<p><strong>ಚಿಕ್ಕಮಗಳೂರು:</strong> ವಿದ್ಯಾರ್ಥಿಗಳ ಪ್ರತಿಭೆ, ಆಸಕ್ತಿಗೆ ತಕ್ಕಂತೆ ಪೋಷಕರು ಮತ್ತು ಉಪನ್ಯಾಸಕರು ಪ್ರೋತ್ಸಾಹ ನೀಡಬೇಕಾದ ಅಗತ್ಯ ಇದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.</p>.<p>ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಸಿರಿ ಫೌಂಡೇಷನ್ ಹಾಗೂ ಕಾಲೇಜಿನ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಯೋಧ ನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪುಲ್ವಾಮ ದಾಳಿಯಲ್ಲಿ ಮಡಿದ ಯೋಧರಿಗೆ ಗೌರವ ಸಲ್ಲಿಸಿದ ಅವರು, ವಿದ್ಯೆಯನ್ನು ಉದ್ಯೋಗಕ್ಕಾಗಿ ಪಡೆಯದೆ ಸಂಸ್ಕಾರ, ಸಂಸ್ಕೃತಿ, ಉತ್ತಮ ಭವಿಷ್ಯಕ್ಕೆ ಶಿಕ್ಷಣ ಪಡೆದುಕೊಳ್ಳಬೇಕು. ಜೀವದ ಹಂಗು ತೊರೆದು ದೇಶ ರಕ್ಷಣೆಯಲ್ಲಿ ತೊಡಗಿರುವ ಯೋಧರ ಕರ್ತವ್ಯ ಪ್ರಶಂಸನೀಯ ಎಂದರು.</p>.<p>ಪ್ರಪಂಚದಲ್ಲೇ ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತವು ಧರ್ಮ, ಸಂಸ್ಕಾರದಿಂದ ಬದುಕಿ ಶಾಂತಿಯಿಂದ ಜನತೆ ಜೀವನ ನಡೆಸುವ ಮೂಲಕ ಯಶಸ್ಸುಗಳಿಸಿರುವ ಜಾತ್ಯತೀತ ದೇಶವಾಗಿದೆ ಎಂದು ತಿಳಿಸಿದರು.</p>.<p>ಸಂಪ್ರದಾಯವಾದಿಗಳು ಸೃಷ್ಟಿಸಿದ ವರ್ಣಭೇದ ನೀತಿ, ಜಾತಿ ಮಧ್ಯೆ ವಿಷಬೀಜ ಬಿತ್ತಿ, ಬಡವ ಬಲ್ಲಿದ, ಮೇಲು-ಕೀಳು ಮಾಡಿದ್ದನ್ನು 12ನೇ ಶತಮಾನದಲ್ಲಿಯೇ ಜಗಜ್ಯೋತಿ ಬಸವಣ್ಣನವರು ಜಾತಿ, ವರ್ಣಭೇದನೀತಿ ವಿರೋಧಿಸಿ, ಲಿಂಗಾಯತ ಧರ್ಮ ಸ್ಥಾಪಿಸಿದರು ಎಂದರು.</p>.<p>ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಯೋಧ ಮಂಜುನಾಥ್ ಸಿ.ಎಸ್.ಮಾತನಾಡಿ, ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಪೂರ್ಣ ಚಿತ್ರಣ ಹಾಗೂ ದಾಳಿ ಪೂರ್ವದ ಪರಿಸ್ಥಿತಿ ಹಾಗೂ ನಂತರದ ವಿಷಯಗಳನ್ನು ತಿಳಿಸಿದರು.</p>.<p>ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮೂಡಲಗಿರಿಯಯ್ಯ ಮಾತನಾಡಿ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಹಾಗೂ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಚ್.ಡಿ.ತಮ್ಮಯ್ಯ ಅವರ ಬೆಂಬಲವನ್ನು ಕೋರಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಐಸಿರಿ ಫೌಂಡೇಷನ್ ಅಧ್ಯಕ್ಷ ರೋಹನ್ ಭಾಗರ್ವಪುರಿ, ಐಕ್ಯೂಎಸಿ ಸಂಚಾಲಕ ದೀಕ್ಷಿತ್ಕುಮಾರ್, ಕೆ.ಎಂ.ಅನುಷಾ, ಉಪನ್ಯಾಸಕಿ ಮಾಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ವಿದ್ಯಾರ್ಥಿಗಳ ಪ್ರತಿಭೆ, ಆಸಕ್ತಿಗೆ ತಕ್ಕಂತೆ ಪೋಷಕರು ಮತ್ತು ಉಪನ್ಯಾಸಕರು ಪ್ರೋತ್ಸಾಹ ನೀಡಬೇಕಾದ ಅಗತ್ಯ ಇದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.</p>.<p>ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಸಿರಿ ಫೌಂಡೇಷನ್ ಹಾಗೂ ಕಾಲೇಜಿನ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಯೋಧ ನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪುಲ್ವಾಮ ದಾಳಿಯಲ್ಲಿ ಮಡಿದ ಯೋಧರಿಗೆ ಗೌರವ ಸಲ್ಲಿಸಿದ ಅವರು, ವಿದ್ಯೆಯನ್ನು ಉದ್ಯೋಗಕ್ಕಾಗಿ ಪಡೆಯದೆ ಸಂಸ್ಕಾರ, ಸಂಸ್ಕೃತಿ, ಉತ್ತಮ ಭವಿಷ್ಯಕ್ಕೆ ಶಿಕ್ಷಣ ಪಡೆದುಕೊಳ್ಳಬೇಕು. ಜೀವದ ಹಂಗು ತೊರೆದು ದೇಶ ರಕ್ಷಣೆಯಲ್ಲಿ ತೊಡಗಿರುವ ಯೋಧರ ಕರ್ತವ್ಯ ಪ್ರಶಂಸನೀಯ ಎಂದರು.</p>.<p>ಪ್ರಪಂಚದಲ್ಲೇ ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತವು ಧರ್ಮ, ಸಂಸ್ಕಾರದಿಂದ ಬದುಕಿ ಶಾಂತಿಯಿಂದ ಜನತೆ ಜೀವನ ನಡೆಸುವ ಮೂಲಕ ಯಶಸ್ಸುಗಳಿಸಿರುವ ಜಾತ್ಯತೀತ ದೇಶವಾಗಿದೆ ಎಂದು ತಿಳಿಸಿದರು.</p>.<p>ಸಂಪ್ರದಾಯವಾದಿಗಳು ಸೃಷ್ಟಿಸಿದ ವರ್ಣಭೇದ ನೀತಿ, ಜಾತಿ ಮಧ್ಯೆ ವಿಷಬೀಜ ಬಿತ್ತಿ, ಬಡವ ಬಲ್ಲಿದ, ಮೇಲು-ಕೀಳು ಮಾಡಿದ್ದನ್ನು 12ನೇ ಶತಮಾನದಲ್ಲಿಯೇ ಜಗಜ್ಯೋತಿ ಬಸವಣ್ಣನವರು ಜಾತಿ, ವರ್ಣಭೇದನೀತಿ ವಿರೋಧಿಸಿ, ಲಿಂಗಾಯತ ಧರ್ಮ ಸ್ಥಾಪಿಸಿದರು ಎಂದರು.</p>.<p>ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಯೋಧ ಮಂಜುನಾಥ್ ಸಿ.ಎಸ್.ಮಾತನಾಡಿ, ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಪೂರ್ಣ ಚಿತ್ರಣ ಹಾಗೂ ದಾಳಿ ಪೂರ್ವದ ಪರಿಸ್ಥಿತಿ ಹಾಗೂ ನಂತರದ ವಿಷಯಗಳನ್ನು ತಿಳಿಸಿದರು.</p>.<p>ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮೂಡಲಗಿರಿಯಯ್ಯ ಮಾತನಾಡಿ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಹಾಗೂ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಚ್.ಡಿ.ತಮ್ಮಯ್ಯ ಅವರ ಬೆಂಬಲವನ್ನು ಕೋರಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.</p>.<p>ಕಾರ್ಯಕ್ರಮದಲ್ಲಿ ಐಸಿರಿ ಫೌಂಡೇಷನ್ ಅಧ್ಯಕ್ಷ ರೋಹನ್ ಭಾಗರ್ವಪುರಿ, ಐಕ್ಯೂಎಸಿ ಸಂಚಾಲಕ ದೀಕ್ಷಿತ್ಕುಮಾರ್, ಕೆ.ಎಂ.ಅನುಷಾ, ಉಪನ್ಯಾಸಕಿ ಮಾಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>