ಶೃಂಗೇರಿ: ಮೆಣಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೃಂಗೇರಿ ಚಿಕ್ಕಮಗಳೂರು ರಸ್ತೆಯ ಶಿಡ್ಲೆ ಗಣಪತಿ ದೇವಸ್ಥಾನದ ಬಳಿ ಶಾಲಾ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಓಮ್ನಿ ಕಾರು ಮತ್ತು ಇನೊವಾ ನಡುವೆ ಅಪಘಾತ ಸಂಭವಿಸಿ, ಶಾಲಾ ಮಕ್ಕಳಿದ್ದ ಓಮ್ನಿ ಕಾರು ಪಲ್ಟಿಯಾಗಿ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ಅಪಾಯವಾಗದೆ ಪಾರಾಗಿದ್ದಾರೆ. ಶೃಂಗೇರಿಯ ಎರಡು ಖಾಸಗಿ ಶಾಲೆಗಳ ಮಕ್ಕಳು ವಾಹನದಲ್ಲಿ ಇದ್ದರು.