ಮಳೆ ಬರದಿದ್ದರೆ ಸಮಸ್ಯೆ ಉದ್ಭವ
ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿರುವ ಗ್ರಾಮಗಳಲ್ಲಿ ಟ್ಯಾಂಕರ್ ಹಾಗೂ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಸಲು ಕ್ರಮಕೈಗೊಳ್ಳಲಾಗಿದೆ. ಕೆಲವು ಗ್ರಾಮಗಳಲ್ಲಿ ಮಳೆ ಬಂದಿರುವುದರಿಂದ ನೀರಿನ ಸಮಸ್ಯೆ ಉದ್ಭವಿಸಿಲ್ಲ. ಮುಂದಿನ ದಿನದಲ್ಲಿ ಮಳೆ ಬರದಿದ್ದರೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆಯಿದೆ ಎಂದು ನರಸಿಂಹರಾಜಪುರ ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಲ್. ಮನಿಷ್ ಹೇಳಿದರು.