<p><strong>ಚಿಕ್ಕಮಗಳೂರು</strong>: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕ ತಿಳಿಸಿದೆ.</p>.<p>ಸಂಘದ ಅಧ್ಯಕ್ಷ ಡಾ. ಡಿ.ಶ್ರೀನಿವಾಸ್ ನೇತೃತ್ವದಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ ಅವರಿಗೆ ವೈದ್ಯರು ಬುಧವಾರ ಮನವಿ ಸಲ್ಲಿಸಿದರು.</p>.<p>ಇಲಾಖೆ ಅಧಿಕಾರಿ, ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳಿಗೆ ಹಲವು ಬಾರಿ ಗಮನ ಸೆಳೆದರೂ ಸೂಕ್ತ ಸ್ಪಂದನೆ ಸಿಕ್ಕದ ಕಾರಣ ಅನಿವಾರ್ಯವಾಗಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದರು.</p>.<p>ವಿವಿಧ ವೃಂದಗಳಲ್ಲಿ ಒಟ್ಟು 36,397 ಅಧಿಕಾರಿ, ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ವಯೋನಿವೃತ್ತಿ ಮತ್ತು ಇತರ ಕಾರಣಗಳಿಂದ ನೌಕರರ ಸಂಖ್ಯೆ ಕಡಿಮೆಯಾಗುತ್ತಿದೆ. ಖಾಲಿ ಹುದ್ದೆಗಳು ಭರ್ತಿಯಾಗದೆ ಇರುವ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಆದ್ದರಿಂದ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದರು.</p>.<p>ಮೊದಲ ಹಂತದಲ್ಲಿ ಮಾರ್ಚ್ 11ರಿಂದ 15ರವರೆಗೆ ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಎಲ್ಲಾ ವೃಂದದ ವೈದ್ಯರು, ಅಧಿಕಾರಿ-ನೌಕರರು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಲಾಗುವುದು. ಹೊರರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸಲಾಗುವುದು ಎಂದು ತಿಳಿಸಿದರು.</p>.<p>ಎರಡನೇ ಹಂತದಲ್ಲಿ ಮಾರ್ಚ್ 16ರಿಂದ ಬೇಡಿಕೆ ಈಡೇರುವ ತನಕ ಕರ್ತವ್ಯಕ್ಕೆ ಗೈರಾಗುವ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆಶ್ವತ್ಥಬಾಬು, ಆರ್ಸಿಎಚ್ ಅಧಿಕಾರಿ ಎಚ್.ಕೆ. ಮಂಜುನಾಥ್, ಡಾ. ಪ್ರತ್ಯಕ್ಷ ಭೈರವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕ ತಿಳಿಸಿದೆ.</p>.<p>ಸಂಘದ ಅಧ್ಯಕ್ಷ ಡಾ. ಡಿ.ಶ್ರೀನಿವಾಸ್ ನೇತೃತ್ವದಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ ಅವರಿಗೆ ವೈದ್ಯರು ಬುಧವಾರ ಮನವಿ ಸಲ್ಲಿಸಿದರು.</p>.<p>ಇಲಾಖೆ ಅಧಿಕಾರಿ, ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳಿಗೆ ಹಲವು ಬಾರಿ ಗಮನ ಸೆಳೆದರೂ ಸೂಕ್ತ ಸ್ಪಂದನೆ ಸಿಕ್ಕದ ಕಾರಣ ಅನಿವಾರ್ಯವಾಗಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದರು.</p>.<p>ವಿವಿಧ ವೃಂದಗಳಲ್ಲಿ ಒಟ್ಟು 36,397 ಅಧಿಕಾರಿ, ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ವಯೋನಿವೃತ್ತಿ ಮತ್ತು ಇತರ ಕಾರಣಗಳಿಂದ ನೌಕರರ ಸಂಖ್ಯೆ ಕಡಿಮೆಯಾಗುತ್ತಿದೆ. ಖಾಲಿ ಹುದ್ದೆಗಳು ಭರ್ತಿಯಾಗದೆ ಇರುವ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಆದ್ದರಿಂದ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದರು.</p>.<p>ಮೊದಲ ಹಂತದಲ್ಲಿ ಮಾರ್ಚ್ 11ರಿಂದ 15ರವರೆಗೆ ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಎಲ್ಲಾ ವೃಂದದ ವೈದ್ಯರು, ಅಧಿಕಾರಿ-ನೌಕರರು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಲಾಗುವುದು. ಹೊರರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸಲಾಗುವುದು ಎಂದು ತಿಳಿಸಿದರು.</p>.<p>ಎರಡನೇ ಹಂತದಲ್ಲಿ ಮಾರ್ಚ್ 16ರಿಂದ ಬೇಡಿಕೆ ಈಡೇರುವ ತನಕ ಕರ್ತವ್ಯಕ್ಕೆ ಗೈರಾಗುವ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆಶ್ವತ್ಥಬಾಬು, ಆರ್ಸಿಎಚ್ ಅಧಿಕಾರಿ ಎಚ್.ಕೆ. ಮಂಜುನಾಥ್, ಡಾ. ಪ್ರತ್ಯಕ್ಷ ಭೈರವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>