<p>ಚಿಕ್ಕಮಗಳೂರು: ಪಂಚಲಿಂಗೇಶ್ವರ ದೇವಸ್ಥಾನವನ್ನು ವಿಶಿಷ್ಠ ರೀತಿಯಲ್ಲಿ ಜಾತ್ಯತೀತ ಹಾಗೂ ಪಕ್ಷಾತೀತವಾಗಿ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಈ ಕಾರ್ಯಕ್ಕೆ ದಾನಿಗಳು ನೆರವು ನೀಡಿ ಸಹಕರಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಮನವಿ ಮಾಡಿದರು.</p>.<p>ಹಿರೇಮಗಳೂರಿನಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪಾತಾಳೇಶ್ವರ ನೂತನ ದೇವಾಲಯದ ಗುದ್ದಲಿ ಪೂಜೆ ನೆರೆವೇರಿಸಿ ಮಾತನಾಡಿದರು.</p>.<p>ಪಂಚಲಿಂಗಗಳು ಇರುವ ದೇವಸ್ಥಾನ ಹಿರೇಮಗಳೂರು ಹೊರತುಪಡಿಸಿ ಜಿಲ್ಲೆಯಲ್ಲಿ ಬೇರೆಲ್ಲೂ ಇಲ್ಲ. ಪಾತಾಳೇಶ್ವರ, ಮಲ್ಲಿಕಾರ್ಜುನ, ಅಮೃತೇಶ್ವರ, ಗೌರೇಶ್ವರ, ವೈದ್ಯನಾಥೇಶ್ವರ ದೇವಾಲಯಗಳಿದ್ದು, ಪಂಚಲಿಂಗೇಶ್ವರ ದರ್ಶನಕ್ಕೆ ಮೈಸೂರಿನ ತಲಕಾಡಿಗೆ ಹೋಗುತ್ತಾರೆ. ಇಲ್ಲೇ ದೇವಾಲಯ ನಿರ್ಮಾಣಕ್ಕೆ ಅವಕಾಶ ನೀಡಿರುವುದು ಸಂತಸ ತಂದಿದೆ ಎಂದರು.</p>.<p>ಹಿರೇಮಗಳೂರಿನಲ್ಲಿ ಪಾತಾಳೇಶ್ವರ ದೇವಸ್ಥಾನ 1990-91ರಲ್ಲಿ ಶುದ್ಧಿಕಾರ್ಯ ಕೈಗೊಳ್ಳಲಾಗಿದ್ದು, ಈಗಾಗಲೇ ಚಿಕ್ಕಮ್ಮ, ಮುತ್ತಿನಮ್ಮ, ಕೋದಂಡರಾಮ ದೇವಸ್ಥಾನ ಸೇರಿ ಬಹುತೇಕ ದೇವಾಲಯಗಳು ಅಭಿವೃದ್ಧಿಯಾಗಿವೆ. ಪಾತಾಳೇಶ್ವರ ದೇವಾಲಯ ಜೀರ್ಣೋದ್ಧಾರ ಮಾಡಿದರೆ ಸಕಲ ಜೀವರಾಶಿಗೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.</p>.<p>ಬಸವತತ್ವ ಪೀಠದ ಪೀಠಾಧ್ಯಕ್ಷ ಬಸವ ಮರುಳಸಿದ್ಧ ಸ್ವಾಮೀಜಿ ಮಾತನಾಡಿ, ‘ದೇವಸ್ಥಾನಗಳು ಧಾರ್ಮಿಕವಾಗಿ ಭಕ್ತರಿಗೆ ದಾರಿ ತೋರಿಸುವ ಮಾರ್ಗಗಳಾಗಿವೆ. ದೇವರು ಮನುಷ್ಯನ ಹೃದಯದಲ್ಲಿ ನೆಲೆಸಿದ್ದಾನೆ. ಆದ್ದರಿಂದ ಭಕ್ತರ ಶ್ರದ್ಧಾ ಕೇಂದ್ರಗಳು ದೇವಸ್ಥಾನಗಳಾಗಿವೆ’ ಎಂದರು.</p>.<p>ಅತಿ ಶೀಘ್ರದಲ್ಲಿ ಈ ದೇವಾಲಯ ನಿರ್ಮಾಣ ಕಾರ್ಯ ಪೂರ್ಣಗೊಂಡು ಸಾರ್ವಜನಿಕರಿಗೆ ಲೋಕಾರ್ಪಣೆ ಆಗಲಿ ಎಂದು ಆಶಿಸಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಮುಖಂಡರಾದ ಪಲ್ಲವಿ ಸಿ.ಟಿ.ರವಿ, ಸಿದ್ದಮ್ಮ, ಎಚ್.ಸಿ. ಕಲ್ಮುರುಡಪ್ಪ, ಷಡಕ್ಷರಿ, ಬಸವರಾಜಯ್ಯ, ಚಿದಾನಂದ್, ಎಚ್.ಎಂ. ಯೋಗೀಶ್, ನಂಜೇಶ್ ಬೆಣ್ಣೂರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-126-54645852</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಪಂಚಲಿಂಗೇಶ್ವರ ದೇವಸ್ಥಾನವನ್ನು ವಿಶಿಷ್ಠ ರೀತಿಯಲ್ಲಿ ಜಾತ್ಯತೀತ ಹಾಗೂ ಪಕ್ಷಾತೀತವಾಗಿ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಈ ಕಾರ್ಯಕ್ಕೆ ದಾನಿಗಳು ನೆರವು ನೀಡಿ ಸಹಕರಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಮನವಿ ಮಾಡಿದರು.</p>.<p>ಹಿರೇಮಗಳೂರಿನಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪಾತಾಳೇಶ್ವರ ನೂತನ ದೇವಾಲಯದ ಗುದ್ದಲಿ ಪೂಜೆ ನೆರೆವೇರಿಸಿ ಮಾತನಾಡಿದರು.</p>.<p>ಪಂಚಲಿಂಗಗಳು ಇರುವ ದೇವಸ್ಥಾನ ಹಿರೇಮಗಳೂರು ಹೊರತುಪಡಿಸಿ ಜಿಲ್ಲೆಯಲ್ಲಿ ಬೇರೆಲ್ಲೂ ಇಲ್ಲ. ಪಾತಾಳೇಶ್ವರ, ಮಲ್ಲಿಕಾರ್ಜುನ, ಅಮೃತೇಶ್ವರ, ಗೌರೇಶ್ವರ, ವೈದ್ಯನಾಥೇಶ್ವರ ದೇವಾಲಯಗಳಿದ್ದು, ಪಂಚಲಿಂಗೇಶ್ವರ ದರ್ಶನಕ್ಕೆ ಮೈಸೂರಿನ ತಲಕಾಡಿಗೆ ಹೋಗುತ್ತಾರೆ. ಇಲ್ಲೇ ದೇವಾಲಯ ನಿರ್ಮಾಣಕ್ಕೆ ಅವಕಾಶ ನೀಡಿರುವುದು ಸಂತಸ ತಂದಿದೆ ಎಂದರು.</p>.<p>ಹಿರೇಮಗಳೂರಿನಲ್ಲಿ ಪಾತಾಳೇಶ್ವರ ದೇವಸ್ಥಾನ 1990-91ರಲ್ಲಿ ಶುದ್ಧಿಕಾರ್ಯ ಕೈಗೊಳ್ಳಲಾಗಿದ್ದು, ಈಗಾಗಲೇ ಚಿಕ್ಕಮ್ಮ, ಮುತ್ತಿನಮ್ಮ, ಕೋದಂಡರಾಮ ದೇವಸ್ಥಾನ ಸೇರಿ ಬಹುತೇಕ ದೇವಾಲಯಗಳು ಅಭಿವೃದ್ಧಿಯಾಗಿವೆ. ಪಾತಾಳೇಶ್ವರ ದೇವಾಲಯ ಜೀರ್ಣೋದ್ಧಾರ ಮಾಡಿದರೆ ಸಕಲ ಜೀವರಾಶಿಗೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.</p>.<p>ಬಸವತತ್ವ ಪೀಠದ ಪೀಠಾಧ್ಯಕ್ಷ ಬಸವ ಮರುಳಸಿದ್ಧ ಸ್ವಾಮೀಜಿ ಮಾತನಾಡಿ, ‘ದೇವಸ್ಥಾನಗಳು ಧಾರ್ಮಿಕವಾಗಿ ಭಕ್ತರಿಗೆ ದಾರಿ ತೋರಿಸುವ ಮಾರ್ಗಗಳಾಗಿವೆ. ದೇವರು ಮನುಷ್ಯನ ಹೃದಯದಲ್ಲಿ ನೆಲೆಸಿದ್ದಾನೆ. ಆದ್ದರಿಂದ ಭಕ್ತರ ಶ್ರದ್ಧಾ ಕೇಂದ್ರಗಳು ದೇವಸ್ಥಾನಗಳಾಗಿವೆ’ ಎಂದರು.</p>.<p>ಅತಿ ಶೀಘ್ರದಲ್ಲಿ ಈ ದೇವಾಲಯ ನಿರ್ಮಾಣ ಕಾರ್ಯ ಪೂರ್ಣಗೊಂಡು ಸಾರ್ವಜನಿಕರಿಗೆ ಲೋಕಾರ್ಪಣೆ ಆಗಲಿ ಎಂದು ಆಶಿಸಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಮುಖಂಡರಾದ ಪಲ್ಲವಿ ಸಿ.ಟಿ.ರವಿ, ಸಿದ್ದಮ್ಮ, ಎಚ್.ಸಿ. ಕಲ್ಮುರುಡಪ್ಪ, ಷಡಕ್ಷರಿ, ಬಸವರಾಜಯ್ಯ, ಚಿದಾನಂದ್, ಎಚ್.ಎಂ. ಯೋಗೀಶ್, ನಂಜೇಶ್ ಬೆಣ್ಣೂರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-126-54645852</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>