<p>ಚಿಕ್ಕಮಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀ ನಾಮೆಗೆ ಒತ್ತಾಯಿಸಿ ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ವರೆಗೆ ಮೇ 25ರಂದು ಬೆಳಿಗ್ಗೆ 11ಕ್ಕೆ ಮೆರವಣಿಗೆ ನಡೆಸಲಾ ಗುವುದು ಎಂದು ಎನ್ಎಸ್ಯುಐ ರಾಜ್ಯ ಉಪಾಧ್ಯಕ್ಷ ಸಿ.ಕೆ. ಶ್ರೀಕಾಂತ್ ಹೇಳಿದರು.</p>.<p>ನೀಟ್ ಅಕ್ರಮದಲ್ಲಿ ಬಿಜೆಪಿ ನಾಯಕರು ಕೈವಾಡ ಬಯಲಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಒತ್ತಾಯಿಸಿದರು.</p>.<p>ದೇಶದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ನಡೆದಿದ್ದ ನೀಟ್ ಜವಾಬ್ದಾರಿ ಹೊತ್ತಿದ್ದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ 22.7 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಟ್ಟಿದೆ. ಇದರಿಂದಾಗಿ ದೇಶದಲ್ಲಿ ನಾಲ್ಕು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಸಾವಿಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ದೂರಿದರು.</p>.<p>ಮೂರು ವರ್ಷಗಳಲ್ಲಿ 2 ಬಾರಿ ನೀಟ್ನಲ್ಲಿ ಅಕ್ರಮ ನಡೆದಿದ್ದು, ನ್ಯಾಯಯುತವಾಗಿ ಪರೀಕ್ಷೆ ನಡೆಸಲು ಸಾಧ್ಯವಾಗದ ಕೇಂದ್ರ ಸರ್ಕಾರ, ದೇಶ ನಡೆಸಲು ಹೇಗೆ ಸಾಧ್ಯ ಎಂಬ ಅನುಮಾನ ಮೂಡಿದೆ. ದೇಶದಲ್ಲಿ 22 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯ ನಡೆದರೂ ಬಿಜೆಪಿ ನಾಯಕರು ಮಾತನಾಡದೇ ಇರುವುದು ಅವರ ಜಾಣ ಕುರುಡುತನಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.</p>.<p>ಬಿಜೆಪಿಯ ಅನೇಕರು ಇದರಲ್ಲಿ ಭಾಗಿಯಾಗಿ ಸೆರೆ ಸಿಕ್ಕಿದ್ದಾರೆ. ಸೆರೆ ಸಿಕ್ಕಿರುವ ಒಬ್ಬ ಆರೋಪಿ ಈಗಾಗಲೇ ಪ್ರಕರಣದ ಪ್ರಮುಖರನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸಿಬಿಐ ಈ ಪ್ರಕರಣದಲ್ಲಿ ಇನ್ನಷ್ಟು ಗಂಭೀರವಾಗಿ ತನಿಖೆ ನಡೆಸಿ ರೂವಾರಿಗಳನ್ನು ಪತ್ತೆ ಹಚ್ಚುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ಜಿರಳೆ ಪಕ್ಷ ಎಂಬ ಹೆಸರಿನಲ್ಲಿ ದೇಶದಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಂಚಲನ ಮೂಡಿಸುತ್ತಿದೆ. ‘ನಾನು ಜಿರಳೆ’ ಎಂದು ಯುವ ಜನರು ಹಾಗೂ ನಿರುದ್ಯೋಗಿಗಳು ದೇಶವ್ಯಾಪಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಬೀದಿಗಿಳಿದು ಹೋರಾಡುತ್ತಿದ್ದಾರೆ. ಎನ್ಎಸ್ಯುಐ ಕೂಡ ಅವರಿಗೆ ಧ್ವನಿಗೂಡಿಸಿ ಅವರ ಹೋರಾಟದಲ್ಲಿ ಭಾಗಿಯಾಗುತ್ತಿದೆ ಎಂದು ತಿಳಿಸಿದರು.</p>.<p>ಎನ್ಎಸ್ಯುಐ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಟಿ. ಸುಮಂತ್, ಕಾರ್ತಿಕ್, ಶೃಜನ್, ಸುಮನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-126-216656028</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀ ನಾಮೆಗೆ ಒತ್ತಾಯಿಸಿ ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ವರೆಗೆ ಮೇ 25ರಂದು ಬೆಳಿಗ್ಗೆ 11ಕ್ಕೆ ಮೆರವಣಿಗೆ ನಡೆಸಲಾ ಗುವುದು ಎಂದು ಎನ್ಎಸ್ಯುಐ ರಾಜ್ಯ ಉಪಾಧ್ಯಕ್ಷ ಸಿ.ಕೆ. ಶ್ರೀಕಾಂತ್ ಹೇಳಿದರು.</p>.<p>ನೀಟ್ ಅಕ್ರಮದಲ್ಲಿ ಬಿಜೆಪಿ ನಾಯಕರು ಕೈವಾಡ ಬಯಲಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಒತ್ತಾಯಿಸಿದರು.</p>.<p>ದೇಶದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ನಡೆದಿದ್ದ ನೀಟ್ ಜವಾಬ್ದಾರಿ ಹೊತ್ತಿದ್ದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ 22.7 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಟ್ಟಿದೆ. ಇದರಿಂದಾಗಿ ದೇಶದಲ್ಲಿ ನಾಲ್ಕು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಸಾವಿಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ದೂರಿದರು.</p>.<p>ಮೂರು ವರ್ಷಗಳಲ್ಲಿ 2 ಬಾರಿ ನೀಟ್ನಲ್ಲಿ ಅಕ್ರಮ ನಡೆದಿದ್ದು, ನ್ಯಾಯಯುತವಾಗಿ ಪರೀಕ್ಷೆ ನಡೆಸಲು ಸಾಧ್ಯವಾಗದ ಕೇಂದ್ರ ಸರ್ಕಾರ, ದೇಶ ನಡೆಸಲು ಹೇಗೆ ಸಾಧ್ಯ ಎಂಬ ಅನುಮಾನ ಮೂಡಿದೆ. ದೇಶದಲ್ಲಿ 22 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯ ನಡೆದರೂ ಬಿಜೆಪಿ ನಾಯಕರು ಮಾತನಾಡದೇ ಇರುವುದು ಅವರ ಜಾಣ ಕುರುಡುತನಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.</p>.<p>ಬಿಜೆಪಿಯ ಅನೇಕರು ಇದರಲ್ಲಿ ಭಾಗಿಯಾಗಿ ಸೆರೆ ಸಿಕ್ಕಿದ್ದಾರೆ. ಸೆರೆ ಸಿಕ್ಕಿರುವ ಒಬ್ಬ ಆರೋಪಿ ಈಗಾಗಲೇ ಪ್ರಕರಣದ ಪ್ರಮುಖರನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸಿಬಿಐ ಈ ಪ್ರಕರಣದಲ್ಲಿ ಇನ್ನಷ್ಟು ಗಂಭೀರವಾಗಿ ತನಿಖೆ ನಡೆಸಿ ರೂವಾರಿಗಳನ್ನು ಪತ್ತೆ ಹಚ್ಚುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ಜಿರಳೆ ಪಕ್ಷ ಎಂಬ ಹೆಸರಿನಲ್ಲಿ ದೇಶದಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಂಚಲನ ಮೂಡಿಸುತ್ತಿದೆ. ‘ನಾನು ಜಿರಳೆ’ ಎಂದು ಯುವ ಜನರು ಹಾಗೂ ನಿರುದ್ಯೋಗಿಗಳು ದೇಶವ್ಯಾಪಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಬೀದಿಗಿಳಿದು ಹೋರಾಡುತ್ತಿದ್ದಾರೆ. ಎನ್ಎಸ್ಯುಐ ಕೂಡ ಅವರಿಗೆ ಧ್ವನಿಗೂಡಿಸಿ ಅವರ ಹೋರಾಟದಲ್ಲಿ ಭಾಗಿಯಾಗುತ್ತಿದೆ ಎಂದು ತಿಳಿಸಿದರು.</p>.<p>ಎನ್ಎಸ್ಯುಐ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಟಿ. ಸುಮಂತ್, ಕಾರ್ತಿಕ್, ಶೃಜನ್, ಸುಮನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-126-216656028</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>