<p><strong>ಚಿಕ್ಕಮಗಳೂರು</strong>: ಜೆಡಿಎಸ್ನ ಶೀಲಾ ದಿನೇಶ್ ರಾಜೀನಾಮೆಯಿಂದ ತೆರವಾಗಿರುವ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಗುರುವಾರ (ಮೇ 21) ನಡೆಯಲಿದ್ದು, ಬಿಜೆಪಿಯಲ್ಲಿ ಪೈಪೋಟಿ ಶುರುವಾಗಿದೆ.</p>.<p>ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಆಂತರಿಕ ಒಪ್ಪಂದದ ಪ್ರಕಾರ ಈ ಬಾರಿ ಬಿಜೆಪಿಗೆ ಅಧಿಕಾರ ಸಿಗುವುದು ಬಹುತೇಕ ಖಚಿತವಾಗಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಬಿಜೆಪಿಯ ನಾಲ್ವರು ಸದಸ್ಯರು ಪೈಪೋಟಿಯಲ್ಲಿದ್ದಾರೆ.</p>.<p>ಸ್ಥಳೀಯ ಸಂಸ್ಥೆಗಳಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಒಟ್ಟು 35 ಸದಸ್ಯ ಬಲದ ನಗರಸಭೆಯಲ್ಲಿ ಬಿಜೆಪಿಯ 18 ಸದಸ್ಯರಿದ್ದರು. ಮಾಜಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರನ್ನು ಬಿಜೆಪಿಯಿಂದ ಅಮಾನತು ಮಾಡಲಾಗಿದೆ. ಇದರಿಂದ ಬಿಜೆಪಿ ಸದಸ್ಯರ ಸಂಖ್ಯೆ ಈಗ 17ಕ್ಕೆ ಇಳಿದಿದೆ. ಜೆಡಿಎಸ್ನ ಇಬ್ಬರು ಮತ್ತು ಜೆಡಿಎಸ್ ಬೆಂಬಲಿತ ಒಬ್ಬರು ಸೇರಿ ಮೂವರಿದ್ದಾರೆ. ಒಟ್ಟು 20 ಸದಸ್ಯ ಬಲವನ್ನು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಹೊಂದಿದೆ.</p>.<p>ಬಿಜೆಪಿ ಆಂತರಿಕ ಒಪ್ಪಂದದ ಪ್ರಕಾರ ರಾಜೀನಾಮೆ ನೀಡಲು ಹಿಂದೇಟು ಹಾಕಿ ಅಧಿಕಾರ ನಡೆಸಿದ ವರಸಿದ್ಧಿ ವೇಣುಗೋಪಾಲ್ ನಡೆಯಿಂದ ಎಚ್ಚೆತ್ತುಕೊಂಡಿರುವ ಬಿಜೆಪಿ, ಬಳಿಕ ಎಚ್ಚರಿಕೆ ಹೆಜ್ಜೆ ಇಡುತ್ತಿದೆ.</p>.<p>30 ತಿಂಗಳ ಅವಧಿಗೆ ಮೊದಲ 11 ತಿಂಗಳ ಅವಧಿಯನ್ನು ಬಿಜೆಪಿಯ ಸುಜಾತಾ ಶಿವಕುಮಾರ್ ಅವರು ನಡೆಸಿದ್ದು, ಜೆಡಿಎಸ್ನ ಶೀಲಾ ದಿನೇಶ್ ಅವರು 10 ತಿಂಗಳ ಆಡಳಿತ ನಡೆಸಿ ರಾಜೀನಾಮೆ ಸಲ್ಲಿಸಿದ್ದಾರೆ. ಉಳಿದ 9 ತಿಂಗಳನ್ನು ಬಿಜೆಪಿಗೆ ಬಿಟ್ಟುಕೊಡಲು ಒಪ್ಪಂದ ಮಾಡಿಕೊಂಡಿವೆ ಎಂದು ಮೂಲಗಳು ತಿಳಿಸಿವೆ.</p>.<p>ಬಿಜೆಪಿ–ಜೆಡಿಎಸ್ ಒಟ್ಟಾಗಿರುವುದರಿಂದ ಪ್ರಯತ್ನ ನಡೆದಂತೆ ಕಾಣಿಸುತ್ತಿಲ್ಲ. ಕಾಂಗ್ರೆಸ್ನ 12 ಸದಸ್ಯರು, ಎಸ್ಡಿಪಿಐ ಒಬ್ಬರು, ಒಬ್ಬರು ಪಕ್ಷೇತರರು, ಬಿಜೆಪಿಯಿಂದ ಅಮಾನತುಗೊಂಡಿರುವ ಒಬ್ಬರು ಸೇರಿ 15 ಸದಸ್ಯರು, ಶಾಸಕ ಎಚ್.ಡಿ.ತಮ್ಮಯ್ಯ ಸೇರಿ 16 ಮತಗಳ ಬಲ ಇದೆ ಎಂಬುದು ಲೆಕ್ಕಾಚಾರ.</p>.<p>ಬಿಜೆಪಿ–ಜೆಡಿಎಸ್ ಮೈತ್ರಿ ಕೂಟಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ವಿಧಾನ ಪರಿಷತ್ತಿನ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಭೋಜೇಗೌಡ ಅವರ ಮತಗಳ ಬಲವೂ ಇದೆ. ಆದ್ದರಿಂದ ಕಾಂಗ್ರೆಸ್ ಅಷ್ಟೇನೂ ತಲೆಕೆಡಿಸಿಕೊಂಡಂತೆ ಕಾಣಿಸುತ್ತಿಲ್ಲ.</p>.<p><strong>ಬಿಜೆಪಿ ಸದಸ್ಯರ ಪ್ರವಾಸ</strong></p><p>ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಬಿಜೆಪಿ ಸದಸ್ಯರು ಪ್ರವಾಸ ಹೋಗಿದ್ದಾರೆ.</p><p>ನಗರಸಭೆ ಬಿಜೆಪಿ ಸದಸ್ಯರಾದ ಉಮಾದೇವಿ, ದೀಪಾ ರವಿ, ಕವಿತಾ ಶೇಖರ್, ರೂಪಾ ಕುಮಾರ್ ಪೈಪೋಟಿಯಲ್ಲಿದ್ದಾರೆ. ದೀಪಾ ರವಿ ಅವರ ಹೆಸರು ಮುಂಚೂಣಿಯಲ್ಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p><p>ಬಿಜೆಪಿ ಸದಸ್ಯರೆಲ್ಲರ ಮೊಬೈಲ್ ಫೋನ್ಗಳು ಸ್ವಿಚ್ ಆಫ್ ಆಗಿದ್ದು, ಯಾರೊಬ್ಬರೂ ಸಂಪರ್ಕಕ್ಕೆ ಸಿಗುತ್ತಿಲ್ಲ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ರೆಸಾರ್ಟ್ ಒಂದರಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ಹೇಳಲಾಗಿದೆ.</p><p>‘ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ನೇತೃತ್ವದಲ್ಲಿ ಮುಖಂಡರು ಸಭೆ ನಡೆಸಿ ಯಾರು ಅಧ್ಯಕ್ಷರಾಗಬೇಕು ಎಂದು ತೀರ್ಮಾನಿಸಲಿದ್ದಾರೆ. ಈವರೆಗೆ ಯಾರ ಹೆಸರೂ ಅಂತಿಮವಾಗಿಲ್ಲ’ ಎಂದು ಬಿಜೆಪಿ ಮುಖಂಡರೊಬ್ಬರು ಮಾಹಿತಿ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br>260520-126-137517991</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಜೆಡಿಎಸ್ನ ಶೀಲಾ ದಿನೇಶ್ ರಾಜೀನಾಮೆಯಿಂದ ತೆರವಾಗಿರುವ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಗುರುವಾರ (ಮೇ 21) ನಡೆಯಲಿದ್ದು, ಬಿಜೆಪಿಯಲ್ಲಿ ಪೈಪೋಟಿ ಶುರುವಾಗಿದೆ.</p>.<p>ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಆಂತರಿಕ ಒಪ್ಪಂದದ ಪ್ರಕಾರ ಈ ಬಾರಿ ಬಿಜೆಪಿಗೆ ಅಧಿಕಾರ ಸಿಗುವುದು ಬಹುತೇಕ ಖಚಿತವಾಗಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಬಿಜೆಪಿಯ ನಾಲ್ವರು ಸದಸ್ಯರು ಪೈಪೋಟಿಯಲ್ಲಿದ್ದಾರೆ.</p>.<p>ಸ್ಥಳೀಯ ಸಂಸ್ಥೆಗಳಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಒಟ್ಟು 35 ಸದಸ್ಯ ಬಲದ ನಗರಸಭೆಯಲ್ಲಿ ಬಿಜೆಪಿಯ 18 ಸದಸ್ಯರಿದ್ದರು. ಮಾಜಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರನ್ನು ಬಿಜೆಪಿಯಿಂದ ಅಮಾನತು ಮಾಡಲಾಗಿದೆ. ಇದರಿಂದ ಬಿಜೆಪಿ ಸದಸ್ಯರ ಸಂಖ್ಯೆ ಈಗ 17ಕ್ಕೆ ಇಳಿದಿದೆ. ಜೆಡಿಎಸ್ನ ಇಬ್ಬರು ಮತ್ತು ಜೆಡಿಎಸ್ ಬೆಂಬಲಿತ ಒಬ್ಬರು ಸೇರಿ ಮೂವರಿದ್ದಾರೆ. ಒಟ್ಟು 20 ಸದಸ್ಯ ಬಲವನ್ನು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಹೊಂದಿದೆ.</p>.<p>ಬಿಜೆಪಿ ಆಂತರಿಕ ಒಪ್ಪಂದದ ಪ್ರಕಾರ ರಾಜೀನಾಮೆ ನೀಡಲು ಹಿಂದೇಟು ಹಾಕಿ ಅಧಿಕಾರ ನಡೆಸಿದ ವರಸಿದ್ಧಿ ವೇಣುಗೋಪಾಲ್ ನಡೆಯಿಂದ ಎಚ್ಚೆತ್ತುಕೊಂಡಿರುವ ಬಿಜೆಪಿ, ಬಳಿಕ ಎಚ್ಚರಿಕೆ ಹೆಜ್ಜೆ ಇಡುತ್ತಿದೆ.</p>.<p>30 ತಿಂಗಳ ಅವಧಿಗೆ ಮೊದಲ 11 ತಿಂಗಳ ಅವಧಿಯನ್ನು ಬಿಜೆಪಿಯ ಸುಜಾತಾ ಶಿವಕುಮಾರ್ ಅವರು ನಡೆಸಿದ್ದು, ಜೆಡಿಎಸ್ನ ಶೀಲಾ ದಿನೇಶ್ ಅವರು 10 ತಿಂಗಳ ಆಡಳಿತ ನಡೆಸಿ ರಾಜೀನಾಮೆ ಸಲ್ಲಿಸಿದ್ದಾರೆ. ಉಳಿದ 9 ತಿಂಗಳನ್ನು ಬಿಜೆಪಿಗೆ ಬಿಟ್ಟುಕೊಡಲು ಒಪ್ಪಂದ ಮಾಡಿಕೊಂಡಿವೆ ಎಂದು ಮೂಲಗಳು ತಿಳಿಸಿವೆ.</p>.<p>ಬಿಜೆಪಿ–ಜೆಡಿಎಸ್ ಒಟ್ಟಾಗಿರುವುದರಿಂದ ಪ್ರಯತ್ನ ನಡೆದಂತೆ ಕಾಣಿಸುತ್ತಿಲ್ಲ. ಕಾಂಗ್ರೆಸ್ನ 12 ಸದಸ್ಯರು, ಎಸ್ಡಿಪಿಐ ಒಬ್ಬರು, ಒಬ್ಬರು ಪಕ್ಷೇತರರು, ಬಿಜೆಪಿಯಿಂದ ಅಮಾನತುಗೊಂಡಿರುವ ಒಬ್ಬರು ಸೇರಿ 15 ಸದಸ್ಯರು, ಶಾಸಕ ಎಚ್.ಡಿ.ತಮ್ಮಯ್ಯ ಸೇರಿ 16 ಮತಗಳ ಬಲ ಇದೆ ಎಂಬುದು ಲೆಕ್ಕಾಚಾರ.</p>.<p>ಬಿಜೆಪಿ–ಜೆಡಿಎಸ್ ಮೈತ್ರಿ ಕೂಟಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ವಿಧಾನ ಪರಿಷತ್ತಿನ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಭೋಜೇಗೌಡ ಅವರ ಮತಗಳ ಬಲವೂ ಇದೆ. ಆದ್ದರಿಂದ ಕಾಂಗ್ರೆಸ್ ಅಷ್ಟೇನೂ ತಲೆಕೆಡಿಸಿಕೊಂಡಂತೆ ಕಾಣಿಸುತ್ತಿಲ್ಲ.</p>.<p><strong>ಬಿಜೆಪಿ ಸದಸ್ಯರ ಪ್ರವಾಸ</strong></p><p>ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಬಿಜೆಪಿ ಸದಸ್ಯರು ಪ್ರವಾಸ ಹೋಗಿದ್ದಾರೆ.</p><p>ನಗರಸಭೆ ಬಿಜೆಪಿ ಸದಸ್ಯರಾದ ಉಮಾದೇವಿ, ದೀಪಾ ರವಿ, ಕವಿತಾ ಶೇಖರ್, ರೂಪಾ ಕುಮಾರ್ ಪೈಪೋಟಿಯಲ್ಲಿದ್ದಾರೆ. ದೀಪಾ ರವಿ ಅವರ ಹೆಸರು ಮುಂಚೂಣಿಯಲ್ಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p><p>ಬಿಜೆಪಿ ಸದಸ್ಯರೆಲ್ಲರ ಮೊಬೈಲ್ ಫೋನ್ಗಳು ಸ್ವಿಚ್ ಆಫ್ ಆಗಿದ್ದು, ಯಾರೊಬ್ಬರೂ ಸಂಪರ್ಕಕ್ಕೆ ಸಿಗುತ್ತಿಲ್ಲ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ರೆಸಾರ್ಟ್ ಒಂದರಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ಹೇಳಲಾಗಿದೆ.</p><p>‘ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ನೇತೃತ್ವದಲ್ಲಿ ಮುಖಂಡರು ಸಭೆ ನಡೆಸಿ ಯಾರು ಅಧ್ಯಕ್ಷರಾಗಬೇಕು ಎಂದು ತೀರ್ಮಾನಿಸಲಿದ್ದಾರೆ. ಈವರೆಗೆ ಯಾರ ಹೆಸರೂ ಅಂತಿಮವಾಗಿಲ್ಲ’ ಎಂದು ಬಿಜೆಪಿ ಮುಖಂಡರೊಬ್ಬರು ಮಾಹಿತಿ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br>260520-126-137517991</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>