<p><strong>ಚಿಕ್ಕಮಗಳೂರು:</strong> ಬೀನ್ಸ್ ದರ ನಿಗದಿಯಲ್ಲಿ ವರ್ತಕರಿಂದ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ನಗರದ ಎಪಿಎಂಸಿಯಲ್ಲಿ ರೈತರು ಪ್ರತಿಭಟನೆ ಆರಂಭಿಸಿದ್ದು, ಮಂಗಳೂರು, ಉಡುಪಿ, ಮುಂಬೈ, ಬೆಂಗಳೂರು ಸೇರಿ ಎಲ್ಲೆಡೆ ಹೋಗಬೇಕಿದ್ದ ತರಕಾರಿ ವಾಹನಗಳನ್ನು ತಡೆದು ರೈತರು ಶನಿವಾರ ರಾತ್ರಿ ಇಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.</p>.<p>ಮಧ್ಯವರ್ತಿಗಳು ಮನಸ್ಸಿಗೆ ಬಂದಂತೆ ದರ ನಿಗದಿ ಮಾಡುತ್ತಿದ್ದಾರೆ ಎಂದು ಅನ್ನದಾತರು ಅಳಲು ತೋಡಿಕೊಂಡರು.ಮೈಸೂರು ಮಾರುಕಟ್ಟೆಯಲ್ಲಿ ಬೀನ್ಸ್ಗೆ ಕೆಜಿಗೆ ₹80 ರಿಂದ ₹90 ದರ ಇದ್ದರೂ, ಇಲ್ಲಿ ಮಧ್ಯವರ್ತಿಗಳು ₹30ರಿಂದ ₹40 ಮಾತ್ರ ಕೂಗುತ್ತಿದ್ದಾರೆ ಎಂದು ಆರೋಪಿಸಿದರು.ಒಂದು ಚೀಲದಲ್ಲಿ 70 ಕೆಜಿ ಬೀನ್ಸ್ ಇದ್ದರೂ, 2 ಕೆಜಿ ಕಡಿಮೆ ಮಾಡಲಾಗುತ್ತಿದೆ. ಒಂದು ಚೀಲ ಕೇವಲ 100 ಗ್ರಾಂ ಕಡಿಮೆ ಬರದಿದ್ದರೂ ಅನ್ಯಾಯವಾಗಿ 2 ಕೆ.ಜಿ ಕಡಿತ ಮಾಡುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-29-189708083</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಬೀನ್ಸ್ ದರ ನಿಗದಿಯಲ್ಲಿ ವರ್ತಕರಿಂದ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ನಗರದ ಎಪಿಎಂಸಿಯಲ್ಲಿ ರೈತರು ಪ್ರತಿಭಟನೆ ಆರಂಭಿಸಿದ್ದು, ಮಂಗಳೂರು, ಉಡುಪಿ, ಮುಂಬೈ, ಬೆಂಗಳೂರು ಸೇರಿ ಎಲ್ಲೆಡೆ ಹೋಗಬೇಕಿದ್ದ ತರಕಾರಿ ವಾಹನಗಳನ್ನು ತಡೆದು ರೈತರು ಶನಿವಾರ ರಾತ್ರಿ ಇಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.</p>.<p>ಮಧ್ಯವರ್ತಿಗಳು ಮನಸ್ಸಿಗೆ ಬಂದಂತೆ ದರ ನಿಗದಿ ಮಾಡುತ್ತಿದ್ದಾರೆ ಎಂದು ಅನ್ನದಾತರು ಅಳಲು ತೋಡಿಕೊಂಡರು.ಮೈಸೂರು ಮಾರುಕಟ್ಟೆಯಲ್ಲಿ ಬೀನ್ಸ್ಗೆ ಕೆಜಿಗೆ ₹80 ರಿಂದ ₹90 ದರ ಇದ್ದರೂ, ಇಲ್ಲಿ ಮಧ್ಯವರ್ತಿಗಳು ₹30ರಿಂದ ₹40 ಮಾತ್ರ ಕೂಗುತ್ತಿದ್ದಾರೆ ಎಂದು ಆರೋಪಿಸಿದರು.ಒಂದು ಚೀಲದಲ್ಲಿ 70 ಕೆಜಿ ಬೀನ್ಸ್ ಇದ್ದರೂ, 2 ಕೆಜಿ ಕಡಿಮೆ ಮಾಡಲಾಗುತ್ತಿದೆ. ಒಂದು ಚೀಲ ಕೇವಲ 100 ಗ್ರಾಂ ಕಡಿಮೆ ಬರದಿದ್ದರೂ ಅನ್ಯಾಯವಾಗಿ 2 ಕೆ.ಜಿ ಕಡಿತ ಮಾಡುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-29-189708083</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>