ಲೂಕಿನಲ್ಲಿ ಐದು ಸಾವಿರ ರೈತರ ಹಕ್ಕಪತ್ರಗಳನ್ನು ವಿನಾಕಾರಣ ವಜಾ ಮಾಡಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಅನ್ಯಾಯವನ್ನು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳ ಆದೇಶಕ್ಕೆ ತಡೆ ದೊರೆತಿದೆ. ಬಹು ಮುಖ್ಯವಾಗಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹೊರಡಿಸಿದ್ದ ಸರ್ಕಾರ ಆದೇಶಕ್ಕೂ ತಡೆಯಾಜ್ಞೆ ದೊರೆತಿದೆ ಎಂದರು.</p>.<p>ಈ ಹಿಂದೆಯೇ ರೈತರಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರ ನೀಡಲಾಗಿದ್ದು, ದಾಖಲೆಗಳು ಸರಿಯಿಲ್ಲ ಎಂದು ವಜಾ ಮಾಡಲಾಗುತ್ತಿದೆ. ಇದಕ್ಕೆ ಯಾರು ಹೊಣೆ. ಮೂಡಿಗೆರೆ ಮತ್ತು ಕಡೂರು ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ರೈತ ಹಿತರಕ್ಷಣಾ ವೇದಿಕೆ ಉಪಾಧ್ಯಕ್ಷ ಚಂದ್ರೇಗೌಡ, ಸುರೇಶ್ ಗೌಡ, ರವಿ, ಪ್ರಧಾನ ಕಾರ್ಯದರ್ಶಿ ಸುರೇಂದ್ರ, ಖಜಾಂಚಿ ರೆಹಮಾನ್, ಮುಖಂಡರಾದ ಗುರುದೇವ್ ಅನಿಲ್, ನವೀನ್ ಕುಮಾರ್, ಕಿರಣ್ ಕುಮಾರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-126-206493363</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಮೂಡಿಗೆರೆ ಮತ್ತು ಕಡೂರು ತಾಲ್ಲೂಕಿನ ಹಲವು ರೈತರ ಹಕ್ಕುಪತ್ರಗಳನ್ನು ಕಂದಾಯ ಅಧಿಕಾರಿಗಳು ಸುಳ್ಳು ಆರೋಪ ಮಾಡಿ ವಜಾ ಮಾಡಿದ್ದಾರೆ ಎಂದು ರೈತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಲಕ್ಷ್ಮಣ ಕುಮಾರ್ ಆರೋಪಿಸಿದರು.</p>.<p>ಮೂಡಿಗೆರೆ ತಾಲ್ಲೂಕಿನಲ್ಲಿ ಮೂರು ಸಾವಿರ ಹಾಗೂ ಕಡೂರು ತಾಲ್ಲೂಕಿನಲ್ಲಿ ಐದು ಸಾವಿರ ರೈತರ ಹಕ್ಕಪತ್ರಗಳನ್ನು ವಿನಾಕಾರಣ ವಜಾ ಮಾಡಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಅನ್ಯಾಯವನ್ನು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳ ಆದೇಶಕ್ಕೆ ತಡೆ ದೊರೆತಿದೆ. ಬಹು ಮುಖ್ಯವಾಗಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹೊರಡಿಸಿದ್ದ ಸರ್ಕಾರ ಆದೇಶಕ್ಕೂ ತಡೆಯಾಜ್ಞೆ ದೊರೆತಿದೆ ಎಂದರು.</p>.<p>ಈ ಹಿಂದೆಯೇ ರೈತರಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರ ನೀಡಲಾಗಿದ್ದು, ದಾಖಲೆಗಳು ಸರಿಯಿಲ್ಲ ಎಂದು ವಜಾ ಮಾಡಲಾಗುತ್ತಿದೆ. ಇದಕ್ಕೆ ಯಾರು ಹೊಣೆ. ಮೂಡಿಗೆರೆ ಮತ್ತು ಕಡೂರು ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ರೈತ ಹಿತರಕ್ಷಣಾ ವೇದಿಕೆ ಉಪಾಧ್ಯಕ್ಷ ಚಂದ್ರೇಗೌಡ, ಸುರೇಶ್ ಗೌಡ, ರವಿ, ಪ್ರಧಾನ ಕಾರ್ಯದರ್ಶಿ ಸುರೇಂದ್ರ, ಖಜಾಂಚಿ ರೆಹಮಾನ್, ಮುಖಂಡರಾದ ಗುರುದೇವ್ ಅನಿಲ್, ನವೀನ್ ಕುಮಾರ್, ಕಿರಣ್ ಕುಮಾರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-126-206493363</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>