<p><strong>ಚಿಕ್ಕಮಗಳೂರು</strong>: ಜಿಲ್ಲೆಯ ಬಯಲು ಸೀಮೆಯಲ್ಲಿ ಮಳೆ ಜೋರಾಗಿದ್ದು, ತೆಂಗಿನ ತೋಟಗಳು ಜಲಾವೃತಗೊಂಡಿವೆ. ತಾಲ್ಲೂಕಿನ ದೇವಗೊಂಡನಹಳ್ಳಿಯಲ್ಲಿ ನೀರಿನಲ್ಲಿ ಕೊಚ್ಚಿಹೋಗಿ ರೈತ ಮೃತಪಟ್ಟಿದ್ದಾರೆ.</p><p>ಎಮ್ಮೆ ಮೇಯಿಸಲು ಹೋಗಿದ್ದ ಲಕ್ಷ್ಮಣಗೌಡ ವಾಪಸ್ ಬಂದಿರಲಿಲ್ಲ. ಗುರುವಾರ ಹಳ್ಳದ ನೀರಿನಲ್ಲಿ ಅವರ ಮೃತದೇಹ ದೊರೆತಿದೆ. ಹಳ್ಳ ದಾಟುವಾಗ ಕಾಲುಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಕಡೂರು ತಾಲ್ಲೂಕಿನಲ್ಲಿ ಅತೀ ಹೆಚ್ಚು ಮಳೆ ಸುರಿದಿದ್ದು, ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹಳ್ಳ- ಕೊಳ್ಳಗಳು ಉಕ್ಕಿ ಹರಿದಿವೆ. ರಾತ್ರಿ ವೇಳೆ ಎಡಬಿಡದೆ ಮಳೆ ಸುರಿಯುತ್ತಿದ್ದು, ತೆಂಗು ಮತ್ತು ಅಡಿಕೆ ತೋಟಗಳು ಜಲಾವೃತಗೊಂಡಿವೆ. ತರಕಾರಿ ಬೆಳೆಗಳು ಸಂಪೂರ್ಣ ನೆಲ ಕಚ್ಚಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. </p><p>ಕಡೂರು- ಚಿಕ್ಕಮಗಳೂರು ರೈಲು ಸಂಚಾರಕ್ಕೂ ಗುರುವಾರ ಕೆಲಕಾಲ ತೊಂದರೆಯಾಗಿತ್ತು. ಭಾರಿ ಮಳೆಗೆ ಕಣಿವೆ ಗ್ರಾಮದ ಬಳಿ ರೈಲು ಮಾರ್ಗದ ಜಲ್ಲಿ ಜರಿದಿದ್ದವು. ಚಿಕ್ಕಮಗಳೂರಿನಿಂದ ಶಿವಮೊಗ್ಗ ಹೊರಟಿದ್ದ ರೈಲನ್ನು ಅರ್ಧ ಗಂಟೆ ನಿಲ್ಲಿಸಿ ಜಲ್ಲಿ ಸರಿಪಡಿಸಲಾಯಿತು. ಬಳಿಕ ರೈಲು ಸಂಚಾರ ಸುಗಮಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಜಿಲ್ಲೆಯ ಬಯಲು ಸೀಮೆಯಲ್ಲಿ ಮಳೆ ಜೋರಾಗಿದ್ದು, ತೆಂಗಿನ ತೋಟಗಳು ಜಲಾವೃತಗೊಂಡಿವೆ. ತಾಲ್ಲೂಕಿನ ದೇವಗೊಂಡನಹಳ್ಳಿಯಲ್ಲಿ ನೀರಿನಲ್ಲಿ ಕೊಚ್ಚಿಹೋಗಿ ರೈತ ಮೃತಪಟ್ಟಿದ್ದಾರೆ.</p><p>ಎಮ್ಮೆ ಮೇಯಿಸಲು ಹೋಗಿದ್ದ ಲಕ್ಷ್ಮಣಗೌಡ ವಾಪಸ್ ಬಂದಿರಲಿಲ್ಲ. ಗುರುವಾರ ಹಳ್ಳದ ನೀರಿನಲ್ಲಿ ಅವರ ಮೃತದೇಹ ದೊರೆತಿದೆ. ಹಳ್ಳ ದಾಟುವಾಗ ಕಾಲುಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಕಡೂರು ತಾಲ್ಲೂಕಿನಲ್ಲಿ ಅತೀ ಹೆಚ್ಚು ಮಳೆ ಸುರಿದಿದ್ದು, ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹಳ್ಳ- ಕೊಳ್ಳಗಳು ಉಕ್ಕಿ ಹರಿದಿವೆ. ರಾತ್ರಿ ವೇಳೆ ಎಡಬಿಡದೆ ಮಳೆ ಸುರಿಯುತ್ತಿದ್ದು, ತೆಂಗು ಮತ್ತು ಅಡಿಕೆ ತೋಟಗಳು ಜಲಾವೃತಗೊಂಡಿವೆ. ತರಕಾರಿ ಬೆಳೆಗಳು ಸಂಪೂರ್ಣ ನೆಲ ಕಚ್ಚಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. </p><p>ಕಡೂರು- ಚಿಕ್ಕಮಗಳೂರು ರೈಲು ಸಂಚಾರಕ್ಕೂ ಗುರುವಾರ ಕೆಲಕಾಲ ತೊಂದರೆಯಾಗಿತ್ತು. ಭಾರಿ ಮಳೆಗೆ ಕಣಿವೆ ಗ್ರಾಮದ ಬಳಿ ರೈಲು ಮಾರ್ಗದ ಜಲ್ಲಿ ಜರಿದಿದ್ದವು. ಚಿಕ್ಕಮಗಳೂರಿನಿಂದ ಶಿವಮೊಗ್ಗ ಹೊರಟಿದ್ದ ರೈಲನ್ನು ಅರ್ಧ ಗಂಟೆ ನಿಲ್ಲಿಸಿ ಜಲ್ಲಿ ಸರಿಪಡಿಸಲಾಯಿತು. ಬಳಿಕ ರೈಲು ಸಂಚಾರ ಸುಗಮಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>