<p>ಚಿಕ್ಕಮಗಳೂರು: ಜನಮನವನ್ನು ಜಾಗೃತಗೊಳಿಸಲು ಧರ್ಮ ಬೇಕು. ಗುರುವಿನ ದರ್ಶನ ಪಡೆಯಲು ಭಾಗ್ಯ ಬೇಕು. ಗುರು ದರ್ಶನ ಸಂಸ್ಕಾರದಿಂದ ಭವ ಬಂಧನ ದೂರವಾಗುತ್ತದೆ ಎಂದು ಬಾಳೆಹೊನ್ನೂರು ರಂಭಾಪುರಿ ಮಠದ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಬುಧವಾರ ನಡೆದ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಭಕ್ತಿ ಭಂಡಾರಿ ಬಸವೇಶ್ವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.</p>.<p>ಪ್ರಾಪಂಚಿಕ ಸಂಬಂಧಗಳು ಕಾಲಾಂತರದಲ್ಲಿ ಶಿಥಿಲಗೊಳ್ಳಬಹುದು. ಆದರೆ, ಗುರು– ಶಿಷ್ಯರ ಸಂಬಂಧ ಚಿರಂತನ ಮತ್ತು ನಿತ್ಯ ನೂತನ. ನೊಂದವರ ಬಾಳಿನ ಬೆಳಕು ಗುರು ಮತ್ತು ಅರಿವಿನ ಚೈತನ್ಯದ ಪ್ರತೀಕ. ವೀರಶೈವ ಧರ್ಮ ವೃಕ್ಷದ ತಾಯಿಬೇರು ರೇಣುಕಾಚಾರ್ಯರು. ಆ ಧರ್ಮ ವೃಕ್ಷದ ಹೂವು, ಹಣ್ಣು ಬಸವಾದಿ ಶರಣರು ಇದ್ದಂತೆ. ರೇಣುಕಾಚಾರ್ಯರು ಕರ್ಮವನ್ನು ಕಳೆದು ಧರ್ಮವನ್ನು ಬಿತ್ತಿ ಬದುಕು ಬಂಗಾರಗೊಳಿಸಿದರು. ಶಿವಪಥವನ್ನು ಅರಿಯಲು ಗುರು ಪಥವೇ ಮೊದಲು ಎಂದು ಸಾರಿದವರು ಬಸವಣ್ಣ. ಕಾಯಕದ ಮೂಲಕ ಕಳೆಯನ್ನು ತಂದ ಶ್ರೇಯಸ್ಸು ಅವರು ಎಂದರು.</p>.<p>ಬೇರುಗಂಡಿ ಬೃಹನ್ಮಠದ ರೇಣುಕ ಮಹಾಂತ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಭಕ್ತಿ ಭಂಡಾರಿ ಬಸವೇಶ್ವ ರರು ಕೆಡಕುಗಳನ್ನು ಮೆಟ್ಟಿ ನಿಂತು ಒಳಿತಿನತ್ತ ಹೆಜ್ಜೆ ಹಾಕಲು ಪ್ರೇರೇಪಿಸಿದ ಮಹಾನುಭಾವರು. ಬಾಳಿಗೊಂದು ಗುರಿ ಮತ್ತು ಗುರು ಇರಬೇಕು ಎಂಬುದನ್ನು ಮನವರಿಕೆ ಮಾಡಿ ಕೊಟ್ಟರು’ ಎಂದರು.</p>.<p>ಶಂಕರ ದೇವರ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ರೇಣುಕಾಚಾರ್ಯರ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳ ವಿಚಾರ ಧಾರೆ ಎಂದೆಂದಿಗೂ ಎಲ್ಲರಿಗೂ ಬೇಕಾದವು’ ಎಂದು ಹೇಳಿದರು.</p>.<p>ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ನ ಉಪಾಧ್ಯಕ್ಷ ಎ.ಬಿ. ಸುದರ್ಶನ್ ಮಾತನಾಡಿ, ‘ರವಿ ಕಿರಣದಿಂದ ಪುಷ್ಪ ಅರಳಿದರೆ ಗುರು ಕರುಣದಿಂದ ಆತ್ಮ ಅರಳುತ್ತದೆ. ಜಗ ಬೆಳಗಲು ಸೂರ್ಯ, ಬದುಕು ಬೆಳಗಲು ಗುರು ಬೇಕು. ಗುರುವಿನ ಆಧ್ಯಾತ್ಮ ಶಕ್ತಿ ಅದ್ಭುತ’ ಎಂದು ತಿಳಿಸಿದರು.</p>.<p>ರೇಣುಕಾಚಾರ್ಯ ಟ್ರಸ್ಟಿನ ಪದಾಧಿಕಾರಿಗಳಾದ ಯು.ಎಂ. ಬಸವರಾಜ್, ಎಂ.ಡಿ. ಪುಟ್ಟಸ್ವಾಮಿ, ಎಸ್.ಎಂ. ದೇವಣ್ಣಗೌಡ, ಎಚ್.ಎನ್. ನಂಜೇಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-126-1113090305</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಜನಮನವನ್ನು ಜಾಗೃತಗೊಳಿಸಲು ಧರ್ಮ ಬೇಕು. ಗುರುವಿನ ದರ್ಶನ ಪಡೆಯಲು ಭಾಗ್ಯ ಬೇಕು. ಗುರು ದರ್ಶನ ಸಂಸ್ಕಾರದಿಂದ ಭವ ಬಂಧನ ದೂರವಾಗುತ್ತದೆ ಎಂದು ಬಾಳೆಹೊನ್ನೂರು ರಂಭಾಪುರಿ ಮಠದ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಬುಧವಾರ ನಡೆದ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಭಕ್ತಿ ಭಂಡಾರಿ ಬಸವೇಶ್ವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.</p>.<p>ಪ್ರಾಪಂಚಿಕ ಸಂಬಂಧಗಳು ಕಾಲಾಂತರದಲ್ಲಿ ಶಿಥಿಲಗೊಳ್ಳಬಹುದು. ಆದರೆ, ಗುರು– ಶಿಷ್ಯರ ಸಂಬಂಧ ಚಿರಂತನ ಮತ್ತು ನಿತ್ಯ ನೂತನ. ನೊಂದವರ ಬಾಳಿನ ಬೆಳಕು ಗುರು ಮತ್ತು ಅರಿವಿನ ಚೈತನ್ಯದ ಪ್ರತೀಕ. ವೀರಶೈವ ಧರ್ಮ ವೃಕ್ಷದ ತಾಯಿಬೇರು ರೇಣುಕಾಚಾರ್ಯರು. ಆ ಧರ್ಮ ವೃಕ್ಷದ ಹೂವು, ಹಣ್ಣು ಬಸವಾದಿ ಶರಣರು ಇದ್ದಂತೆ. ರೇಣುಕಾಚಾರ್ಯರು ಕರ್ಮವನ್ನು ಕಳೆದು ಧರ್ಮವನ್ನು ಬಿತ್ತಿ ಬದುಕು ಬಂಗಾರಗೊಳಿಸಿದರು. ಶಿವಪಥವನ್ನು ಅರಿಯಲು ಗುರು ಪಥವೇ ಮೊದಲು ಎಂದು ಸಾರಿದವರು ಬಸವಣ್ಣ. ಕಾಯಕದ ಮೂಲಕ ಕಳೆಯನ್ನು ತಂದ ಶ್ರೇಯಸ್ಸು ಅವರು ಎಂದರು.</p>.<p>ಬೇರುಗಂಡಿ ಬೃಹನ್ಮಠದ ರೇಣುಕ ಮಹಾಂತ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಭಕ್ತಿ ಭಂಡಾರಿ ಬಸವೇಶ್ವ ರರು ಕೆಡಕುಗಳನ್ನು ಮೆಟ್ಟಿ ನಿಂತು ಒಳಿತಿನತ್ತ ಹೆಜ್ಜೆ ಹಾಕಲು ಪ್ರೇರೇಪಿಸಿದ ಮಹಾನುಭಾವರು. ಬಾಳಿಗೊಂದು ಗುರಿ ಮತ್ತು ಗುರು ಇರಬೇಕು ಎಂಬುದನ್ನು ಮನವರಿಕೆ ಮಾಡಿ ಕೊಟ್ಟರು’ ಎಂದರು.</p>.<p>ಶಂಕರ ದೇವರ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ರೇಣುಕಾಚಾರ್ಯರ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳ ವಿಚಾರ ಧಾರೆ ಎಂದೆಂದಿಗೂ ಎಲ್ಲರಿಗೂ ಬೇಕಾದವು’ ಎಂದು ಹೇಳಿದರು.</p>.<p>ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ನ ಉಪಾಧ್ಯಕ್ಷ ಎ.ಬಿ. ಸುದರ್ಶನ್ ಮಾತನಾಡಿ, ‘ರವಿ ಕಿರಣದಿಂದ ಪುಷ್ಪ ಅರಳಿದರೆ ಗುರು ಕರುಣದಿಂದ ಆತ್ಮ ಅರಳುತ್ತದೆ. ಜಗ ಬೆಳಗಲು ಸೂರ್ಯ, ಬದುಕು ಬೆಳಗಲು ಗುರು ಬೇಕು. ಗುರುವಿನ ಆಧ್ಯಾತ್ಮ ಶಕ್ತಿ ಅದ್ಭುತ’ ಎಂದು ತಿಳಿಸಿದರು.</p>.<p>ರೇಣುಕಾಚಾರ್ಯ ಟ್ರಸ್ಟಿನ ಪದಾಧಿಕಾರಿಗಳಾದ ಯು.ಎಂ. ಬಸವರಾಜ್, ಎಂ.ಡಿ. ಪುಟ್ಟಸ್ವಾಮಿ, ಎಸ್.ಎಂ. ದೇವಣ್ಣಗೌಡ, ಎಚ್.ಎನ್. ನಂಜೇಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-126-1113090305</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>