<p>ಮೂಡಿಗೆರೆ: ತಾಲ್ಲೂಕಿನಾದ್ಯಂತ ಗುರುವಾರ ತಡರಾತ್ರಿ ಸುರಿದ ಮಳೆಗೆ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ.</p>.<p>ಮಳೆಯೊಂದಿಗೆ ಗಾಳಿಯೂ ಬೀಸಿದ್ದರಿಂದ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಮತ್ತಿಕಟ್ಟೆ ರಸ್ತೆಯಲ್ಲಿ 15ಕ್ಕೂ ಹೆಚ್ಚು ಮರಗಳು ಬಿದ್ದಿದ್ದರಿಂದ ಬೆಳಗಿನವರೆಗೂ ಸಂಪರ್ಕ ಕಡಿತಗೊಂಡಿತ್ತು. ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿದ ಸ್ಥಳೀಯರು, 11ರ ಸುಮಾರಿಗೆ ಮರಗಳನ್ನು ತೆರವುಗೊಳಿಸಿದರು.</p>.<p>ದೇವರುಂದ, ಉಗ್ಗೇಹಳ್ಳಿ, ಕೃಷ್ಣಾಪುರ, ಗುತ್ತಿ, ದೇವರಮನೆ, ಕುಂದೂರು, ನಿಡುವಾಳೆ, ಬಾಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ವಿದ್ಯುತ್ ಕಂಬಗಳು ನೆಲಕಚ್ಚಿದ್ದರಿಂದ ಈ ಭಾಗಗಳಲ್ಲಿ ಶುಕ್ರವಾರವೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು.</p>.<p>ಬಿ. ಹೊಸಳ್ಳಿ ಗ್ರಾಮದ ಜಯಪಾಲ್ ಎಂಬುವರ ಮನೆಯ ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಇದೇ ಗ್ರಾಮದ ಅಂಗನವಾಡಿ ಶಿಕ್ಷಕಿ ಗೌರಮ್ಮ ಎಂಬುವರ ಮನೆ ಮೇಲೆ ತೆಂಗಿನ ಮರ ಬಿದ್ದು ಚಾವಣಿ, ಗೋಡೆ ಸಂಪೂರ್ಣ ಹಾನಿಯಾಗಿದ್ದು, ಯಾವುದೇ ಜೀವಾಪಾಯ ಉಂಟಾಗಿಲ್ಲ.</p>.<p>ಮರ್ಕಲ್ ಗ್ರಾಮದ ಮಂಜುಳಾ ಎಂಬುವರ ಮನೆಯ ಚಾವಣಿಗೂ ಹಾನಿ ಸಂಭವಿಸಿದೆ. ಹಲವು ಕಾಫಿ ತೋಟಗಳಲ್ಲಿ ಮರಬಿದ್ದು ಹಾನಿ ಸಂಭವಿಸಿದ್ದು, ಅಡಿಕೆ ಮರಗಳು ಮುರಿದು ಬಿದ್ದು ನಷ್ಟ ಉಂಟಾಗಿದೆ.</p>.<p>ನರಸಿಂಹರಾಜಪುರ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಗುಡುಗು ಸಹಿತ ಸಾಧಾರಣ ಮಳೆ ಸುರಿಯಿತು.</p>.<p>ಗುರುವಾರ ಬೆಳಿಗ್ಗೆಯಿಂದಲೇ ಬಿಸಿಲಿನ ತಾಪಮಾನ ಹೆಚ್ಚಾಗಿತ್ತು. ಸಂಜೆ ಮೋಡಕವಿದ ವಾತಾವರಣವುಂಟಾದರೂ ಮಳೆ ಬಂದಿರಲಿಲ್ಲ. ರಾತ್ರಿ 9ರ ವೇಳೆಗೆ ಇದ್ದಕ್ಕಿದ್ದಂತೆ ಗುಡಗು-ಸಿಡಿಲು ಸಹಿತ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಶುಕ್ರವಾರ ಬೆಳಿಗ್ಗೆಯಿಂದಲೇ ಬಿಸಿಲಿನ ತಾಪಮಾನ ಹೆಚ್ಚಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-126-1839552537</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಡಿಗೆರೆ: ತಾಲ್ಲೂಕಿನಾದ್ಯಂತ ಗುರುವಾರ ತಡರಾತ್ರಿ ಸುರಿದ ಮಳೆಗೆ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ.</p>.<p>ಮಳೆಯೊಂದಿಗೆ ಗಾಳಿಯೂ ಬೀಸಿದ್ದರಿಂದ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಮತ್ತಿಕಟ್ಟೆ ರಸ್ತೆಯಲ್ಲಿ 15ಕ್ಕೂ ಹೆಚ್ಚು ಮರಗಳು ಬಿದ್ದಿದ್ದರಿಂದ ಬೆಳಗಿನವರೆಗೂ ಸಂಪರ್ಕ ಕಡಿತಗೊಂಡಿತ್ತು. ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿದ ಸ್ಥಳೀಯರು, 11ರ ಸುಮಾರಿಗೆ ಮರಗಳನ್ನು ತೆರವುಗೊಳಿಸಿದರು.</p>.<p>ದೇವರುಂದ, ಉಗ್ಗೇಹಳ್ಳಿ, ಕೃಷ್ಣಾಪುರ, ಗುತ್ತಿ, ದೇವರಮನೆ, ಕುಂದೂರು, ನಿಡುವಾಳೆ, ಬಾಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ವಿದ್ಯುತ್ ಕಂಬಗಳು ನೆಲಕಚ್ಚಿದ್ದರಿಂದ ಈ ಭಾಗಗಳಲ್ಲಿ ಶುಕ್ರವಾರವೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು.</p>.<p>ಬಿ. ಹೊಸಳ್ಳಿ ಗ್ರಾಮದ ಜಯಪಾಲ್ ಎಂಬುವರ ಮನೆಯ ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಇದೇ ಗ್ರಾಮದ ಅಂಗನವಾಡಿ ಶಿಕ್ಷಕಿ ಗೌರಮ್ಮ ಎಂಬುವರ ಮನೆ ಮೇಲೆ ತೆಂಗಿನ ಮರ ಬಿದ್ದು ಚಾವಣಿ, ಗೋಡೆ ಸಂಪೂರ್ಣ ಹಾನಿಯಾಗಿದ್ದು, ಯಾವುದೇ ಜೀವಾಪಾಯ ಉಂಟಾಗಿಲ್ಲ.</p>.<p>ಮರ್ಕಲ್ ಗ್ರಾಮದ ಮಂಜುಳಾ ಎಂಬುವರ ಮನೆಯ ಚಾವಣಿಗೂ ಹಾನಿ ಸಂಭವಿಸಿದೆ. ಹಲವು ಕಾಫಿ ತೋಟಗಳಲ್ಲಿ ಮರಬಿದ್ದು ಹಾನಿ ಸಂಭವಿಸಿದ್ದು, ಅಡಿಕೆ ಮರಗಳು ಮುರಿದು ಬಿದ್ದು ನಷ್ಟ ಉಂಟಾಗಿದೆ.</p>.<p>ನರಸಿಂಹರಾಜಪುರ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಗುಡುಗು ಸಹಿತ ಸಾಧಾರಣ ಮಳೆ ಸುರಿಯಿತು.</p>.<p>ಗುರುವಾರ ಬೆಳಿಗ್ಗೆಯಿಂದಲೇ ಬಿಸಿಲಿನ ತಾಪಮಾನ ಹೆಚ್ಚಾಗಿತ್ತು. ಸಂಜೆ ಮೋಡಕವಿದ ವಾತಾವರಣವುಂಟಾದರೂ ಮಳೆ ಬಂದಿರಲಿಲ್ಲ. ರಾತ್ರಿ 9ರ ವೇಳೆಗೆ ಇದ್ದಕ್ಕಿದ್ದಂತೆ ಗುಡಗು-ಸಿಡಿಲು ಸಹಿತ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಶುಕ್ರವಾರ ಬೆಳಿಗ್ಗೆಯಿಂದಲೇ ಬಿಸಿಲಿನ ತಾಪಮಾನ ಹೆಚ್ಚಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-126-1839552537</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>