<p><strong>ಚಿಕ್ಕಮಗಳೂರು:</strong> ಕೆಲ ಕಾರ್ಮಿಕ ಸಂಘಟನೆಗಳು ಕಂಪನಿ ಆಡಳಿತದೊಂದಿಗೆ ಶಾಮೀಲಾಗುತ್ತಿದ್ದಾರೆ. ಇದರಿಂದ ಕಾರ್ಮಿಕರ ಶೋಷಣೆ ತಪ್ಪಿಲ್ಲ ಎಂದು ಐಎನ್ಟಿಯುಸಿ ರಾಜ್ಯ ಘಟಕದ ಅಧ್ಯಕ್ಷ ಲಕ್ಷ್ಮಿವೆಂಕಟೇಶ್ವರ ಹೇಳಿದರು.</p>.<p>ಕಾರ್ಮಿಕರ ಹಕ್ಕು ರಕ್ಷಣೆಗೆ ಹುಟ್ಟಿಕೊಂಡಿರುವ ಅನೇಕ ಕಾರ್ಮಿಕ ಸಂಘಟನೆಗಳು ಹೋರಾಟ ಮರೆತಿವೆ. ಕಾರ್ಮಿಕರಿಗೆ ಅನ್ಯಾಯವಾದರೆ ಕೆಂಬಾವುಟಗಳು ಬೀದಿಯಲ್ಲಿ ಹಾರಾಡುತ್ತಿದ್ದವು. ಈಗ ಅವು ಕಾಣೆಯಾಗಿವೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಬೇಸರ ವ್ಯಕ್ತಪಡಿಸಿದರು.</p>.<p>ಅಂದು ಕಾರ್ಮಿಕರ ಪರವಾಗಿ ಘಟಾನುಘಟಿ ನಾಯಕರಿದ್ದರು. ಆ ಹೋರಾಟಕ್ಕೆ ಮಣಿದ ಕಂಪನಿಗಳು, ಸರ್ಕಾರಗಳು ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಡುತ್ತಿದ್ದವು. ಈಗ ಆಡಳಿತ ಮಂಡಳಿಗಳ ಜತೆ ಶಾಮೀಲಾಗಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಕಾರ್ಮಿಕರೇ ಹೋರಾಟಗಳನ್ನು ಕಟ್ಟಲಿದ್ದಾರೆ ಎಂದರು.</p>.<p>ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಾನಂದಸ್ವಾಮಿ ಮಾತನಾಡಿ, ‘1889ರಲ್ಲಿ ಅಮೆರಿಕಾದಲ್ಲಿ ಕೆಲಸದ ಅವಧಿಯನ್ನು 8 ಗಂಟೆ ಗಂಟೆಗೆ ನಿಗದಿ ಮಾಡಬೇಕು ಎಂದು ಕಾರ್ಮಿಕರು ನಡೆಸಿದ ಹೋರಾಟಕ್ಕೆ ಮಣಿದ ಕಾನೂನಿನ ಮಾನ್ಯತೆ ದೊರೆಯಿತು. ಆ ದಿನದ ನೆನಪಿನಲ್ಲಿ ಮೇ 1ರಂದು ಕಾರ್ಮಿಕ ದಿನ ಆಚರಿಸಲಾಗುತ್ತಿದೆ’ ಎಂದರು.</p>.<p>ಕಾರ್ಮಿಕ ಮುಖಂಡರಾದ ಸೆಲ್ವಂ, ರಾಮಚಂದ್ರ ಒಡೆಯರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಕೆಲ ಕಾರ್ಮಿಕ ಸಂಘಟನೆಗಳು ಕಂಪನಿ ಆಡಳಿತದೊಂದಿಗೆ ಶಾಮೀಲಾಗುತ್ತಿದ್ದಾರೆ. ಇದರಿಂದ ಕಾರ್ಮಿಕರ ಶೋಷಣೆ ತಪ್ಪಿಲ್ಲ ಎಂದು ಐಎನ್ಟಿಯುಸಿ ರಾಜ್ಯ ಘಟಕದ ಅಧ್ಯಕ್ಷ ಲಕ್ಷ್ಮಿವೆಂಕಟೇಶ್ವರ ಹೇಳಿದರು.</p>.<p>ಕಾರ್ಮಿಕರ ಹಕ್ಕು ರಕ್ಷಣೆಗೆ ಹುಟ್ಟಿಕೊಂಡಿರುವ ಅನೇಕ ಕಾರ್ಮಿಕ ಸಂಘಟನೆಗಳು ಹೋರಾಟ ಮರೆತಿವೆ. ಕಾರ್ಮಿಕರಿಗೆ ಅನ್ಯಾಯವಾದರೆ ಕೆಂಬಾವುಟಗಳು ಬೀದಿಯಲ್ಲಿ ಹಾರಾಡುತ್ತಿದ್ದವು. ಈಗ ಅವು ಕಾಣೆಯಾಗಿವೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಬೇಸರ ವ್ಯಕ್ತಪಡಿಸಿದರು.</p>.<p>ಅಂದು ಕಾರ್ಮಿಕರ ಪರವಾಗಿ ಘಟಾನುಘಟಿ ನಾಯಕರಿದ್ದರು. ಆ ಹೋರಾಟಕ್ಕೆ ಮಣಿದ ಕಂಪನಿಗಳು, ಸರ್ಕಾರಗಳು ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಡುತ್ತಿದ್ದವು. ಈಗ ಆಡಳಿತ ಮಂಡಳಿಗಳ ಜತೆ ಶಾಮೀಲಾಗಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಕಾರ್ಮಿಕರೇ ಹೋರಾಟಗಳನ್ನು ಕಟ್ಟಲಿದ್ದಾರೆ ಎಂದರು.</p>.<p>ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಾನಂದಸ್ವಾಮಿ ಮಾತನಾಡಿ, ‘1889ರಲ್ಲಿ ಅಮೆರಿಕಾದಲ್ಲಿ ಕೆಲಸದ ಅವಧಿಯನ್ನು 8 ಗಂಟೆ ಗಂಟೆಗೆ ನಿಗದಿ ಮಾಡಬೇಕು ಎಂದು ಕಾರ್ಮಿಕರು ನಡೆಸಿದ ಹೋರಾಟಕ್ಕೆ ಮಣಿದ ಕಾನೂನಿನ ಮಾನ್ಯತೆ ದೊರೆಯಿತು. ಆ ದಿನದ ನೆನಪಿನಲ್ಲಿ ಮೇ 1ರಂದು ಕಾರ್ಮಿಕ ದಿನ ಆಚರಿಸಲಾಗುತ್ತಿದೆ’ ಎಂದರು.</p>.<p>ಕಾರ್ಮಿಕ ಮುಖಂಡರಾದ ಸೆಲ್ವಂ, ರಾಮಚಂದ್ರ ಒಡೆಯರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>