<p><strong>ಕೊಪ್ಪ:</strong> ಇ.ಆರ್.ಎಸ್.ಎಸ್ ವಾಹನ ದಲ್ಲಿ ಕರ್ತವ್ಯದಲ್ಲಿದ್ದ ಶೃಂಗೇರಿ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಸತೀಶ್ ಕೆ.ಡಿ (52) ಮಂಗಳವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.</p>.<p>ಹರಿಹರಪುರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ಅವರು, ಬೊಮ್ಮಲಾಪುರಕ್ಕೆ ಬುಧವಾರ ರಾತ್ರಿ ಇ.ಆರ್.ಎಸ್.ಎಸ್ ವಾಹನದಲ್ಲಿ ತೆರಳಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿದ್ದರಿಂದ ವಾಹನ ಚಾಲಕ ಪ್ರವೀಣ್ ಅವರು ಸತೀಶ್ರನ್ನು ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಸತೀಶ್ ಅವರು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದರು.</p>.<p>ಸತೀಶ್ 24 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತರಾಗಿ, 2017ನೇ ಸಾಲಿನ ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ನೇಮಕಾತಿಯಲ್ಲಿ ಮಾಜಿ ಸೈನಿಕರ ಕೋಟಾದಡಿ ಕಾನ್ಸ್ಟೆಬಲ್ ಆಗಿ ಸೇರಿದ್ದರು. ಕೊಪ್ಪ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, 2 ವರ್ಷದಿಂದ ಶೃಂಗೇರಿ ಪೊಲೀಸ್ ಠಾಣೆಯಲ್ಲಿಕರ್ತವ್ಯ ನಿರ್ವಹಿಸುತ್ತಿದ್ದರು. ಅವರಿಗೆ ಪತ್ನಿ, ಪುತ್ರ ಇದ್ದಾರೆ. ಹರಿಹರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-126-584591997</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ:</strong> ಇ.ಆರ್.ಎಸ್.ಎಸ್ ವಾಹನ ದಲ್ಲಿ ಕರ್ತವ್ಯದಲ್ಲಿದ್ದ ಶೃಂಗೇರಿ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಸತೀಶ್ ಕೆ.ಡಿ (52) ಮಂಗಳವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.</p>.<p>ಹರಿಹರಪುರದಲ್ಲಿ ಕುಟುಂಬದೊಂದಿಗೆ ವಾಸವಿದ್ದ ಅವರು, ಬೊಮ್ಮಲಾಪುರಕ್ಕೆ ಬುಧವಾರ ರಾತ್ರಿ ಇ.ಆರ್.ಎಸ್.ಎಸ್ ವಾಹನದಲ್ಲಿ ತೆರಳಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿದ್ದರಿಂದ ವಾಹನ ಚಾಲಕ ಪ್ರವೀಣ್ ಅವರು ಸತೀಶ್ರನ್ನು ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಸತೀಶ್ ಅವರು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದರು.</p>.<p>ಸತೀಶ್ 24 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತರಾಗಿ, 2017ನೇ ಸಾಲಿನ ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ನೇಮಕಾತಿಯಲ್ಲಿ ಮಾಜಿ ಸೈನಿಕರ ಕೋಟಾದಡಿ ಕಾನ್ಸ್ಟೆಬಲ್ ಆಗಿ ಸೇರಿದ್ದರು. ಕೊಪ್ಪ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, 2 ವರ್ಷದಿಂದ ಶೃಂಗೇರಿ ಪೊಲೀಸ್ ಠಾಣೆಯಲ್ಲಿಕರ್ತವ್ಯ ನಿರ್ವಹಿಸುತ್ತಿದ್ದರು. ಅವರಿಗೆ ಪತ್ನಿ, ಪುತ್ರ ಇದ್ದಾರೆ. ಹರಿಹರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-126-584591997</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>