<p><strong>ಮೂಡಿಗೆರೆ</strong>: ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ಗೆ ಅವಕಾಶ ನೀಡುವ ಹಾಗೂ ಕೇಸರಿ ಶಾಲು ನಿರ್ಬಂಧಿಸುವ ನಿರ್ಧಾರವನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಹಿಂದೂ ಜನಜಾಗೃತಿ ವೇದಿಕೆಯ ಕಾರ್ಯಕರ್ತರು ಒತ್ತಾಯಿಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>ರಾಜ್ಯ ಸರ್ಕಾರವು ಶಿಕ್ಷಣದ ಮೂಲಕ ತಾರತಮ್ಯ ನೀತಿ ಅನುಸರಿಸುತ್ತಿದೆ. ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ಗೆ ಅವಕಾಶ ನೀಡಿ, ಕೇಸರಿ ಶಾಲು ನಿರ್ಬಂಧಿಸುವ ನಿರ್ಧಾರವು ಧಾರ್ಮಿಕ ತಾರತಮ್ಯವಾಗಿದೆ. ಈ ನಿರ್ಧಾರವು ಸಮಾನತೆ, ಧರ್ಮನಿರಪೇಕ್ಷತೆ ಹಾಗೂ ಏಕರೂಪದ ಸಮವಸ್ತ್ರ ನೀತಿಗೆ ವಿರುದ್ಧವಾಗಿದೆ. 2022ರಲ್ಲಿ ಉಡುಪಿಯಲ್ಲಿ ಆರಂಭ ವಾದ ಹಿಜಾಬ್ ವಿವಾದವು ರಾಜ್ಯದಾ ದ್ಯಂತ ವಿಸ್ತರಿಸಿತ್ತು. ಈ ಪ್ರಕರಣದ ಕುರಿತು ನ್ಯಾಯಾಲಯ ಶಾಲೆ-ಕಾಲೇಜುಗಳಲ್ಲಿ ನಿಗದಿತ ಸಮ ವಸ್ತ್ರವನ್ನು ಪಾಲಿಸಬೇಕೆಂದು ಸೂಚಿಸಿತ್ತು. ಹಿಜಾಬ್ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾ ರಣೆಗೆ ಬಾಕಿಯಿದೆ. ಆದರೂ ಸರ್ಕಾರ ಹಿಜಾಬ್ಗೆ ಅವಕಾಶ ನೀಡಿ, ಕಾನೂನು ಉಲ್ಲಂಘಿಸಿದೆ ಎಂದು ದೂರಿದರು.</p>.<p>‘ಹಿಜಾಬ್ಗೆ ಅವಕಾಶ ನೀಡಿದರೆ ಇತರೆ ಸಮುದಾಯದ ವಿದ್ಯಾರ್ಥಿಗಳು ಸಹ ತಮ್ಮ ಧಾರ್ಮಿಕ ಚಿಹ್ನೆಗಳನ್ನು ಪ್ರದರ್ಶಿಸುವ ಸಾಧ್ಯತೆ ಇರುತ್ತದೆ. ಇದರಿಂದ ಶಿಕ್ಷಣದ ಮಹತ್ವ ಕಳೆದುಕೊಳ್ಳುತ್ತದೆ. ಹಾಗಾಗಿ ಹಿಜಾಬ್ಗೆ ಅವಕಾಶ ನೀಡಬಾರದು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ಈ ವೇಳೆ ಸಂಜಯ್ ಕೊಟ್ಟಿಗೆಹಾರ, ಬಸವರಾಜ್, ರಘು ಮೂಡಿಗೆರೆ, ಶರತ್ ಮಾಕೋನಹಳ್ಳಿ, ಧರ್ಮರಾಜ್ ಬಿನ್ನಡಿ ಮತ್ತಿತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-126-1596158959</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ</strong>: ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ಗೆ ಅವಕಾಶ ನೀಡುವ ಹಾಗೂ ಕೇಸರಿ ಶಾಲು ನಿರ್ಬಂಧಿಸುವ ನಿರ್ಧಾರವನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಹಿಂದೂ ಜನಜಾಗೃತಿ ವೇದಿಕೆಯ ಕಾರ್ಯಕರ್ತರು ಒತ್ತಾಯಿಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.</p>.<p>ರಾಜ್ಯ ಸರ್ಕಾರವು ಶಿಕ್ಷಣದ ಮೂಲಕ ತಾರತಮ್ಯ ನೀತಿ ಅನುಸರಿಸುತ್ತಿದೆ. ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ಗೆ ಅವಕಾಶ ನೀಡಿ, ಕೇಸರಿ ಶಾಲು ನಿರ್ಬಂಧಿಸುವ ನಿರ್ಧಾರವು ಧಾರ್ಮಿಕ ತಾರತಮ್ಯವಾಗಿದೆ. ಈ ನಿರ್ಧಾರವು ಸಮಾನತೆ, ಧರ್ಮನಿರಪೇಕ್ಷತೆ ಹಾಗೂ ಏಕರೂಪದ ಸಮವಸ್ತ್ರ ನೀತಿಗೆ ವಿರುದ್ಧವಾಗಿದೆ. 2022ರಲ್ಲಿ ಉಡುಪಿಯಲ್ಲಿ ಆರಂಭ ವಾದ ಹಿಜಾಬ್ ವಿವಾದವು ರಾಜ್ಯದಾ ದ್ಯಂತ ವಿಸ್ತರಿಸಿತ್ತು. ಈ ಪ್ರಕರಣದ ಕುರಿತು ನ್ಯಾಯಾಲಯ ಶಾಲೆ-ಕಾಲೇಜುಗಳಲ್ಲಿ ನಿಗದಿತ ಸಮ ವಸ್ತ್ರವನ್ನು ಪಾಲಿಸಬೇಕೆಂದು ಸೂಚಿಸಿತ್ತು. ಹಿಜಾಬ್ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾ ರಣೆಗೆ ಬಾಕಿಯಿದೆ. ಆದರೂ ಸರ್ಕಾರ ಹಿಜಾಬ್ಗೆ ಅವಕಾಶ ನೀಡಿ, ಕಾನೂನು ಉಲ್ಲಂಘಿಸಿದೆ ಎಂದು ದೂರಿದರು.</p>.<p>‘ಹಿಜಾಬ್ಗೆ ಅವಕಾಶ ನೀಡಿದರೆ ಇತರೆ ಸಮುದಾಯದ ವಿದ್ಯಾರ್ಥಿಗಳು ಸಹ ತಮ್ಮ ಧಾರ್ಮಿಕ ಚಿಹ್ನೆಗಳನ್ನು ಪ್ರದರ್ಶಿಸುವ ಸಾಧ್ಯತೆ ಇರುತ್ತದೆ. ಇದರಿಂದ ಶಿಕ್ಷಣದ ಮಹತ್ವ ಕಳೆದುಕೊಳ್ಳುತ್ತದೆ. ಹಾಗಾಗಿ ಹಿಜಾಬ್ಗೆ ಅವಕಾಶ ನೀಡಬಾರದು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ಈ ವೇಳೆ ಸಂಜಯ್ ಕೊಟ್ಟಿಗೆಹಾರ, ಬಸವರಾಜ್, ರಘು ಮೂಡಿಗೆರೆ, ಶರತ್ ಮಾಕೋನಹಳ್ಳಿ, ಧರ್ಮರಾಜ್ ಬಿನ್ನಡಿ ಮತ್ತಿತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-126-1596158959</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>