<p>ಚಿಕ್ಕಮಗಳೂರು: ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಬೆಳಕು ಚೆಲ್ಲಲು ಪತ್ರಿಕೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಎಂ.ಎನ್.ನಾಗರಾಜ್ ಹೇಳಿದರು.</p>.<p>ನಗರದ ಪ್ರೆಸ್ ಕ್ಲಬ್ನಲ್ಲಿ ಆಯೋಜಿ ಸಿದ್ದ ‘ತಿಂಗಳ ಅತಿಥಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪತ್ರಿಕೋದ್ಯಮಕ್ಕೆ ತನ್ನದೇ ಆದ ವಿಶೇಷ ಸ್ಥಾನವಿದೆ. ಪತ್ರಿಕೋದ್ಯಮ ಪ್ರಜ್ಞಾವಂತರ ಸಮೂಹವಾಗಿದೆ. ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಮಾಧ್ಯಮ ರಂಗ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದೆ’ ಎಂದರು.</p>.<p>ಸ್ವಾತಂತ್ರ್ಯ ನಂತರದ ದಿನಗಳಲ್ಲಿ ದೇಶದಲ್ಲಿ ಪ್ರಮುಖ ಪಾತ್ರವನ್ನು ಮಾಧ್ಯಮರಂಗ ವಹಿಸಿದೆ. ಜನಾಭಿಪ್ರಾಯ ರೂಪಿಸಬೇಕಾದರೆ ಮಾಧ್ಯಮ ಮುಖ್ಯ. ಜಿಲ್ಲೆಯ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಕೊಂಡಿಯಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.</p>.<p>‘ಡಿಜಿಟಲ್ ಯುಗದಲ್ಲೂ ಮಾಧ್ಯಮಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಜವಾಬ್ದಾರಿ ಮತ್ತು ಸಮಾಜ ತಿದ್ದುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿದ್ದು, ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವವನ್ನು ಮಾಧ್ಯಮಗಳು ರೂಢಿಸಿಕೊಳ್ಳಬೇಕು’ ಎಂದರು.</p>.<p>ಆಹಾರ, ಶಿಕ್ಷಣ, ಆರೋಗ್ಯ ಯೋಜನೆಗಳು ಜನರಿಗೆ ತಲುಪುತ್ತಿವೆ. ಜನ ನೀಡಿದ ಅಭಿಪ್ರಾಯಗಳನ್ನು ನೋಡಿ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಭಿವೃದ್ಧಿಯ ಮಾದರಿಯಾಗಿ ಪತ್ರಿಕೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರೆಸ್ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಎಂ.ಎಸ್.ಉಮೇಶಕುಮಾರ್, 18 ವರ್ಷಗಳಿಂದ ನಗರದಲ್ಲಿ ಪ್ರೆಸ್ ಕ್ಲಬ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಬಾಡಿಗೆ ಕಟ್ಟಡದಲ್ಲಿದ್ದು, ನಿವೇಶನ ಗುರುತಿಸಲಾಗಿದೆ. ಆದಷ್ಟು ಬೇಗ ನಿವೇಶನವನ್ನು ಚಿಕ್ಕಮಗಳೂರು ಪ್ರೆಸ್ ಕ್ಲಬ್ಗೆ ಹಸ್ತಾಂತರ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಪ್ರೆಸ್ ಕ್ಲಬ್ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಪ್ರೆಸ್ ಕ್ಲಬ್ ಅಧ್ಯಕ್ಷ ಸಿ.ಡಿ.ಚಂದ್ರೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎನ್.ಕೆ.ಗೋಪಿ, ಖಜಾಂಚಿ ಪುನೀತ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-126-19722721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಬೆಳಕು ಚೆಲ್ಲಲು ಪತ್ರಿಕೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಎಂ.ಎನ್.ನಾಗರಾಜ್ ಹೇಳಿದರು.</p>.<p>ನಗರದ ಪ್ರೆಸ್ ಕ್ಲಬ್ನಲ್ಲಿ ಆಯೋಜಿ ಸಿದ್ದ ‘ತಿಂಗಳ ಅತಿಥಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪತ್ರಿಕೋದ್ಯಮಕ್ಕೆ ತನ್ನದೇ ಆದ ವಿಶೇಷ ಸ್ಥಾನವಿದೆ. ಪತ್ರಿಕೋದ್ಯಮ ಪ್ರಜ್ಞಾವಂತರ ಸಮೂಹವಾಗಿದೆ. ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಮಾಧ್ಯಮ ರಂಗ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದೆ’ ಎಂದರು.</p>.<p>ಸ್ವಾತಂತ್ರ್ಯ ನಂತರದ ದಿನಗಳಲ್ಲಿ ದೇಶದಲ್ಲಿ ಪ್ರಮುಖ ಪಾತ್ರವನ್ನು ಮಾಧ್ಯಮರಂಗ ವಹಿಸಿದೆ. ಜನಾಭಿಪ್ರಾಯ ರೂಪಿಸಬೇಕಾದರೆ ಮಾಧ್ಯಮ ಮುಖ್ಯ. ಜಿಲ್ಲೆಯ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಕೊಂಡಿಯಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.</p>.<p>‘ಡಿಜಿಟಲ್ ಯುಗದಲ್ಲೂ ಮಾಧ್ಯಮಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಜವಾಬ್ದಾರಿ ಮತ್ತು ಸಮಾಜ ತಿದ್ದುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿದ್ದು, ಇನ್ನೂ ಹೆಚ್ಚಿನ ಜವಾಬ್ದಾರಿಯಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವವನ್ನು ಮಾಧ್ಯಮಗಳು ರೂಢಿಸಿಕೊಳ್ಳಬೇಕು’ ಎಂದರು.</p>.<p>ಆಹಾರ, ಶಿಕ್ಷಣ, ಆರೋಗ್ಯ ಯೋಜನೆಗಳು ಜನರಿಗೆ ತಲುಪುತ್ತಿವೆ. ಜನ ನೀಡಿದ ಅಭಿಪ್ರಾಯಗಳನ್ನು ನೋಡಿ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಭಿವೃದ್ಧಿಯ ಮಾದರಿಯಾಗಿ ಪತ್ರಿಕೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರೆಸ್ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಎಂ.ಎಸ್.ಉಮೇಶಕುಮಾರ್, 18 ವರ್ಷಗಳಿಂದ ನಗರದಲ್ಲಿ ಪ್ರೆಸ್ ಕ್ಲಬ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಬಾಡಿಗೆ ಕಟ್ಟಡದಲ್ಲಿದ್ದು, ನಿವೇಶನ ಗುರುತಿಸಲಾಗಿದೆ. ಆದಷ್ಟು ಬೇಗ ನಿವೇಶನವನ್ನು ಚಿಕ್ಕಮಗಳೂರು ಪ್ರೆಸ್ ಕ್ಲಬ್ಗೆ ಹಸ್ತಾಂತರ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಪ್ರೆಸ್ ಕ್ಲಬ್ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಪ್ರೆಸ್ ಕ್ಲಬ್ ಅಧ್ಯಕ್ಷ ಸಿ.ಡಿ.ಚಂದ್ರೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎನ್.ಕೆ.ಗೋಪಿ, ಖಜಾಂಚಿ ಪುನೀತ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-126-19722721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>