<p><strong>ಬಾಳೆಹೊನ್ನೂರು (ಚಿಕ್ಕಮಗಳೂರು):</strong> ಪ್ರತ್ಯೇಕ ಪ್ರಕರಣಗಳಲ್ಲಿ 580 ಎಕರೆ ಅರಣ್ಯ ಜಾಗ ಒತ್ತುವರಿ ಆಗಿರುವುದನ್ನು ಇಲಾಖೆ ಪತ್ತೆ ಹಚ್ಚಿದೆ. 9 ಜನರ ವಿರುದ್ಧ ಪ್ರಕರಣ ದಾಖಲಿಸಿದೆ.</p>.<p>ಕಳಸ ತಾಲ್ಲೂಕಿನ ತನೂಡಿ ಗ್ರಾಮದ ಹಲಸೂರು ಮೀಸಲು ಅರಣ್ಯ ಪ್ರದೇಶದ ಸರ್ವೆ ನಂ. 122ರಲ್ಲಿ 450 ಎಕರೆ ಜಾಗವನ್ನು ತನೂಡಿ ಎಸ್ಟೇಟ್ನ ಎಸ್.ಬಿ. ಶಂಕರ್, ಎಸ್.ಬಿ. ಪ್ರಭಾಕರ್, ಸುನೀತಾ ಒತ್ತುವರಿ ಮಾಡಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>ಇನ್ನೊಂದು ಪ್ರಕರಣದಲ್ಲಿ ಬಾಳೆಹೊನ್ನೂರು ಹೋಬಳಿ ಬಿ.ಕಣಬೂರು ಗ್ರಾಮದ ಸರ್ವೆ ನಂ.9 ಹಾಗೂ ಬನ್ನೂರು ಗ್ರಾಮದ ಸರ್ವೇ ನಂ.95, 96, 97ರಲ್ಲಿ 130 ಎಕರೆ ಬನ್ನೂರು ಕಿರು ಅರಣ್ಯ ಪ್ರದೇಶವನ್ನು ಒತ್ತುವರಿ ಆಗಿದೆ ಎಂದು ಎಫ್ಐಆರ್ ದಾಖಲಿಸಲಾಗಿದೆ.</p>.<p>ಬೈರೇಗುಡ್ಡ ಎಸ್ಟೇಟ್ನ ಮಹಮ್ಮದ್ ಇಫ್ತಿಖಾರ್ ಆದಿಲ್, ಮೊಹಮ್ಮದ್ ಇಬ್ರಾಹಿಂ, ಮೊಹಮ್ಮದ್ ಇಲಿಯಾಸ್, ಅಬ್ದುಲ್ ವಹೀದ್, ಅಬ್ದುಲ್ ಮುನಾಫ್ ಹಾಗೂ ಅಬ್ದುಲ್ ಗಫಾರ್ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. </p>.<p>ಎರಡೂ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ 1963 ಹಾಗೂ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ವಿವಿಧ ಕಲಂ ಅಡಿ ಎಸಿಎಫ್ ಮೋಹನಕುಮಾರ್ ಮಾರ್ಗದರ್ಶನದಲ್ಲಿ ಆರ್ಎಫ್ಒ ಮಂಜುನಾಥ್ ಪ್ರಕರಣ ದಾಖಲಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಪತ್ತೆಯಾದ ಅತಿದೊಡ್ಡ ಒತ್ತುವರಿ ಪ್ರಕರಣ ಇದಾಗಿದೆ. ಇದೇ ರೀತಿಯ ಒತ್ತುವರಿ ಗುರುತಿಸಿ ಪ್ರಕರಣ ದಾಖಲಿಸಲು ಸಿದ್ಧತೆ ನಡೆದಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು (ಚಿಕ್ಕಮಗಳೂರು):</strong> ಪ್ರತ್ಯೇಕ ಪ್ರಕರಣಗಳಲ್ಲಿ 580 ಎಕರೆ ಅರಣ್ಯ ಜಾಗ ಒತ್ತುವರಿ ಆಗಿರುವುದನ್ನು ಇಲಾಖೆ ಪತ್ತೆ ಹಚ್ಚಿದೆ. 9 ಜನರ ವಿರುದ್ಧ ಪ್ರಕರಣ ದಾಖಲಿಸಿದೆ.</p>.<p>ಕಳಸ ತಾಲ್ಲೂಕಿನ ತನೂಡಿ ಗ್ರಾಮದ ಹಲಸೂರು ಮೀಸಲು ಅರಣ್ಯ ಪ್ರದೇಶದ ಸರ್ವೆ ನಂ. 122ರಲ್ಲಿ 450 ಎಕರೆ ಜಾಗವನ್ನು ತನೂಡಿ ಎಸ್ಟೇಟ್ನ ಎಸ್.ಬಿ. ಶಂಕರ್, ಎಸ್.ಬಿ. ಪ್ರಭಾಕರ್, ಸುನೀತಾ ಒತ್ತುವರಿ ಮಾಡಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>ಇನ್ನೊಂದು ಪ್ರಕರಣದಲ್ಲಿ ಬಾಳೆಹೊನ್ನೂರು ಹೋಬಳಿ ಬಿ.ಕಣಬೂರು ಗ್ರಾಮದ ಸರ್ವೆ ನಂ.9 ಹಾಗೂ ಬನ್ನೂರು ಗ್ರಾಮದ ಸರ್ವೇ ನಂ.95, 96, 97ರಲ್ಲಿ 130 ಎಕರೆ ಬನ್ನೂರು ಕಿರು ಅರಣ್ಯ ಪ್ರದೇಶವನ್ನು ಒತ್ತುವರಿ ಆಗಿದೆ ಎಂದು ಎಫ್ಐಆರ್ ದಾಖಲಿಸಲಾಗಿದೆ.</p>.<p>ಬೈರೇಗುಡ್ಡ ಎಸ್ಟೇಟ್ನ ಮಹಮ್ಮದ್ ಇಫ್ತಿಖಾರ್ ಆದಿಲ್, ಮೊಹಮ್ಮದ್ ಇಬ್ರಾಹಿಂ, ಮೊಹಮ್ಮದ್ ಇಲಿಯಾಸ್, ಅಬ್ದುಲ್ ವಹೀದ್, ಅಬ್ದುಲ್ ಮುನಾಫ್ ಹಾಗೂ ಅಬ್ದುಲ್ ಗಫಾರ್ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. </p>.<p>ಎರಡೂ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ 1963 ಹಾಗೂ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ವಿವಿಧ ಕಲಂ ಅಡಿ ಎಸಿಎಫ್ ಮೋಹನಕುಮಾರ್ ಮಾರ್ಗದರ್ಶನದಲ್ಲಿ ಆರ್ಎಫ್ಒ ಮಂಜುನಾಥ್ ಪ್ರಕರಣ ದಾಖಲಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಪತ್ತೆಯಾದ ಅತಿದೊಡ್ಡ ಒತ್ತುವರಿ ಪ್ರಕರಣ ಇದಾಗಿದೆ. ಇದೇ ರೀತಿಯ ಒತ್ತುವರಿ ಗುರುತಿಸಿ ಪ್ರಕರಣ ದಾಖಲಿಸಲು ಸಿದ್ಧತೆ ನಡೆದಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>