<p><strong>ಚಿಕ್ಕಮಗಳೂರು</strong>: ಆರೋಗ್ಯ ಇಲಾಖೆಯ ಅಧಿಕಾರಿ, ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 11ರಿಂದ ಮೊದಲ ಹಂತದ ಮುಷ್ಕರ ಆರಂಭವಾಗಲಿದೆ ಎಂದು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶ್ರೀನಿವಾಸ ತಿಳಿಸಿದರು.</p>.<p>ಮಾರ್ಚ್ 11ರಿಂದ 15ರವರೆಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಾಗುವುದು. ಈ ಸಂದರ್ಭದಲ್ಲಿ ಹೊರ ರೋಗಿ ವಿಭಾಗದ ಸೇವೆ ನೀಡುವುದಿಲ್ಲ. ತುರ್ತು ಸೇವೆ ಮಾತ್ರ ಒದಗಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಹೇಳಿದರು.</p>.<p>ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ನೌಕರರು ಮನವಿ ನೀಡುತ್ತಿದ್ದರೂ ಈವರೆಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಆದ್ದರಿಂದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದರು.</p>.<p>ವೃಂದ ಮತ್ತು ನೇಮಕಾತಿ ನಿಯಮಗಳನ್ನು ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕು. ಆದರೆ, ತಿದ್ದುಪಡಿ ಮಾಡಿಲ್ಲ. ಜ್ಯೇಷ್ಠತಾ ಪಟ್ಟಿಯನ್ನು ಈವರೆಗೆ ಪ್ರಕಟಿಸಿಲ್ಲ. ಅಧಿಕಾರಿ ಮತ್ತು ನೌಕರರಿಗೆ ಐದು ವರ್ಷಗಳಿಂದ ಬಡ್ತಿ ನೀಡಿಲ್ಲ. ಉನ್ನತ ವ್ಯಾಸಂಗಕ್ಕೆ ಅವಕಾಶ ಮಾಡಿಕೊಟ್ಟಿಲ್ಲ ಎಂದು ದೂರಿದರು.</p>.<p>ಆರೋಗ್ಯ ಇಲಾಖೆಯಲ್ಲಿನ ವರ್ಗಾವಣೆ ಕಾಯ್ದೆಯ ನ್ಯೂನತೆ ಸರಿಪಡಿಸಿಲ್ಲ. ಅವೈಜ್ಞಾನಿಕವಾಗಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಉತ್ತಮ ಸೇವೆ ನೀಡುವ ದೃಷ್ಟಿಯಿಂದ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಇಲಾಖೆಯ ಕೆ.ಎಸ್. ವಸಂತಕುಮಾರಿ, ದೇವರಾಜು, ವೆಂಕಟೇಶ್, ಅನುಪಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಆರೋಗ್ಯ ಇಲಾಖೆಯ ಅಧಿಕಾರಿ, ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 11ರಿಂದ ಮೊದಲ ಹಂತದ ಮುಷ್ಕರ ಆರಂಭವಾಗಲಿದೆ ಎಂದು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶ್ರೀನಿವಾಸ ತಿಳಿಸಿದರು.</p>.<p>ಮಾರ್ಚ್ 11ರಿಂದ 15ರವರೆಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಾಗುವುದು. ಈ ಸಂದರ್ಭದಲ್ಲಿ ಹೊರ ರೋಗಿ ವಿಭಾಗದ ಸೇವೆ ನೀಡುವುದಿಲ್ಲ. ತುರ್ತು ಸೇವೆ ಮಾತ್ರ ಒದಗಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಹೇಳಿದರು.</p>.<p>ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ನೌಕರರು ಮನವಿ ನೀಡುತ್ತಿದ್ದರೂ ಈವರೆಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಆದ್ದರಿಂದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದರು.</p>.<p>ವೃಂದ ಮತ್ತು ನೇಮಕಾತಿ ನಿಯಮಗಳನ್ನು ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕು. ಆದರೆ, ತಿದ್ದುಪಡಿ ಮಾಡಿಲ್ಲ. ಜ್ಯೇಷ್ಠತಾ ಪಟ್ಟಿಯನ್ನು ಈವರೆಗೆ ಪ್ರಕಟಿಸಿಲ್ಲ. ಅಧಿಕಾರಿ ಮತ್ತು ನೌಕರರಿಗೆ ಐದು ವರ್ಷಗಳಿಂದ ಬಡ್ತಿ ನೀಡಿಲ್ಲ. ಉನ್ನತ ವ್ಯಾಸಂಗಕ್ಕೆ ಅವಕಾಶ ಮಾಡಿಕೊಟ್ಟಿಲ್ಲ ಎಂದು ದೂರಿದರು.</p>.<p>ಆರೋಗ್ಯ ಇಲಾಖೆಯಲ್ಲಿನ ವರ್ಗಾವಣೆ ಕಾಯ್ದೆಯ ನ್ಯೂನತೆ ಸರಿಪಡಿಸಿಲ್ಲ. ಅವೈಜ್ಞಾನಿಕವಾಗಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಉತ್ತಮ ಸೇವೆ ನೀಡುವ ದೃಷ್ಟಿಯಿಂದ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಇಲಾಖೆಯ ಕೆ.ಎಸ್. ವಸಂತಕುಮಾರಿ, ದೇವರಾಜು, ವೆಂಕಟೇಶ್, ಅನುಪಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>