<p>ಚಿಕ್ಕಮಗಳೂರು: ಪಂಚಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಗೆ ಆದ್ಯತೆ ನೀಡಿ ಅನುದಾನ ಮಂಜೂರು ಮಾಡುವ ಮೂಲಕ ರಾಜ್ಯ ಸರ್ಕಾರ ಜನಪರ ಆಡಳಿತ ನಡೆಸುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.</p>.<p>ಕ್ಷೇತ್ರದ ಕಳಸಾಪುರದಲ್ಲಿ ಬಂಗಾರದ ಮನುಷ್ಯ ಚಿತ್ರೀಕರಣಗೊಂಡಿದ್ದ ರಸ್ತೆಗೆ ₹50 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲು ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಲಕ್ಯಾ ಹೋಬಳಿಯ ಗ್ರಾಮೀಣಾಭಿವೃದ್ಧಿಗೆ ಸುಮಾರು ₹6.15 ಲಕ್ಷ ಕೋಟಿ ಅನುದಾನ ನೀಡಲಾಗಿದ್ದು, 2023-24ನೇ ಸಾಲಿನ ಕಾಮಗಾರಿಗಳು ಮುಕ್ತಾಯ ಹಂತದಲ್ಲಿದ್ದು, ಉಳಿದ ಕಾಮಗಾರಿ ಶೀಘ್ರದಲ್ಲಿಯೇ ಆರಂಭವಾಗಲಿದೆೆ ಎಂದು ಭರವಸೆ ನೀಡಿದರು.</p>.<p>ಬಂಗಾರದ ಮನುಷ್ಯ ಚಿತ್ರದಲ್ಲಿ ನಗುನಗುತಾ ನಲಿ ಎಂದು ಹಾಡಿ ಚಿತ್ರೀಕರಣ ನಡೆಸಿದ ಈ ರಸ್ತೆಯನ್ನು ಅಭಿವೃದ್ಧಿಪಡಿಸಿ, ದೇಶ ಮತ್ತು ರಾಜ್ಯ ಕಂಡ ಅಪ್ರತಿಮ ವರನಟ ರಾಜ್ಕುಮಾರ್ ಅವರ 98ನೇ ಜನ್ಮದಿನೋತ್ಸವದ ಅಂಗವಾಗಿ ರಾಜ್ಕುಮಾರ್ ಅವರ ನಾಮಕರಣ ಮಾಡಿ ಅರ್ಪಣೆ ಮಾಡಲು ಉದ್ದೇಶಿಸಲಾಗಿದೆ ಎಂದರು.</p>.<p>ಸಮಾಜಕ್ಕೆ ಮಾದರಿಯಾಗಿ ಉತ್ತಮ ಸಂದೇಶ ನೀಡುವ ಕಲಾತ್ಮಕ ಚಿತ್ರಗಳಿಗೆ ಆದ್ಯತೆ ನೀಡುತ್ತಿದ್ದ ಡಾರಾಜ್ಕುಮಾರ್ ಅವರು ಬಂಗಾರದ ಮನುಷ್ಯ ಚಿತ್ರದ ಮೂಲಕ ರೈತ ಕುಟುಂಬಕ್ಕೆ ದೊಡ್ಡ ಕೊಡುಗೆ ನೀಡಿ ಭೂಮಿ ನಂಬಿದವರು ಹಾಳಾಗುವುದಿಲ್ಲ ಎಂಬ ನೀತಿಯನ್ನು ಸಾರಿದ್ದಾರೆ ಎಂದು ಶ್ಲಾಘಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವರತ್ನ, ಮಾಜಿ ಅಧ್ಯಕ್ಷೆ ರಾಧಮ್ಮ, ಅಚ್ಯುತರಾವ್, ಜಿಪಂ ಮಾಜಿ ಸದಸ್ಯ ಕೆ.ವಿ.ಮಂಜುನಾಥ್, ಮುಖಂಡರಾದ ಕೆಂಗೇಗೌಡ, ಮರುಳಸಿದ್ಧಪ್ಪ, ವೆಂಕಟೇಶ್, ತಿಮ್ಮೇಗೌಡ, ಹರ್ಷದ್, ನಾಗರಾಜ್, ಶ್ರೀಧರ್, ಅನುಸೂಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-126-1928315790</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಪಂಚಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಗೆ ಆದ್ಯತೆ ನೀಡಿ ಅನುದಾನ ಮಂಜೂರು ಮಾಡುವ ಮೂಲಕ ರಾಜ್ಯ ಸರ್ಕಾರ ಜನಪರ ಆಡಳಿತ ನಡೆಸುತ್ತಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.</p>.<p>ಕ್ಷೇತ್ರದ ಕಳಸಾಪುರದಲ್ಲಿ ಬಂಗಾರದ ಮನುಷ್ಯ ಚಿತ್ರೀಕರಣಗೊಂಡಿದ್ದ ರಸ್ತೆಗೆ ₹50 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲು ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಲಕ್ಯಾ ಹೋಬಳಿಯ ಗ್ರಾಮೀಣಾಭಿವೃದ್ಧಿಗೆ ಸುಮಾರು ₹6.15 ಲಕ್ಷ ಕೋಟಿ ಅನುದಾನ ನೀಡಲಾಗಿದ್ದು, 2023-24ನೇ ಸಾಲಿನ ಕಾಮಗಾರಿಗಳು ಮುಕ್ತಾಯ ಹಂತದಲ್ಲಿದ್ದು, ಉಳಿದ ಕಾಮಗಾರಿ ಶೀಘ್ರದಲ್ಲಿಯೇ ಆರಂಭವಾಗಲಿದೆೆ ಎಂದು ಭರವಸೆ ನೀಡಿದರು.</p>.<p>ಬಂಗಾರದ ಮನುಷ್ಯ ಚಿತ್ರದಲ್ಲಿ ನಗುನಗುತಾ ನಲಿ ಎಂದು ಹಾಡಿ ಚಿತ್ರೀಕರಣ ನಡೆಸಿದ ಈ ರಸ್ತೆಯನ್ನು ಅಭಿವೃದ್ಧಿಪಡಿಸಿ, ದೇಶ ಮತ್ತು ರಾಜ್ಯ ಕಂಡ ಅಪ್ರತಿಮ ವರನಟ ರಾಜ್ಕುಮಾರ್ ಅವರ 98ನೇ ಜನ್ಮದಿನೋತ್ಸವದ ಅಂಗವಾಗಿ ರಾಜ್ಕುಮಾರ್ ಅವರ ನಾಮಕರಣ ಮಾಡಿ ಅರ್ಪಣೆ ಮಾಡಲು ಉದ್ದೇಶಿಸಲಾಗಿದೆ ಎಂದರು.</p>.<p>ಸಮಾಜಕ್ಕೆ ಮಾದರಿಯಾಗಿ ಉತ್ತಮ ಸಂದೇಶ ನೀಡುವ ಕಲಾತ್ಮಕ ಚಿತ್ರಗಳಿಗೆ ಆದ್ಯತೆ ನೀಡುತ್ತಿದ್ದ ಡಾರಾಜ್ಕುಮಾರ್ ಅವರು ಬಂಗಾರದ ಮನುಷ್ಯ ಚಿತ್ರದ ಮೂಲಕ ರೈತ ಕುಟುಂಬಕ್ಕೆ ದೊಡ್ಡ ಕೊಡುಗೆ ನೀಡಿ ಭೂಮಿ ನಂಬಿದವರು ಹಾಳಾಗುವುದಿಲ್ಲ ಎಂಬ ನೀತಿಯನ್ನು ಸಾರಿದ್ದಾರೆ ಎಂದು ಶ್ಲಾಘಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವರತ್ನ, ಮಾಜಿ ಅಧ್ಯಕ್ಷೆ ರಾಧಮ್ಮ, ಅಚ್ಯುತರಾವ್, ಜಿಪಂ ಮಾಜಿ ಸದಸ್ಯ ಕೆ.ವಿ.ಮಂಜುನಾಥ್, ಮುಖಂಡರಾದ ಕೆಂಗೇಗೌಡ, ಮರುಳಸಿದ್ಧಪ್ಪ, ವೆಂಕಟೇಶ್, ತಿಮ್ಮೇಗೌಡ, ಹರ್ಷದ್, ನಾಗರಾಜ್, ಶ್ರೀಧರ್, ಅನುಸೂಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-126-1928315790</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>