<p>ಚಿಕ್ಕಮಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ರಸಗೊಬ್ಬರ ಬೆಲೆ ಏರಿಕೆ ಮಾಡಿರುವುದರಿಂದ ರೈತರು ಮತ್ತು ಜನ ಸಾಮಾನ್ಯರ ಮೇಲೆ ಹೊರೆಯಾಗಿದೆ. ಬೆಲೆ ಏರಿಕೆ ಕೈಬಿಡಬೇಕು ಎಂದು ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಜಿ.ರಘು ಒತ್ತಾಯಿಸಿದರು.</p>.<p>ಇಂಧನ ಬೆಲೆ ಏರಿಕೆಯಿಂದ ಎಣ್ಣೆ, ಅಕ್ಕಿ, ಬೆಳೆಕಾಳು, ಸರಕುಸಾಗಣೆ, ಹಾಗೂ ಬಸ್ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕೈಬಿಡಬೇಕೆಂದು ಪಕ್ಷ ಒತ್ತಾಯಿಸುತ್ತದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಕೇಂದ್ರ ಸರ್ಕಾರ ನಡೆಸುತ್ತಿರುವ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸಂಬಂಧಪಟ್ಟ ಸಚಿವರನ್ನು ವಜಾ ಮಾಡಬೇಕು. ಅಧಿಕಾರಿಗಳ ಮೇಲೆ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಪೆಟ್ರೋಲ್, ಡೀಸೆಲ್ ಕಡಿಮೆ ಬಳಕೆ ಮಾಡಿ ಹಾಗೂ ಒಂದು ವರ್ಷ ಚಿನ್ನ ಖರೀದಿ ಮಾಡಬೇಡಿ ಎಂದು ದೇಶದ ಜನತೆಗೆ ಪ್ರಧಾನಿ ಕರೆ ನೀಡಿ ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದಾರೆ ಎಂದು ದೂರಿದರು.</p>.<p>ರಾಜ್ಯ ಸರ್ಕಾರ ಈಗಾಗಲೇ ಅಧಿಕಾರಕ್ಕೆ ಬಂದು 3 ವರ್ಷ ಪೂರ್ಣಗೊಳ್ಳುತ್ತಿದ್ದರೂ ರಾಜ್ಯದಲ್ಲಿ ಯುವಜನರಿಗೆ ಉದ್ಯೋಗ, ಮಹಿಳೆಯರಿಗೆ ಭದ್ರತೆ, ಆಶ್ರಯ ಮನೆ, ರೈತರಿಗೆ ಸಬ್ಸಿಡಿ ದರದಲ್ಲಿ ಗೊಬ್ಬರ ಸಿಗುತ್ತಿಲ್ಲ. ರಾಜ್ಯದ ಅಭಿವೃದ್ಧಿ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.</p>.<p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾವಿರಾರು ನಿವೇಶನ ರಹಿತರು ಇದ್ದರೂ ಜಿಲ್ಲೆಯ 5 ಶಾಸಕರು ನಿವೇಶನ ಮತ್ತು ಜಿಲ್ಲೆಯ ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ. ಆದ್ದರಿಂದ ನಿವೇಶನ ರಹಿತರಿಗೆ ನಿವೇಶನಕ್ಕಾಗಿ ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ಭಾರತ ಕಮ್ಯುನಿಸ್ಟ್ ಪಕ್ಷವು ಹೊರಾಟವನ್ನು ರೂಪಿಸಲು ನಿರ್ಧರಿಸಿದೆ ಎಂದು ಹೇಳಿದರು.</p>.<p>ಪಕ್ಷದ ಜಿಲ್ಲಾ ಘಟಕದ ಸಹಕಾರ್ಯದರ್ಶಿ ಹೆಡದಾಳ್ ಕುಮಾರ್, ಸೋಮೇಗೌಡ, ವಸಂತ್ ಕುಮಾರ್ ಸಿ.ತೇಗೂರ್, ರಮೇಶ್ ಜಿ.ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-126-1927699573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ರಸಗೊಬ್ಬರ ಬೆಲೆ ಏರಿಕೆ ಮಾಡಿರುವುದರಿಂದ ರೈತರು ಮತ್ತು ಜನ ಸಾಮಾನ್ಯರ ಮೇಲೆ ಹೊರೆಯಾಗಿದೆ. ಬೆಲೆ ಏರಿಕೆ ಕೈಬಿಡಬೇಕು ಎಂದು ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಜಿ.ರಘು ಒತ್ತಾಯಿಸಿದರು.</p>.<p>ಇಂಧನ ಬೆಲೆ ಏರಿಕೆಯಿಂದ ಎಣ್ಣೆ, ಅಕ್ಕಿ, ಬೆಳೆಕಾಳು, ಸರಕುಸಾಗಣೆ, ಹಾಗೂ ಬಸ್ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕೈಬಿಡಬೇಕೆಂದು ಪಕ್ಷ ಒತ್ತಾಯಿಸುತ್ತದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಕೇಂದ್ರ ಸರ್ಕಾರ ನಡೆಸುತ್ತಿರುವ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸಂಬಂಧಪಟ್ಟ ಸಚಿವರನ್ನು ವಜಾ ಮಾಡಬೇಕು. ಅಧಿಕಾರಿಗಳ ಮೇಲೆ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಪೆಟ್ರೋಲ್, ಡೀಸೆಲ್ ಕಡಿಮೆ ಬಳಕೆ ಮಾಡಿ ಹಾಗೂ ಒಂದು ವರ್ಷ ಚಿನ್ನ ಖರೀದಿ ಮಾಡಬೇಡಿ ಎಂದು ದೇಶದ ಜನತೆಗೆ ಪ್ರಧಾನಿ ಕರೆ ನೀಡಿ ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದಾರೆ ಎಂದು ದೂರಿದರು.</p>.<p>ರಾಜ್ಯ ಸರ್ಕಾರ ಈಗಾಗಲೇ ಅಧಿಕಾರಕ್ಕೆ ಬಂದು 3 ವರ್ಷ ಪೂರ್ಣಗೊಳ್ಳುತ್ತಿದ್ದರೂ ರಾಜ್ಯದಲ್ಲಿ ಯುವಜನರಿಗೆ ಉದ್ಯೋಗ, ಮಹಿಳೆಯರಿಗೆ ಭದ್ರತೆ, ಆಶ್ರಯ ಮನೆ, ರೈತರಿಗೆ ಸಬ್ಸಿಡಿ ದರದಲ್ಲಿ ಗೊಬ್ಬರ ಸಿಗುತ್ತಿಲ್ಲ. ರಾಜ್ಯದ ಅಭಿವೃದ್ಧಿ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.</p>.<p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾವಿರಾರು ನಿವೇಶನ ರಹಿತರು ಇದ್ದರೂ ಜಿಲ್ಲೆಯ 5 ಶಾಸಕರು ನಿವೇಶನ ಮತ್ತು ಜಿಲ್ಲೆಯ ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ. ಆದ್ದರಿಂದ ನಿವೇಶನ ರಹಿತರಿಗೆ ನಿವೇಶನಕ್ಕಾಗಿ ಹಾಗೂ ಜಿಲ್ಲೆಯ ಅಭಿವೃದ್ಧಿಗಾಗಿ ಭಾರತ ಕಮ್ಯುನಿಸ್ಟ್ ಪಕ್ಷವು ಹೊರಾಟವನ್ನು ರೂಪಿಸಲು ನಿರ್ಧರಿಸಿದೆ ಎಂದು ಹೇಳಿದರು.</p>.<p>ಪಕ್ಷದ ಜಿಲ್ಲಾ ಘಟಕದ ಸಹಕಾರ್ಯದರ್ಶಿ ಹೆಡದಾಳ್ ಕುಮಾರ್, ಸೋಮೇಗೌಡ, ವಸಂತ್ ಕುಮಾರ್ ಸಿ.ತೇಗೂರ್, ರಮೇಶ್ ಜಿ.ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-126-1927699573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>