<p><strong>ಚಿಕ್ಕಮಗಳೂರು</strong>: ಜಿಲ್ಲೆಯಲ್ಲಿ ಎಲ್ಲೆಡೆ ಹೋಂಸ್ಟೇ ಮತ್ತು ರೆಸಾರ್ಟ್ಗಳು ತಲೆ ಎತ್ತುತ್ತಿದ್ದರೆ, ಮತ್ತೊಂದೆಡೆ ಸದ್ಯ ಇರುವ ಹೋಂಸ್ಟೆಗಳು ಅತಿಥಿಗಳ ಬರಗಾಲ ಎದುರಿಸುತ್ತಿವೆ. ಎರಡು ತಿಂಗಳಿನಿಂದ ಈಚೆಗೆ ಅತಿಥಿಗಳು ಕಡಿಮೆಯಾಗಿದ್ದು, ನಿರ್ವಹಣೆ ಮಾಡಲಾಗದೆ ಹೋಂಸ್ಟೇ ಮಾಲೀಕರು ಕಂಗಾಲಾಗಿದ್ದಾರೆ.</p>.<p>ಜಿಲ್ಲೆಯ ಮಲೆನಾಡು ಭಾಗದಲ್ಲಿ ಅದರಲ್ಲೂ ಮುಳ್ಳಯ್ಯನಗಿರಿ ಸುತ್ತಮುತ್ತ ಹೋಂಸ್ಟೇ ಮತ್ತು ರೆಸಾರ್ಟ್ಗಳ ಸಂಖ್ಯೆ ಹೆಚ್ಚಾಗುತ್ತಿವೆ. ಕೈಮರ, ಮಲ್ಲೇನಹಳ್ಳಿ ರಸ್ತೆಯಲ್ಲಿ ಸಾಗಿದರೆ ಹೊಸದಾಗಿ ನಿರ್ಮಾಣವಾಗುತ್ತಿರುವ ರೆಸಾರ್ಟ್ಗಳ ಸಂಖ್ಯೆ ಎಣಿಕೆಗೆ ಸಿಗದಷ್ಟಾಗಿವೆ.</p>.<p>ಈ ನಡುವೆ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರ ಭೇಟಿಗೆ ಇದ್ದ ಮುಕ್ತ ಅವಕಾಶವನ್ನು ಸೆಪ್ಟೆಂಬರ್ 1ರಿಂದ ನಿಯಂತ್ರಣ ಮಾಡಲಾಗಿದೆ. ಗಿರಿಭಾಗದಲ್ಲಿ ಆಗುತ್ತಿದ್ದ ವಾಹನ ದಟ್ಟಣೆ ನಿವಾರಿಸಲು ಜಿಲ್ಲಾಡಳಿತ ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ ಮಾಡಿದೆ. ಆ ಬಳಿಕ ಗಿರಿಭಾಗದಲ್ಲಿ ದಟ್ಟಣೆ ಸುಧಾರಣೆಯೂ ಆಗಿದೆ.</p>.<p>ವಾರಾಂತ್ಯ ಮತ್ತು ಸಾಲು ಸಾಲು ರಜೆಗಳ ಸಂದರ್ಭದಲ್ಲಿ ಮುಳ್ಳಯ್ಯನಗಿರಿ, ಬಾಬಾಬುಡನ್ಗಿರಿ, ಮಾಣಿಕ್ಯಧಾರ, ಗಾಳಿಕೆರೆ, ಝರಿ ಜಲಪಾತ, ಹೊನ್ನಮ್ಮನಹಳ್ಳ ವೀಕ್ಷಣೆಗೆ ಜನ ಮುಗಿ ಬೀಳುವುದು ಸಾಮಾನ್ಯ. ಲೆಕ್ಕವಿಲ್ಲದಷ್ಟು ವಾಹನಗಳು ಗಿರಿ ಏರಿ ಉಂಟಾಗುತ್ತಿದ್ದ ದಟ್ಟಣೆ ನಡುವೆ ಸಿಲುಕಿ ಪ್ರವಾಸಿಗರೂ ನರಳುತ್ತಿದ್ದರು.</p>.<p>ಇದನ್ನು ತಪ್ಪಿಸಲು ಏಕಕಾಲಕ್ಕೆ 600 (ದಿನಕ್ಕೆ 1,200) ವಾಹನಗಳಿಗಷ್ಟೇ ಅವಕಾಶ ನೀಡಲು ಜಿಲ್ಲಾಡಳಿತ ನಿರ್ಧರಿಸಿತು. ಈ ನಿರ್ಧಾರ ಕೈಗೊಂಡ ಬಳಿಕ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ ಎನ್ನುತ್ತಾರೆ ಹೋಂಸ್ಟೇ ಮಾಲೀಕರು.</p>.<p>‘ಜಿಲ್ಲಾಡಳಿತ ಮುಳ್ಳಯ್ಯನಗಿರಿ ದಟ್ಟಣೆ ಉಂಟಾಗದಂತೆ ಕ್ರಮ ಕೈಗೊಂಡಿದೆ. ಆದರೆ, ಪ್ರವಾಸಿಗರಿಗೆ ಚಿಕ್ಕಮಗಳೂರು ಎಂದರೆ ಮುಳ್ಳಯ್ಯನಗಿರಿ ಎಂಬಂತಾಗಿದೆ. ಆದ್ದರಿಂದ ನಿರ್ಬಂಧ ಇದೆ ಎಂಬ ಕಲ್ಪನೆಯಲ್ಲಿ ಪ್ರವಾಸಿಗರು ಚಿಕ್ಕಮಗಳೂರು ಕಡೆಗೆ ಪ್ರವಾಸವನ್ನೇ ಕಡಿಮೆ ಮಾಡಿದ್ದಾರೆ’ ಎಂಬುದು ಅವರ ಅಭಿಪ್ರಾಯ.</p>.<p>‘ಕೊಡಗು, ಸಕಲೇಶಪುರ ಭಾಗಕ್ಕೆ ಹೆಚ್ಚು ಪ್ರವಾಸಿಗರು ಹೋಗುತ್ತಿದ್ದಾರೆ. ಇಡೀ ವಾರ ಒಬ್ಬರೂ ಅತಿಥಿಗಳಿಲ್ಲದ ದಿನಗಳನ್ನು ಈಗ ನೋಡುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಈ ಪರಿಸ್ಥಿತಿ ಎದುರಾಗಿರುವುದು ಇದೇ ಮೊದಲು. ಹೋಂಸ್ಟೇಗಳ ನಿರ್ವಹಣೆಯೇ ಈಗ ಕಷ್ಟವಾಗಿದೆ’ ಎಂದು ಅವರು ಹೇಳುತ್ತಾರೆ.</p>.<p>ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರ ಸಂಖ್ಯೆಯನ್ನು ನಿಯಂತ್ರಿಸಿದರೆ ಇತರೆಡೆಗಳಿಗೆ ಪ್ರವಾಸಿಗರು ಬರಲಿದ್ದಾರೆ ಎಂದು ಜಿಲ್ಲಾಡಳಿತ ಅಂದಾಜಿಸಿತ್ತು. ಆದರೆ, ಇಡೀ ಜಿಲ್ಲೆಗೆ ಪ್ರವಾಸಿಗರು ಕಡಿಮೆಯಾಗಿದ್ದಾರೆ. ಇದು ಜಿಲ್ಲೆಯ ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತ ಎಂದು ಹೋಂಸ್ಟೇ ಮಾಲೀಕ ಸಂಜಯಗೌಡ ಬೇಸರ ವ್ಯಕ್ತಪಡಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಜಿಲ್ಲೆಯಲ್ಲಿ ಎಲ್ಲೆಡೆ ಹೋಂಸ್ಟೇ ಮತ್ತು ರೆಸಾರ್ಟ್ಗಳು ತಲೆ ಎತ್ತುತ್ತಿದ್ದರೆ, ಮತ್ತೊಂದೆಡೆ ಸದ್ಯ ಇರುವ ಹೋಂಸ್ಟೆಗಳು ಅತಿಥಿಗಳ ಬರಗಾಲ ಎದುರಿಸುತ್ತಿವೆ. ಎರಡು ತಿಂಗಳಿನಿಂದ ಈಚೆಗೆ ಅತಿಥಿಗಳು ಕಡಿಮೆಯಾಗಿದ್ದು, ನಿರ್ವಹಣೆ ಮಾಡಲಾಗದೆ ಹೋಂಸ್ಟೇ ಮಾಲೀಕರು ಕಂಗಾಲಾಗಿದ್ದಾರೆ.</p>.<p>ಜಿಲ್ಲೆಯ ಮಲೆನಾಡು ಭಾಗದಲ್ಲಿ ಅದರಲ್ಲೂ ಮುಳ್ಳಯ್ಯನಗಿರಿ ಸುತ್ತಮುತ್ತ ಹೋಂಸ್ಟೇ ಮತ್ತು ರೆಸಾರ್ಟ್ಗಳ ಸಂಖ್ಯೆ ಹೆಚ್ಚಾಗುತ್ತಿವೆ. ಕೈಮರ, ಮಲ್ಲೇನಹಳ್ಳಿ ರಸ್ತೆಯಲ್ಲಿ ಸಾಗಿದರೆ ಹೊಸದಾಗಿ ನಿರ್ಮಾಣವಾಗುತ್ತಿರುವ ರೆಸಾರ್ಟ್ಗಳ ಸಂಖ್ಯೆ ಎಣಿಕೆಗೆ ಸಿಗದಷ್ಟಾಗಿವೆ.</p>.<p>ಈ ನಡುವೆ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರ ಭೇಟಿಗೆ ಇದ್ದ ಮುಕ್ತ ಅವಕಾಶವನ್ನು ಸೆಪ್ಟೆಂಬರ್ 1ರಿಂದ ನಿಯಂತ್ರಣ ಮಾಡಲಾಗಿದೆ. ಗಿರಿಭಾಗದಲ್ಲಿ ಆಗುತ್ತಿದ್ದ ವಾಹನ ದಟ್ಟಣೆ ನಿವಾರಿಸಲು ಜಿಲ್ಲಾಡಳಿತ ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ ಮಾಡಿದೆ. ಆ ಬಳಿಕ ಗಿರಿಭಾಗದಲ್ಲಿ ದಟ್ಟಣೆ ಸುಧಾರಣೆಯೂ ಆಗಿದೆ.</p>.<p>ವಾರಾಂತ್ಯ ಮತ್ತು ಸಾಲು ಸಾಲು ರಜೆಗಳ ಸಂದರ್ಭದಲ್ಲಿ ಮುಳ್ಳಯ್ಯನಗಿರಿ, ಬಾಬಾಬುಡನ್ಗಿರಿ, ಮಾಣಿಕ್ಯಧಾರ, ಗಾಳಿಕೆರೆ, ಝರಿ ಜಲಪಾತ, ಹೊನ್ನಮ್ಮನಹಳ್ಳ ವೀಕ್ಷಣೆಗೆ ಜನ ಮುಗಿ ಬೀಳುವುದು ಸಾಮಾನ್ಯ. ಲೆಕ್ಕವಿಲ್ಲದಷ್ಟು ವಾಹನಗಳು ಗಿರಿ ಏರಿ ಉಂಟಾಗುತ್ತಿದ್ದ ದಟ್ಟಣೆ ನಡುವೆ ಸಿಲುಕಿ ಪ್ರವಾಸಿಗರೂ ನರಳುತ್ತಿದ್ದರು.</p>.<p>ಇದನ್ನು ತಪ್ಪಿಸಲು ಏಕಕಾಲಕ್ಕೆ 600 (ದಿನಕ್ಕೆ 1,200) ವಾಹನಗಳಿಗಷ್ಟೇ ಅವಕಾಶ ನೀಡಲು ಜಿಲ್ಲಾಡಳಿತ ನಿರ್ಧರಿಸಿತು. ಈ ನಿರ್ಧಾರ ಕೈಗೊಂಡ ಬಳಿಕ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ ಎನ್ನುತ್ತಾರೆ ಹೋಂಸ್ಟೇ ಮಾಲೀಕರು.</p>.<p>‘ಜಿಲ್ಲಾಡಳಿತ ಮುಳ್ಳಯ್ಯನಗಿರಿ ದಟ್ಟಣೆ ಉಂಟಾಗದಂತೆ ಕ್ರಮ ಕೈಗೊಂಡಿದೆ. ಆದರೆ, ಪ್ರವಾಸಿಗರಿಗೆ ಚಿಕ್ಕಮಗಳೂರು ಎಂದರೆ ಮುಳ್ಳಯ್ಯನಗಿರಿ ಎಂಬಂತಾಗಿದೆ. ಆದ್ದರಿಂದ ನಿರ್ಬಂಧ ಇದೆ ಎಂಬ ಕಲ್ಪನೆಯಲ್ಲಿ ಪ್ರವಾಸಿಗರು ಚಿಕ್ಕಮಗಳೂರು ಕಡೆಗೆ ಪ್ರವಾಸವನ್ನೇ ಕಡಿಮೆ ಮಾಡಿದ್ದಾರೆ’ ಎಂಬುದು ಅವರ ಅಭಿಪ್ರಾಯ.</p>.<p>‘ಕೊಡಗು, ಸಕಲೇಶಪುರ ಭಾಗಕ್ಕೆ ಹೆಚ್ಚು ಪ್ರವಾಸಿಗರು ಹೋಗುತ್ತಿದ್ದಾರೆ. ಇಡೀ ವಾರ ಒಬ್ಬರೂ ಅತಿಥಿಗಳಿಲ್ಲದ ದಿನಗಳನ್ನು ಈಗ ನೋಡುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಈ ಪರಿಸ್ಥಿತಿ ಎದುರಾಗಿರುವುದು ಇದೇ ಮೊದಲು. ಹೋಂಸ್ಟೇಗಳ ನಿರ್ವಹಣೆಯೇ ಈಗ ಕಷ್ಟವಾಗಿದೆ’ ಎಂದು ಅವರು ಹೇಳುತ್ತಾರೆ.</p>.<p>ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರ ಸಂಖ್ಯೆಯನ್ನು ನಿಯಂತ್ರಿಸಿದರೆ ಇತರೆಡೆಗಳಿಗೆ ಪ್ರವಾಸಿಗರು ಬರಲಿದ್ದಾರೆ ಎಂದು ಜಿಲ್ಲಾಡಳಿತ ಅಂದಾಜಿಸಿತ್ತು. ಆದರೆ, ಇಡೀ ಜಿಲ್ಲೆಗೆ ಪ್ರವಾಸಿಗರು ಕಡಿಮೆಯಾಗಿದ್ದಾರೆ. ಇದು ಜಿಲ್ಲೆಯ ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತ ಎಂದು ಹೋಂಸ್ಟೇ ಮಾಲೀಕ ಸಂಜಯಗೌಡ ಬೇಸರ ವ್ಯಕ್ತಪಡಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>