<p><strong>ಚಿಕ್ಕಮಗಳೂರು:</strong> ಬೇಸಿಗೆ ರಜೆಯಲ್ಲಿ ಗ್ರಾಮೀಣ ಪ್ರದೇಶ ಮಕ್ಕಳು ಕಾಲಹರಣ ಮಾಡದಂತೆ ಸರ್ಕಾರದಿಂದಲೇ ಬೇಸಿಗೆ ಶಿಬಿರ ಆಯೋಜಿಸಲು ಸಿದ್ಧತೆ ನಡೆದಿದೆ. ಗ್ರಾಮ ಪಂಚಾಯಿತಿಗಳ ಮೂಲಕ ನಿರ್ವಹಣೆಯಾಗುತ್ತಿರುವ ಗ್ರಂಥಾಲಯಗಳಲ್ಲಿ ಬೇಸಿಗೆ ಶಿಬಿರ ಆಯೋಜಿಸಲು ಜಿಲ್ಲಾ ಪಂಚಾಯಿತಿ ತಯಾರಿ ನಡೆಸಿದೆ.</p>.<p>ಬೇಸಿಗೆ ಶಿಬಿರ ಎಂದರೆ ನಗರ, ಪಟ್ಟಣ ಮತ್ತು ಖಾಸಗಿ ಶಾಲೆಗಳಿಗೆ ಸೀಮಿತವಾಗಿದೆ. ಸಂಗೀತ, ನಾಟಕ, ಕಲೆ, ಚಿತ್ರಕಲೆ, ಈಜು ಶಿಬಿರ ಸೇರಿ ವಿವಿಧ ರೀತಿಯ ಶಿಬಿರಗಳು ನಗರ ಪ್ರದೇಶದಲ್ಲಿ ನಡೆಯುತ್ತಿವೆ. ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳಿಗೆ ವರಮಾನವೂ ಆಗಿದೆ. ಆದರೆ, ಗ್ರಾಮೀಣ ಪ್ರದೇಶದ ಮಕ್ಕಳನ್ನು ಬೇಸಿಗೆ ಶಿಬಿರದಲ್ಲಿ ತೊಡಗಿಸಲು ಜಿಲ್ಲಾ ಪಂಚಾಯಿತಿ ಮುಂದಾಗಿದೆ.</p>.<p>ಜಿಲ್ಲೆಯಲ್ಲಿ 226 ಗ್ರಾಮೀಣ ಗ್ರಂಥಾಲಯಗಳಿದ್ದು, 164 ಗ್ರಾಮ ಪಂಚಾಯಿತಿ ಕಟ್ಟಡ ಹಾಗೂ ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಉಳಿದಂತೆ ಶಾಲಾ ಕಟ್ಟಡದಲ್ಲಿ 36, ಅಂಗನವಾಡಿ ಕಟ್ಟಡದಲ್ಲಿ 13, ಸಮುದಾಯ ಭವನಗಳಲ್ಲಿ 8, ಬಾಡಿಗೆ ಕಟ್ಟಡದಲ್ಲಿ ಗ್ರಂಥಾಲಯಗಳು ನಡೆಯುತ್ತಿವೆ. ಈ ಗ್ರಂಥಾಲಯಗಳು ಓದುಗರನ್ನು ಸೆಳೆಯುವ ಜತೆಗೆ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡುವ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ.</p>.<p>ದಿನಪತ್ರಿಕೆಗಳು, ಕಥೆ, ಕಾದಂಬರಿ ಸೇರಿ ಬಗೆ ಬಗೆಯ ಪುಸ್ತಕಗಳ ಮೂಲಕ ಗ್ರಾಮೀಣ ಜನರ ಜ್ಞಾನ ವೃದ್ಧಿಗೆ ಇವು ಸಹಕಾರಿಯಾಗಿವೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ವಿಶೇಷ ಪುಸ್ತಕ, ಕಂಪ್ಯೂಟರ್, ಟಿ.ವಿ ಅಳವಡಿಸಿ ಮಕ್ಕಳ ಶಿಕ್ಷಣಕ್ಕೆ ನೆರವಾಗುತ್ತಿವೆ. ಇದರ ಜತೆಗೆ ಇದೇ ಮೊದಲ ಬಾರಿಗೆ ಜಿಲ್ಲೆಯ ಎಲ್ಲಾ ಗ್ರಂಥಾಲಯಗಳಲ್ಲಿ ಬೇಸಿಗೆ ಶಿಬಿರ ಆಯೋಜನೆಗೆ ಸಿದ್ಧತೆ ನಡೆದಿದೆ.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಅವರು ಈ ಬಗ್ಗೆ ಆಸಕ್ತಿ ವಹಿಸಿದ್ದು, ಅಷ್ಟೂ ಗ್ರಾಮ ಪಂಚಾಯಿತಿ ಮತ್ತು ಬಾಲಭವನಗಳಲ್ಲಿ ಶಿಬಿರ ಆಯೋಜಿಸಲು ಉದ್ದೇಶಿಸಲಾಗಿದೆ.</p>.<p>ಮಲೆನಾಡು ಮತ್ತು ಬಯಲುಸೀಮೆ ಒಳಗೊಂಡಿರುವ ಜಿಲ್ಲೆಯಲ್ಲಿ ಆಯಾ ಭಾಗದ ಸ್ಥಳೀಯ ಆಚರಣೆ, ಕಲೆ, ಸಾಹಿತ್ಯ, ಸಂಸ್ಕೃತಿಗಳಿವೆ. ಇವುಗಳನ್ನು ಮಕ್ಕಳಿಗೆ ತಿಳಿಸುವ ದೃಷ್ಟಿಯಿಂದ ಸ್ಥಳೀಯರನ್ನು ಬಳಸಿಕೊಳ್ಳಲು ಚಿಂತಿಸಲಾಗಿದೆ. ಸ್ಥಳೀಯರ ಜತೆಗೆ ಬೇಸಿಗೆ ಶಿಬಿರದಲ್ಲಿ ವಿಭಿನ್ನ ಆಸಕ್ತಿ ಹೊಂದಿರುವ ಶಿಕ್ಷಕರನ್ನು ಬಳಸಿಕೊಳ್ಳಲು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಆಲೋಚನೆ ನಡೆಸಿದ್ದಾರೆ.</p>.<p>ಕೇರಂ, ಚೆಸ್ ಸೇರಿ ಗ್ರಾಮೀಣ ಕ್ರೀಡೆಗಳು, ಕಥೆ ಹೇಳುವುದು, ಪಠ್ಯವಲ್ಲದೇ ಬೇರೆ ಪುಸ್ತಕ ಓದುವ ಹವ್ಯಾಸ ರೂಢಿಸುವುದು, ಮಕ್ಕಳಲ್ಲಿ ಇರುವ ಆಸಕ್ತಿದಾಯಕ ವಿಷಯಗಳನ್ನು ಗುರುತಿಸಿ ಹೆಚ್ಚಿನ ಪ್ರೋತ್ಸಾಹ ನೀಡುವುದು ಶಿಬಿರದ ಉದ್ದೇಶ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಗ್ರಂಥಪಾಲಕರಿಗೆ ತರಬೇತಿ</strong></p><p>ಬೇಸಿಗೆ ಶಿಬಿರ ಆಯೋಜಿಸುವ ಸಂಬಂಧ ಗ್ರಂಥಪಾಲಕರನ್ನು ಕೊಪ್ಪಳಕ್ಕೆ ಕಳುಹಿಸಿ ವಿಶೇಷ ತರಬೇತಿಯನ್ನು ಜಿಲ್ಲಾ ಪಂಚಾಯಿತಿ ಮೂಲಕ ಕೊಡಿಸಲಾಗಿದೆ.</p><p>ಶಿಬಿರದಲ್ಲಿ ಸ್ಥಳೀಯ ಸಂಸ್ಕೃತಿ, ಜಾನಪದ ಕಲೆ, ಚಿತ್ರಕಲೆ, ಪೇಪರ್ ಕಲಾಕೃತಿ ಸೇರಿ ವಿವಿಧ ಆಸಕ್ತಿದಾಯಕ ವಿಷಯಗಳನ್ನು ಮಕ್ಕಳಿಗೆ ಹೇಳಿಕೊಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಮಾಹಿತಿ ನೀಡಿದರು.</p>.<div><blockquote>ಶಾಲಾ ಪರೀಕ್ಷೆಗಳು ಮುಗಿದ ಕೂಡಲೇ ಬೇಸಿಗೆ ಶಿಬಿರಗಳನ್ನು ಗ್ರಂಥಾಲಯಗಳಲ್ಲಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಗ್ರಂಥಪಾಲಕರಿಗೆ ತರಬೇತಿಯನ್ನೂ ಕೊಡಿಸಲಾಗಿದೆ. </blockquote><span class="attribution">ಎಚ್.ಎಸ್.ಕೀರ್ತನಾ, ಜಿಲ್ಲಾ ಪಂಚಾಯಿತಿ ಸಿಇಬ</span></div>. <p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br>260404-126-1873593027</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಬೇಸಿಗೆ ರಜೆಯಲ್ಲಿ ಗ್ರಾಮೀಣ ಪ್ರದೇಶ ಮಕ್ಕಳು ಕಾಲಹರಣ ಮಾಡದಂತೆ ಸರ್ಕಾರದಿಂದಲೇ ಬೇಸಿಗೆ ಶಿಬಿರ ಆಯೋಜಿಸಲು ಸಿದ್ಧತೆ ನಡೆದಿದೆ. ಗ್ರಾಮ ಪಂಚಾಯಿತಿಗಳ ಮೂಲಕ ನಿರ್ವಹಣೆಯಾಗುತ್ತಿರುವ ಗ್ರಂಥಾಲಯಗಳಲ್ಲಿ ಬೇಸಿಗೆ ಶಿಬಿರ ಆಯೋಜಿಸಲು ಜಿಲ್ಲಾ ಪಂಚಾಯಿತಿ ತಯಾರಿ ನಡೆಸಿದೆ.</p>.<p>ಬೇಸಿಗೆ ಶಿಬಿರ ಎಂದರೆ ನಗರ, ಪಟ್ಟಣ ಮತ್ತು ಖಾಸಗಿ ಶಾಲೆಗಳಿಗೆ ಸೀಮಿತವಾಗಿದೆ. ಸಂಗೀತ, ನಾಟಕ, ಕಲೆ, ಚಿತ್ರಕಲೆ, ಈಜು ಶಿಬಿರ ಸೇರಿ ವಿವಿಧ ರೀತಿಯ ಶಿಬಿರಗಳು ನಗರ ಪ್ರದೇಶದಲ್ಲಿ ನಡೆಯುತ್ತಿವೆ. ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳಿಗೆ ವರಮಾನವೂ ಆಗಿದೆ. ಆದರೆ, ಗ್ರಾಮೀಣ ಪ್ರದೇಶದ ಮಕ್ಕಳನ್ನು ಬೇಸಿಗೆ ಶಿಬಿರದಲ್ಲಿ ತೊಡಗಿಸಲು ಜಿಲ್ಲಾ ಪಂಚಾಯಿತಿ ಮುಂದಾಗಿದೆ.</p>.<p>ಜಿಲ್ಲೆಯಲ್ಲಿ 226 ಗ್ರಾಮೀಣ ಗ್ರಂಥಾಲಯಗಳಿದ್ದು, 164 ಗ್ರಾಮ ಪಂಚಾಯಿತಿ ಕಟ್ಟಡ ಹಾಗೂ ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಉಳಿದಂತೆ ಶಾಲಾ ಕಟ್ಟಡದಲ್ಲಿ 36, ಅಂಗನವಾಡಿ ಕಟ್ಟಡದಲ್ಲಿ 13, ಸಮುದಾಯ ಭವನಗಳಲ್ಲಿ 8, ಬಾಡಿಗೆ ಕಟ್ಟಡದಲ್ಲಿ ಗ್ರಂಥಾಲಯಗಳು ನಡೆಯುತ್ತಿವೆ. ಈ ಗ್ರಂಥಾಲಯಗಳು ಓದುಗರನ್ನು ಸೆಳೆಯುವ ಜತೆಗೆ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡುವ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ.</p>.<p>ದಿನಪತ್ರಿಕೆಗಳು, ಕಥೆ, ಕಾದಂಬರಿ ಸೇರಿ ಬಗೆ ಬಗೆಯ ಪುಸ್ತಕಗಳ ಮೂಲಕ ಗ್ರಾಮೀಣ ಜನರ ಜ್ಞಾನ ವೃದ್ಧಿಗೆ ಇವು ಸಹಕಾರಿಯಾಗಿವೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ವಿಶೇಷ ಪುಸ್ತಕ, ಕಂಪ್ಯೂಟರ್, ಟಿ.ವಿ ಅಳವಡಿಸಿ ಮಕ್ಕಳ ಶಿಕ್ಷಣಕ್ಕೆ ನೆರವಾಗುತ್ತಿವೆ. ಇದರ ಜತೆಗೆ ಇದೇ ಮೊದಲ ಬಾರಿಗೆ ಜಿಲ್ಲೆಯ ಎಲ್ಲಾ ಗ್ರಂಥಾಲಯಗಳಲ್ಲಿ ಬೇಸಿಗೆ ಶಿಬಿರ ಆಯೋಜನೆಗೆ ಸಿದ್ಧತೆ ನಡೆದಿದೆ.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಅವರು ಈ ಬಗ್ಗೆ ಆಸಕ್ತಿ ವಹಿಸಿದ್ದು, ಅಷ್ಟೂ ಗ್ರಾಮ ಪಂಚಾಯಿತಿ ಮತ್ತು ಬಾಲಭವನಗಳಲ್ಲಿ ಶಿಬಿರ ಆಯೋಜಿಸಲು ಉದ್ದೇಶಿಸಲಾಗಿದೆ.</p>.<p>ಮಲೆನಾಡು ಮತ್ತು ಬಯಲುಸೀಮೆ ಒಳಗೊಂಡಿರುವ ಜಿಲ್ಲೆಯಲ್ಲಿ ಆಯಾ ಭಾಗದ ಸ್ಥಳೀಯ ಆಚರಣೆ, ಕಲೆ, ಸಾಹಿತ್ಯ, ಸಂಸ್ಕೃತಿಗಳಿವೆ. ಇವುಗಳನ್ನು ಮಕ್ಕಳಿಗೆ ತಿಳಿಸುವ ದೃಷ್ಟಿಯಿಂದ ಸ್ಥಳೀಯರನ್ನು ಬಳಸಿಕೊಳ್ಳಲು ಚಿಂತಿಸಲಾಗಿದೆ. ಸ್ಥಳೀಯರ ಜತೆಗೆ ಬೇಸಿಗೆ ಶಿಬಿರದಲ್ಲಿ ವಿಭಿನ್ನ ಆಸಕ್ತಿ ಹೊಂದಿರುವ ಶಿಕ್ಷಕರನ್ನು ಬಳಸಿಕೊಳ್ಳಲು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಆಲೋಚನೆ ನಡೆಸಿದ್ದಾರೆ.</p>.<p>ಕೇರಂ, ಚೆಸ್ ಸೇರಿ ಗ್ರಾಮೀಣ ಕ್ರೀಡೆಗಳು, ಕಥೆ ಹೇಳುವುದು, ಪಠ್ಯವಲ್ಲದೇ ಬೇರೆ ಪುಸ್ತಕ ಓದುವ ಹವ್ಯಾಸ ರೂಢಿಸುವುದು, ಮಕ್ಕಳಲ್ಲಿ ಇರುವ ಆಸಕ್ತಿದಾಯಕ ವಿಷಯಗಳನ್ನು ಗುರುತಿಸಿ ಹೆಚ್ಚಿನ ಪ್ರೋತ್ಸಾಹ ನೀಡುವುದು ಶಿಬಿರದ ಉದ್ದೇಶ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಗ್ರಂಥಪಾಲಕರಿಗೆ ತರಬೇತಿ</strong></p><p>ಬೇಸಿಗೆ ಶಿಬಿರ ಆಯೋಜಿಸುವ ಸಂಬಂಧ ಗ್ರಂಥಪಾಲಕರನ್ನು ಕೊಪ್ಪಳಕ್ಕೆ ಕಳುಹಿಸಿ ವಿಶೇಷ ತರಬೇತಿಯನ್ನು ಜಿಲ್ಲಾ ಪಂಚಾಯಿತಿ ಮೂಲಕ ಕೊಡಿಸಲಾಗಿದೆ.</p><p>ಶಿಬಿರದಲ್ಲಿ ಸ್ಥಳೀಯ ಸಂಸ್ಕೃತಿ, ಜಾನಪದ ಕಲೆ, ಚಿತ್ರಕಲೆ, ಪೇಪರ್ ಕಲಾಕೃತಿ ಸೇರಿ ವಿವಿಧ ಆಸಕ್ತಿದಾಯಕ ವಿಷಯಗಳನ್ನು ಮಕ್ಕಳಿಗೆ ಹೇಳಿಕೊಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಮಾಹಿತಿ ನೀಡಿದರು.</p>.<div><blockquote>ಶಾಲಾ ಪರೀಕ್ಷೆಗಳು ಮುಗಿದ ಕೂಡಲೇ ಬೇಸಿಗೆ ಶಿಬಿರಗಳನ್ನು ಗ್ರಂಥಾಲಯಗಳಲ್ಲಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಗ್ರಂಥಪಾಲಕರಿಗೆ ತರಬೇತಿಯನ್ನೂ ಕೊಡಿಸಲಾಗಿದೆ. </blockquote><span class="attribution">ಎಚ್.ಎಸ್.ಕೀರ್ತನಾ, ಜಿಲ್ಲಾ ಪಂಚಾಯಿತಿ ಸಿಇಬ</span></div>. <p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br>260404-126-1873593027</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>