<p>ಚಿಕ್ಕಮಗಳೂರು: ಅರಣ್ಯ, ಪರಿಭಾವಿತ ಅರಣ್ಯ ಸಮಸ್ಯೆ ಪರಿಹರಿಸಲು ಜಿಲ್ಲಾಡಳಿತ ನೇಮಿಸಿರುವ ಸರ್ವೆ ಅಧಿಕಾರಿಗಳು ಸರ್ಕಾರದ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ನಾಗರಿಕ ಮತ್ತು ಹೋರಾಟ ಸಮಿತಿ ಅಧ್ಯಕ್ಷ ಎಸ್. ವಿಜಯಕುಮಾರ್ ಒತ್ತಾಯಿಸಿದರು.</p>.<p>ಕರ್ನಾಟಕ ಬೆಳೆಗಾರರ ಸಂಘ ಹಾಗೂ ಇತರೆ ಸಂಘಟನೆಗಳ ಹೋರಾ ಟದ ಫಲವಾಗಿ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಈ ತಂಡ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಆಗ್ರಹಿಸಿದರು.</p>.<p>ಅರಣ್ಯ ಕಾಯ್ದೆಯ ಸೆಕ್ಷನ್ 4 ಜಾರಿಗೊಳಿಸಿ ಅರಣ್ಯ ಇಲಾಖೆ ರೈತರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಅಂತಿಮಗೊಳಿಸಲು ನೇಮಿಸಿರುವ ಎಫ್ಎಸ್ಒ(ಅರಣ್ಯ ವ್ಯವಸ್ಥಾಪನಾ ಅಧಿಕಾರಿ) ಅವರ ಅವಧಿ ಮೀರುತ್ತಿದ್ದು, ಬಾಕಿ ಇರುವ ಪ್ರಕರಣಗಳನ್ನು ಅಂತಿಮಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಸರ್ಕಾರದ ಮಹತ್ವಾಕಾಂಕ್ಷೆಯ ಪೋಡಿ ಯೋಜನೆಗೆ ಚಿಕ್ಕಮಗಳೂರು ಡಿಎಫ್ಒ ಕಚೇರಿ ಅಡ್ಡಿಯಾಗಿದೆ. ಸುಮಾರು 840 ಸರ್ವೆ ನಂಬರಿನ ಸಾವಿರಾರು ರೈತರಿಗೆ ಸಂಬಂಧಿಸಿದ ಕಡತಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಅರಣ್ಯ ಇಲಾಖೆ ಎನ್ಒಸಿ ಕೇಳಿ ಕಳುಹಿಸಿರುವ ಕಡತಗಳನ್ನು ಕೂಡಲೇ ವಿಲೇವಾರಿ ಮಾಡಬೇಕು ಮನವಿ ಮಾಡಿದರು.</p>.<p>ನಮೂನೆ 53, 55, 57ಕ್ಕೆ ಸಂಬಂ ಧಿಸಿದ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು. ಅರ್ಹರಿಗೆ ಭೂಮಂಜೂರಾತಿ ನೀಡಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡ ಕೆರೆಮಕ್ಕಿ ಮಹೇಶ್ ಮಾತನಾಡಿ, ‘ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ಘೋಷಣೆಗೆ ಈ ಹಿಂದೆ ಹೋರಾಟಗಾರರು ಮತ್ತು ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗಿತ್ತು. ಗ್ರಾಮ ಪಂಚಾಯಿತಿಗಳ ಸಭೆಯಲ್ಲಿ ನಿರ್ಣಯಿಸಿದಂತೆ ಗ್ರಾಮಸ್ಥರು, ಹೋರಾಟಗಾರರು ಮತ್ತು ಚುನಾಯಿತ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯ ನಿರ್ಣಯದಂತೆ ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದರು.</p>.<p>ಸಮಿತಿಯ ಮುಖಂಡ ಮೈಲಿಮನೆ ಪೂರ್ಣೇಶ್ ಮಾತನಾಡಿ, ‘ಜಿಲ್ಲಾ ಕೇಂದ್ರ ದಲ್ಲಿ ಮೂರು ತಿಂಗಳಿಂದ ಖಾಯಂ ಉಪವಿಭಾಗಾಧಿಕಾರಿ ಇಲ್ಲ. ಇದರಿಂದ ಕಡತ ವಿಲೇವಾರಿ ವಿಳಂಬವಾಗುತ್ತಿದೆ. ಇದರಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು’ ಆಗ್ರಹಿಸಿದರು.</p>.<p>ಸಮಿತಿಯ ಮುಖಂಡರಾದ ಕುಮಾರ್, ರವಿಕುಮಾರ್, ಈಶ್ವರ್, ಶಾಂತಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-126-790186456</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಅರಣ್ಯ, ಪರಿಭಾವಿತ ಅರಣ್ಯ ಸಮಸ್ಯೆ ಪರಿಹರಿಸಲು ಜಿಲ್ಲಾಡಳಿತ ನೇಮಿಸಿರುವ ಸರ್ವೆ ಅಧಿಕಾರಿಗಳು ಸರ್ಕಾರದ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ನಾಗರಿಕ ಮತ್ತು ಹೋರಾಟ ಸಮಿತಿ ಅಧ್ಯಕ್ಷ ಎಸ್. ವಿಜಯಕುಮಾರ್ ಒತ್ತಾಯಿಸಿದರು.</p>.<p>ಕರ್ನಾಟಕ ಬೆಳೆಗಾರರ ಸಂಘ ಹಾಗೂ ಇತರೆ ಸಂಘಟನೆಗಳ ಹೋರಾ ಟದ ಫಲವಾಗಿ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಈ ತಂಡ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಆಗ್ರಹಿಸಿದರು.</p>.<p>ಅರಣ್ಯ ಕಾಯ್ದೆಯ ಸೆಕ್ಷನ್ 4 ಜಾರಿಗೊಳಿಸಿ ಅರಣ್ಯ ಇಲಾಖೆ ರೈತರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಅಂತಿಮಗೊಳಿಸಲು ನೇಮಿಸಿರುವ ಎಫ್ಎಸ್ಒ(ಅರಣ್ಯ ವ್ಯವಸ್ಥಾಪನಾ ಅಧಿಕಾರಿ) ಅವರ ಅವಧಿ ಮೀರುತ್ತಿದ್ದು, ಬಾಕಿ ಇರುವ ಪ್ರಕರಣಗಳನ್ನು ಅಂತಿಮಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಸರ್ಕಾರದ ಮಹತ್ವಾಕಾಂಕ್ಷೆಯ ಪೋಡಿ ಯೋಜನೆಗೆ ಚಿಕ್ಕಮಗಳೂರು ಡಿಎಫ್ಒ ಕಚೇರಿ ಅಡ್ಡಿಯಾಗಿದೆ. ಸುಮಾರು 840 ಸರ್ವೆ ನಂಬರಿನ ಸಾವಿರಾರು ರೈತರಿಗೆ ಸಂಬಂಧಿಸಿದ ಕಡತಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಅರಣ್ಯ ಇಲಾಖೆ ಎನ್ಒಸಿ ಕೇಳಿ ಕಳುಹಿಸಿರುವ ಕಡತಗಳನ್ನು ಕೂಡಲೇ ವಿಲೇವಾರಿ ಮಾಡಬೇಕು ಮನವಿ ಮಾಡಿದರು.</p>.<p>ನಮೂನೆ 53, 55, 57ಕ್ಕೆ ಸಂಬಂ ಧಿಸಿದ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು. ಅರ್ಹರಿಗೆ ಭೂಮಂಜೂರಾತಿ ನೀಡಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡ ಕೆರೆಮಕ್ಕಿ ಮಹೇಶ್ ಮಾತನಾಡಿ, ‘ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ಘೋಷಣೆಗೆ ಈ ಹಿಂದೆ ಹೋರಾಟಗಾರರು ಮತ್ತು ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗಿತ್ತು. ಗ್ರಾಮ ಪಂಚಾಯಿತಿಗಳ ಸಭೆಯಲ್ಲಿ ನಿರ್ಣಯಿಸಿದಂತೆ ಗ್ರಾಮಸ್ಥರು, ಹೋರಾಟಗಾರರು ಮತ್ತು ಚುನಾಯಿತ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯ ನಿರ್ಣಯದಂತೆ ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದರು.</p>.<p>ಸಮಿತಿಯ ಮುಖಂಡ ಮೈಲಿಮನೆ ಪೂರ್ಣೇಶ್ ಮಾತನಾಡಿ, ‘ಜಿಲ್ಲಾ ಕೇಂದ್ರ ದಲ್ಲಿ ಮೂರು ತಿಂಗಳಿಂದ ಖಾಯಂ ಉಪವಿಭಾಗಾಧಿಕಾರಿ ಇಲ್ಲ. ಇದರಿಂದ ಕಡತ ವಿಲೇವಾರಿ ವಿಳಂಬವಾಗುತ್ತಿದೆ. ಇದರಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು’ ಆಗ್ರಹಿಸಿದರು.</p>.<p>ಸಮಿತಿಯ ಮುಖಂಡರಾದ ಕುಮಾರ್, ರವಿಕುಮಾರ್, ಈಶ್ವರ್, ಶಾಂತಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-126-790186456</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>