<p><strong>ಚಿಕ್ಕಮಗಳೂರು:</strong> ಕಡೂರು ತಾಲ್ಲೂಕಿನಲ್ಲಿ ಅಕ್ರಮವಾಗಿ ಪಿಂಚಣಿ ಮಂಜೂರು ಮಾಡಿರುವ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮೀನಮೇಷ ಎಣಿಸುತ್ತಿದೆ ಎಂದು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಆಯುಕ್ತರಿಗೆ ದೂರು ಸಲ್ಲಿಕೆಯಾಗಿದೆ. ಕ್ರಮ ಕೈಗೊಂಡಿರುವ ಕುರಿತು ವರದಿ ಕೇಳಿ ಆಯುಕ್ತಾಲಯ ಮೂರು ನೆನಪೋಲೆ ಕಳುಹಿಸಿದ್ದರೂ ವರದಿ ಸಲ್ಲಿಕೆಯಾಗಿಲ್ಲ.</p>.<p>ಮಧ್ಯ ವಯಸ್ಸಿನ 64 ಜನರಿಗೆ ಪಿಂಚಣಿ ಮಂಜೂರು ಮಾಡಿರುವ ಆರೋಪದಲ್ಲಿ 11 ಅಧಿಕಾರಿಗಳ ವಿರುದ್ಧ ಮೊದಲಿಗೆ ಎಫ್ಐಆರ್ ದಾಖಲಾಗಿತ್ತು. ಸಂಧ್ಯಾ ಸುರಕ್ಷಾ ಯೋಜನೆಯಡಿ ವೃದ್ಧಾಪ್ಯ ವೇತನವನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನವರು ಮಾತ್ರ ಈ ಯೋಜನೆಗೆ ಅರ್ಹರು.</p>.<p>ಆದರೆ, ಸಾಮಾಜಿಕ ಭದ್ರತಾ ವಿಭಾಗದ ಸಿಬ್ಬಂದಿ ವಯಸ್ಸು ಲಾಗಿನ್ ದುರ್ಬಳಕೆ ಮಾಡಿಕೊಂಡು 35–40 ವಯಸ್ಸಿನವರಿಗೂ ವೇತನ ಮಂಜೂರು ಮಾಡಿದ್ದಾರೆ ಎಂಬ ದೂರುಗಳು ಜಿಲ್ಲಾಧಿಕಾರಿಗೆ ಸಲ್ಲಿಕೆಯಾಗಿದ್ದವು. ಅಂದಿನ ಉಪವಿಭಾಗಾಧಿಕಾರಿ ಅವರಿಂದ ಪ್ರಾಥಮಿಕ ತನಿಖೆ ಮಾಡಿಸಿದ್ದ ಹಿಂದಿನ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಶಿರಸ್ತೇದಾರ್ ಕಲ್ಮರುಡಪ್ಪ ಅವರನ್ನು ಅಮಾನತು ಮಾಡಿದ್ದರು.</p>.<p>ತನಿಖೆಯ ಮುಂದುವರಿದ ಭಾಗವಾಗಿ ಮತ್ತೊಂದು ವರದಿಯನ್ನು ಕಡೂರು ತಹಶೀಲ್ದಾರ್ ಸಲ್ಲಿಸಿ, ಕಸಬಾ ಹೋಬಳಿಯಲ್ಲಿ ಎನ್.ಕೆ.–4 ತಂತ್ರಾಂಶದಲ್ಲೂ 1,485 ಅನರ್ಹರಿಗೆ ಅಕ್ರಮವಾಗಿ ಪಿಂಚಣಿ ಮಂಜೂರಾಗಿದೆ. ಸರ್ಕಾರಕ್ಕೆ ₹2.17 ಕೋಟಿ ನಷ್ಟವಾಗಿದೆ ಎಂದು ಉಲ್ಲೇಖಿಸಿದ್ದಾರೆ.</p>.<p>ಎನ್.ಕೆ.(ನಾಡ ಕಚೇರಿ)–5 ತಂತ್ರಾಂಶದಲ್ಲಿ ಅಕ್ರಮವಾಗಿ 64 ಜನರಿಗೆ ಪಿಂಚಣಿ ಮಂಜೂರು ಮಾಡಿ ಸರ್ಕಾರಕ್ಕೆ ₹9.03 ಲಕ್ಷ ನಷ್ಟ ಮಾಡಿದ್ದಾರೆ ಎಂದು ತಹಶೀಲ್ದಾರ್ ಮೊದಲ ವರದಿಯಲ್ಲಿ ತಿಳಿಸಿದ್ದರು. ಅದನ್ನು ಆಧರಿಸಿ ತನಿಖೆ ನಡೆಸಿದ್ದ ಕಂದಾಯ ಇಲಾಖೆ, 11 ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದೆ. 8 ಜನರನ್ನು ಕರ್ತವ್ಯದಿಂದ ಅಮಾನತು ಕೂಡ ಮಾಡಲಾಗಿದೆ.</p>.<p>ಇನ್ನೂ ನಾಲ್ವರನ್ನು ಅಮಾನತು ಮಾಡಿಲ್ಲ. ಅಲ್ಲದೇ ಸರ್ಕಾರದ ಬೊಕ್ಕಸಕ್ಕೆ ಆಗಿರುವ ₹2.17 ಕೋಟಿ ನಷ್ಟವನ್ನು ವಸೂಲಿ ಮಾಡಲು ಕ್ರಮ ಕೈಗೊಂಡಿಲ್ಲ ಎಂದು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಆಯುಕ್ತಾಲಯಕ್ಕೆ ವಕೀಲ ಎಚ್.ಸಿ. ನಾಗರಾಜ್ ದೂರು ಸಲ್ಲಿಸಿದ್ದಾರೆ.</p>.<p>ಇದನ್ನು ಆಧರಿಸಿ 2025ರ ನ.28ರಲ್ಲಿ ಮೊದಲ ಪತ್ರವನ್ನು ಜಿಲ್ಲಾಧಿಕಾರಿಗೆ ಬರೆದಿರುವ ಆಯುಕ್ತಾಲಯ, ಕ್ರಮ ಕೈಗೊಂಡಿರುವ ಬಗ್ಗೆ ಮಾಹಿತಿ ಕೇಳಿದ್ದಾರೆ. 2026ರ ಜ.14ರಂದು ಮೊದಲ ನೆನಪೋಲೆ, ಫೆ.17ರಂದು ಎರಡನೇ ನೆನಪೋಲೆ, ಮಾ.13ರಂದು ಮೂರನೇ ನೆನಪೋಲೆಯನ್ನು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಆಯುಕ್ತರು ಕಳುಹಿಸಿದ್ದಾರೆ.</p>.<p>ಸಿಬ್ಬಂದಿ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಪ್ರತಿದಿನ ದೂರವಾಣಿ ಮೂಲಕ ಕೇಳಿದರೂ ಮಾಹಿತಿಯನ್ನಾಗಲಿ, ವರದಿಯನ್ನಾಗಲಿ ನೀಡಿಲ್ಲ ಎಂದು ಮೂರನೇ ನೆನಪೋಲೆಯಲ್ಲಿ ಆಯುಕ್ತರು ಉಲ್ಲೇಖಿಸಿದ್ದಾರೆ.</p>.<div><blockquote>ಅಕ್ರಮ ಪಿಂಚಣಿ ಪ್ರಕರಣದಲ್ಲಿ ತಪ್ಪು ಮಾಡಿರುವ ಯಾವುದೇ ಸಿಬ್ಬಂದಿಯನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಇನ್ನೂ ಕೆಲವರ ವಿರುದ್ಧ ಕ್ರಮವಾಗಬೇಕು ಎಂಬ ಮನವಿ ಸಲ್ಲಿಸಿದ್ದಾರೆ. ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.</blockquote><span class="attribution">ಎನ್.ಎಂ.ನಾಗರಾಜ್, ಜಿಲ್ಲಾಧಿಕಾರಿ</span></div>.<p><strong>‘ಪ್ರತ್ಯೇಕ ಎಫ್ಐಆರ್ ದಾಖಲಿಸಿಲ್ಲ’</strong></p><p>64 ಜನರಿಗೆ ಪಂಚಣಿ ನೀಡಿದವರ ವಿರುದ್ಧ ಕ್ರಮವಾಗಿದೆ. 1,485 ಅನರ್ಹರಿಗೆ ಪಿಂಚಣಿ ಮಂಜೂರು ಮಾಡಿದವರ ವಿರುದ್ಧ ಕ್ರಮವಾಗಿಲ್ಲ ಅಕ್ರಮ ಪಿಂಚಣಿ ಮಂಜೂರಾತಿ ವಿರುದ್ಧ ಹೋರಾಟ ನಡೆಸುತ್ತಿರುವ ವಕೀಲ ಎಚ್.ಸಿ.ನಾಗರಾಜ್ ದೂರಿದ್ದಾರೆ. ಈ ಪ್ರಕರಣಕ್ಕೆ ಪ್ರತ್ಯೇಕ ಎಫ್ಐಆರ್ ದಾಖಲಿಸಬೇಕಿತ್ತು. ಆದರೆ, ಅದೇ ಪ್ರಕರಣಕ್ಕೆ ಸೇರ್ಪಡೆ ಮಾಡಲಾಗಿದೆ. ಒತ್ತಡಕ್ಕೆ ಮಣಿದು ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಕಡೂರು ತಾಲ್ಲೂಕಿನಲ್ಲಿ ಅಕ್ರಮವಾಗಿ ಪಿಂಚಣಿ ಮಂಜೂರು ಮಾಡಿರುವ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮೀನಮೇಷ ಎಣಿಸುತ್ತಿದೆ ಎಂದು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಆಯುಕ್ತರಿಗೆ ದೂರು ಸಲ್ಲಿಕೆಯಾಗಿದೆ. ಕ್ರಮ ಕೈಗೊಂಡಿರುವ ಕುರಿತು ವರದಿ ಕೇಳಿ ಆಯುಕ್ತಾಲಯ ಮೂರು ನೆನಪೋಲೆ ಕಳುಹಿಸಿದ್ದರೂ ವರದಿ ಸಲ್ಲಿಕೆಯಾಗಿಲ್ಲ.</p>.<p>ಮಧ್ಯ ವಯಸ್ಸಿನ 64 ಜನರಿಗೆ ಪಿಂಚಣಿ ಮಂಜೂರು ಮಾಡಿರುವ ಆರೋಪದಲ್ಲಿ 11 ಅಧಿಕಾರಿಗಳ ವಿರುದ್ಧ ಮೊದಲಿಗೆ ಎಫ್ಐಆರ್ ದಾಖಲಾಗಿತ್ತು. ಸಂಧ್ಯಾ ಸುರಕ್ಷಾ ಯೋಜನೆಯಡಿ ವೃದ್ಧಾಪ್ಯ ವೇತನವನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನವರು ಮಾತ್ರ ಈ ಯೋಜನೆಗೆ ಅರ್ಹರು.</p>.<p>ಆದರೆ, ಸಾಮಾಜಿಕ ಭದ್ರತಾ ವಿಭಾಗದ ಸಿಬ್ಬಂದಿ ವಯಸ್ಸು ಲಾಗಿನ್ ದುರ್ಬಳಕೆ ಮಾಡಿಕೊಂಡು 35–40 ವಯಸ್ಸಿನವರಿಗೂ ವೇತನ ಮಂಜೂರು ಮಾಡಿದ್ದಾರೆ ಎಂಬ ದೂರುಗಳು ಜಿಲ್ಲಾಧಿಕಾರಿಗೆ ಸಲ್ಲಿಕೆಯಾಗಿದ್ದವು. ಅಂದಿನ ಉಪವಿಭಾಗಾಧಿಕಾರಿ ಅವರಿಂದ ಪ್ರಾಥಮಿಕ ತನಿಖೆ ಮಾಡಿಸಿದ್ದ ಹಿಂದಿನ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಶಿರಸ್ತೇದಾರ್ ಕಲ್ಮರುಡಪ್ಪ ಅವರನ್ನು ಅಮಾನತು ಮಾಡಿದ್ದರು.</p>.<p>ತನಿಖೆಯ ಮುಂದುವರಿದ ಭಾಗವಾಗಿ ಮತ್ತೊಂದು ವರದಿಯನ್ನು ಕಡೂರು ತಹಶೀಲ್ದಾರ್ ಸಲ್ಲಿಸಿ, ಕಸಬಾ ಹೋಬಳಿಯಲ್ಲಿ ಎನ್.ಕೆ.–4 ತಂತ್ರಾಂಶದಲ್ಲೂ 1,485 ಅನರ್ಹರಿಗೆ ಅಕ್ರಮವಾಗಿ ಪಿಂಚಣಿ ಮಂಜೂರಾಗಿದೆ. ಸರ್ಕಾರಕ್ಕೆ ₹2.17 ಕೋಟಿ ನಷ್ಟವಾಗಿದೆ ಎಂದು ಉಲ್ಲೇಖಿಸಿದ್ದಾರೆ.</p>.<p>ಎನ್.ಕೆ.(ನಾಡ ಕಚೇರಿ)–5 ತಂತ್ರಾಂಶದಲ್ಲಿ ಅಕ್ರಮವಾಗಿ 64 ಜನರಿಗೆ ಪಿಂಚಣಿ ಮಂಜೂರು ಮಾಡಿ ಸರ್ಕಾರಕ್ಕೆ ₹9.03 ಲಕ್ಷ ನಷ್ಟ ಮಾಡಿದ್ದಾರೆ ಎಂದು ತಹಶೀಲ್ದಾರ್ ಮೊದಲ ವರದಿಯಲ್ಲಿ ತಿಳಿಸಿದ್ದರು. ಅದನ್ನು ಆಧರಿಸಿ ತನಿಖೆ ನಡೆಸಿದ್ದ ಕಂದಾಯ ಇಲಾಖೆ, 11 ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದೆ. 8 ಜನರನ್ನು ಕರ್ತವ್ಯದಿಂದ ಅಮಾನತು ಕೂಡ ಮಾಡಲಾಗಿದೆ.</p>.<p>ಇನ್ನೂ ನಾಲ್ವರನ್ನು ಅಮಾನತು ಮಾಡಿಲ್ಲ. ಅಲ್ಲದೇ ಸರ್ಕಾರದ ಬೊಕ್ಕಸಕ್ಕೆ ಆಗಿರುವ ₹2.17 ಕೋಟಿ ನಷ್ಟವನ್ನು ವಸೂಲಿ ಮಾಡಲು ಕ್ರಮ ಕೈಗೊಂಡಿಲ್ಲ ಎಂದು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಆಯುಕ್ತಾಲಯಕ್ಕೆ ವಕೀಲ ಎಚ್.ಸಿ. ನಾಗರಾಜ್ ದೂರು ಸಲ್ಲಿಸಿದ್ದಾರೆ.</p>.<p>ಇದನ್ನು ಆಧರಿಸಿ 2025ರ ನ.28ರಲ್ಲಿ ಮೊದಲ ಪತ್ರವನ್ನು ಜಿಲ್ಲಾಧಿಕಾರಿಗೆ ಬರೆದಿರುವ ಆಯುಕ್ತಾಲಯ, ಕ್ರಮ ಕೈಗೊಂಡಿರುವ ಬಗ್ಗೆ ಮಾಹಿತಿ ಕೇಳಿದ್ದಾರೆ. 2026ರ ಜ.14ರಂದು ಮೊದಲ ನೆನಪೋಲೆ, ಫೆ.17ರಂದು ಎರಡನೇ ನೆನಪೋಲೆ, ಮಾ.13ರಂದು ಮೂರನೇ ನೆನಪೋಲೆಯನ್ನು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಆಯುಕ್ತರು ಕಳುಹಿಸಿದ್ದಾರೆ.</p>.<p>ಸಿಬ್ಬಂದಿ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಪ್ರತಿದಿನ ದೂರವಾಣಿ ಮೂಲಕ ಕೇಳಿದರೂ ಮಾಹಿತಿಯನ್ನಾಗಲಿ, ವರದಿಯನ್ನಾಗಲಿ ನೀಡಿಲ್ಲ ಎಂದು ಮೂರನೇ ನೆನಪೋಲೆಯಲ್ಲಿ ಆಯುಕ್ತರು ಉಲ್ಲೇಖಿಸಿದ್ದಾರೆ.</p>.<div><blockquote>ಅಕ್ರಮ ಪಿಂಚಣಿ ಪ್ರಕರಣದಲ್ಲಿ ತಪ್ಪು ಮಾಡಿರುವ ಯಾವುದೇ ಸಿಬ್ಬಂದಿಯನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಇನ್ನೂ ಕೆಲವರ ವಿರುದ್ಧ ಕ್ರಮವಾಗಬೇಕು ಎಂಬ ಮನವಿ ಸಲ್ಲಿಸಿದ್ದಾರೆ. ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.</blockquote><span class="attribution">ಎನ್.ಎಂ.ನಾಗರಾಜ್, ಜಿಲ್ಲಾಧಿಕಾರಿ</span></div>.<p><strong>‘ಪ್ರತ್ಯೇಕ ಎಫ್ಐಆರ್ ದಾಖಲಿಸಿಲ್ಲ’</strong></p><p>64 ಜನರಿಗೆ ಪಂಚಣಿ ನೀಡಿದವರ ವಿರುದ್ಧ ಕ್ರಮವಾಗಿದೆ. 1,485 ಅನರ್ಹರಿಗೆ ಪಿಂಚಣಿ ಮಂಜೂರು ಮಾಡಿದವರ ವಿರುದ್ಧ ಕ್ರಮವಾಗಿಲ್ಲ ಅಕ್ರಮ ಪಿಂಚಣಿ ಮಂಜೂರಾತಿ ವಿರುದ್ಧ ಹೋರಾಟ ನಡೆಸುತ್ತಿರುವ ವಕೀಲ ಎಚ್.ಸಿ.ನಾಗರಾಜ್ ದೂರಿದ್ದಾರೆ. ಈ ಪ್ರಕರಣಕ್ಕೆ ಪ್ರತ್ಯೇಕ ಎಫ್ಐಆರ್ ದಾಖಲಿಸಬೇಕಿತ್ತು. ಆದರೆ, ಅದೇ ಪ್ರಕರಣಕ್ಕೆ ಸೇರ್ಪಡೆ ಮಾಡಲಾಗಿದೆ. ಒತ್ತಡಕ್ಕೆ ಮಣಿದು ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>