<p>ತರೀಕೆರೆ: ಲಿಂಗದಹಳ್ಳಿ ಹೋಬಳಿಯ ಜಯಪುರ ಗ್ರಾಮದೇವತೆ ಶ್ರೀದುರ್ಗಾಂಬ ದೇವಿಯ 30ನೇ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.</p>.<p>ಕೆಡಿಪಿ ಸದಸ್ಯೆ ರಚನಾ ಶ್ರೀನಿವಾಸ್ ಮಾತನಾಡಿ, ‘ತಣಿಗೆಬೈಲು, ಹುಣಸೆಬೈಲು, ವರ್ತೆಗುಂಡಿ ಭಾಗದ ಗ್ರಾಮಗಳಲ್ಲಿ ಶಿವನ ದೇವಾಲಯಗಳಿದ್ದು, ಜಯಪುರ ಗ್ರಾಮದಲ್ಲಿ ಶಿವಸತಿಯಾದ ಶ್ರೀದುರ್ಗಾಪರಮೇಶ್ವರಿ ದೇವಾಲಯ ನಿರ್ಮಾಣ ಮಾಡಿರುವುದು ಸಂತಸ ತಂದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮಸ್ಥರು ಸೇರಿ ಶ್ರೀದುರ್ಗಾಂಬ ದೇವಿಯ ವಾರ್ಷಿಕೋತ್ಸವವನ್ನು ನಡೆಸುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು.</p>.<p>ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ‘ಗ್ರಾಮಸ್ಥರ ಅನುಕೂಲಕ್ಕಾಗಿ ದುರ್ಗಾಂಬ ದೇವಾಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿಸಿಕೊಟ್ಟಿದ್ದು, ದೇವಾಲಯದ ಪ್ರಾಂಗಣಕ್ಕೆ ಟೈಲ್ಸ್ ಅಳವಡಿಸಲು ಸಹಕಾರ ನೀಡಲಾಗಿದೆ. ಮುಂದಿನ ದಿನಗಳಲ್ಲಿ ದೇವಾಲಯಕ್ಕೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಜಯಪುರ ಗ್ರಾಮದ ಪ್ರತಿ ಮನೆಯಿಂದ ಆರತಿಯನ್ನು ಮೆರವಣಿಗೆ ಮೂಲಕ ದೇವಾಲಯಕ್ಕೆ ತಂದು ದೇವಿಗೆ ಬೆಳಗಿ, ನಾಡಿನ ಒಳಿತಿಗಾಗಿ ಮತ್ತು ಮಳೆ ಬೆಳೆ ಸಮೃದ್ಧಿಯಾಗಿ ಬರಲೆಂದು ಪ್ರಾರ್ಥಿಸಲಾಯಿತು.</p>.<p>ದೇವಾಲಯ ಸಮಿತಿ ಪದಾಧಿಕಾರಿಗಳಾದ ಆರ್.ಮಂಜಣ್ಣ, ಜಿ.ರಾಮಣ್ಣ, ಟಿ.ಎಸ್.ಹೇಮ್ಲನಾಯ್ಕ, ಅಣ್ಣಪ್ಪ, ಸೀನಪ್ಪ, ಈಶ್ವರ್ ನಾಯ್ಕ, ಬಗರ್ ಹುಕುಂ ಸಮಿತಿ ಸದಸ್ಯ ಮೊಹಮ್ಮದ್ ಅಕ್ಬರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-126-938814387</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ಲಿಂಗದಹಳ್ಳಿ ಹೋಬಳಿಯ ಜಯಪುರ ಗ್ರಾಮದೇವತೆ ಶ್ರೀದುರ್ಗಾಂಬ ದೇವಿಯ 30ನೇ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.</p>.<p>ಕೆಡಿಪಿ ಸದಸ್ಯೆ ರಚನಾ ಶ್ರೀನಿವಾಸ್ ಮಾತನಾಡಿ, ‘ತಣಿಗೆಬೈಲು, ಹುಣಸೆಬೈಲು, ವರ್ತೆಗುಂಡಿ ಭಾಗದ ಗ್ರಾಮಗಳಲ್ಲಿ ಶಿವನ ದೇವಾಲಯಗಳಿದ್ದು, ಜಯಪುರ ಗ್ರಾಮದಲ್ಲಿ ಶಿವಸತಿಯಾದ ಶ್ರೀದುರ್ಗಾಪರಮೇಶ್ವರಿ ದೇವಾಲಯ ನಿರ್ಮಾಣ ಮಾಡಿರುವುದು ಸಂತಸ ತಂದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮಸ್ಥರು ಸೇರಿ ಶ್ರೀದುರ್ಗಾಂಬ ದೇವಿಯ ವಾರ್ಷಿಕೋತ್ಸವವನ್ನು ನಡೆಸುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು.</p>.<p>ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ‘ಗ್ರಾಮಸ್ಥರ ಅನುಕೂಲಕ್ಕಾಗಿ ದುರ್ಗಾಂಬ ದೇವಾಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿಸಿಕೊಟ್ಟಿದ್ದು, ದೇವಾಲಯದ ಪ್ರಾಂಗಣಕ್ಕೆ ಟೈಲ್ಸ್ ಅಳವಡಿಸಲು ಸಹಕಾರ ನೀಡಲಾಗಿದೆ. ಮುಂದಿನ ದಿನಗಳಲ್ಲಿ ದೇವಾಲಯಕ್ಕೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಜಯಪುರ ಗ್ರಾಮದ ಪ್ರತಿ ಮನೆಯಿಂದ ಆರತಿಯನ್ನು ಮೆರವಣಿಗೆ ಮೂಲಕ ದೇವಾಲಯಕ್ಕೆ ತಂದು ದೇವಿಗೆ ಬೆಳಗಿ, ನಾಡಿನ ಒಳಿತಿಗಾಗಿ ಮತ್ತು ಮಳೆ ಬೆಳೆ ಸಮೃದ್ಧಿಯಾಗಿ ಬರಲೆಂದು ಪ್ರಾರ್ಥಿಸಲಾಯಿತು.</p>.<p>ದೇವಾಲಯ ಸಮಿತಿ ಪದಾಧಿಕಾರಿಗಳಾದ ಆರ್.ಮಂಜಣ್ಣ, ಜಿ.ರಾಮಣ್ಣ, ಟಿ.ಎಸ್.ಹೇಮ್ಲನಾಯ್ಕ, ಅಣ್ಣಪ್ಪ, ಸೀನಪ್ಪ, ಈಶ್ವರ್ ನಾಯ್ಕ, ಬಗರ್ ಹುಕುಂ ಸಮಿತಿ ಸದಸ್ಯ ಮೊಹಮ್ಮದ್ ಅಕ್ಬರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-126-938814387</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>