<p>ಬಾಳೆಹೊನ್ನೂರು: ಖಾಂಡ್ಯ ಹೋಬಳಿ ಸಂಗಮೇಶ್ವರ ಪೇಟೆಯಲ್ಲಿರುವ ದೇವದಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕು ಕೊಠಡಿಗಳು ನಿರ್ಮಾಣಗೊಂಡಿದ್ದರೂ, ಲೋಕೋಪಯೋಗಿ ಇಲಾಖೆ ಹಸ್ತಾಮತರ ಮಾಡಿಲ್ಲ. ಆದ್ದರಿಂದ ಅಲ್ಲಿ ತರಗತಿ ನಡೆಸಲು ಸಾಧ್ಯವಾಗುತ್ತಿಲ್ಲ. ಎರಡು ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ₹34.3 ಲಕ್ಷ ಮಂಜೂರಾಗಿದ್ದು, ಜೂನ್ ತಿಂಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವರದಿ ಸಲ್ಲಿಸಿದ್ದಾರೆ.</p>.<p>ದೇವದಾನ ಶಾಲೆಯ ದುಸ್ಥಿತಿ ಕುರಿತು ಮಾ.19 ರಂದು ‘ಪ್ರಜಾವಾಣಿ’ ವಿಸೃತ ವರದಿ ಪ್ರಕಟಿಸಿತ್ತು. ಉಪನಿರ್ದೇಶಕರು ಕೇಳಿದ್ದ ಮಾಹಿತಿ ಆಧರಿಸಿ ಬಿಇಒ ಅವರು ವರದಿ ಸಲ್ಲಿಸಿದ್ದಾರೆ.</p>.<p>2022-23ರಲ್ಲಿ ವಿವೇಕ ಯೋಜನೆ ಯಡಿ 4 ಕೊಠಡಿನಿರ್ಮಾಣಗೊಂಡಿವೆ. ಹಸ್ತಾಂತರ ಮಾಡುವಂತೆ 2026ರ ಜ.29ರಂದು ಮತ್ತೊಮ್ಮೆ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆಯಲಾಗಿದೆ. ಆದರೂ, ಹಸ್ತಾಂತರವಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.</p>.<p>ಸದ್ಯ ತರಗತಿಗಳು ನಡೆಯುತ್ತಿರುವ ಕಟ್ಟಡ ಮುಖ್ಯ ರಸ್ತೆಗೆ ಹೊಂದಿಕೊಂಡಿದೆ. ರಸ್ತೆ ವಿಸ್ತರಣೆ ಸಂದರ್ಭದಲ್ಲಿ ಕಟ್ಟಡ ತೆರವಾಗುವ ಸಾಧ್ಯತೆ ಇರುವುದರಿಂದ ಹಿಂಭಾಗದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಈ ಕೊಠಡಿಗೆ ತರಗತಿಗಳ ಸ್ಥಳಾಂತರ ಮಾಡಲು ಎಸ್ಡಿಎಂಸಿ ಸಭೆಯಲ್ಲೂ ಸಮ್ಮತಿ ದೊರ ಕಿಲ್ಲ ಎಂದು ಹೇಳಿದ್ದಾರೆ.</p>.<p>ನರೇಗಾ ಯೋಜನೆ ಅಡಿಯಲ್ಲಿ ಪ್ರೌಢಶಾಲೆ ಹಿಂಭಾಗದಲ್ಲಿ ನಿರ್ಮಾಣಗೊಂಡಿರುವ ಹೊಸ ಕೊಠಡಿಗಳ ಬಳಿಯಲ್ಲಿ ಶೌಚಾಲಯ ನಿರ್ಮಿಸಲಾಗಿದೆ. ಹಳೆಯ ಕಟ್ಟಡದಲ್ಲಿ ಇರುವ ಶೌಚಾಲಯ ಕೂಡ ಬಳಕೆಗೆ ಯೋಗ್ಯವಾಗಿದೆ ಎಂದು ಮುಖ್ಯ ಶಿಕ್ಷಕರು ತಿಳಿಸಿದ್ದಾರೆ. ಕೊಠಡಿಗಳ ದುರಸ್ತಿಗೆ 2025-26ನೇ ಸಾಲಿನಲ್ಲಿ ₹2 ಲಕ್ಷ ಮಂಜೂರಾಗಿದ್ದು, ತುರ್ತು ಅಗತ್ಯ ಇರುವ ಶಾಲಾ ಕೊಠಡಿ ದುರಸ್ತಿಗೆ ಕ್ರಮ ವಹಿಸಲಾಗಿದೆ. ಎರಡು ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ₹34.3 ಲಕ್ಷ ಮಂಜೂರಾಗಿದ್ದು, ಜೂನ್ ತಿಂಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ವಿವರಿಸಿದ್ದಾರೆ.</p>.<p>ತಾಲ್ಲೂಕು ಪಂಚಾಯಿತಿ ವತಿಯಿಂದ ಅಡುಗೆ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಹೊಸ ಕಟ್ಟಡದ ಬಳಿ ಗ್ರಾಮ ಪಂಚಾಯಿತಿಯಿಂದ ನಿರ್ಮಾಣಗೊಂಡಿರುವ ಶೌಚಾಲಯ ಹಸ್ತಾಂತರ ಮಾಡಲು ಹಾಗೂ ಅಲ್ಲಿ ಬೆಳೆದಿರುವ ಗಿಡ ತೆರವುಗೊಳಿಸಲು ಕೋರಲಾಗಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-126-1573240231</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಳೆಹೊನ್ನೂರು: ಖಾಂಡ್ಯ ಹೋಬಳಿ ಸಂಗಮೇಶ್ವರ ಪೇಟೆಯಲ್ಲಿರುವ ದೇವದಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕು ಕೊಠಡಿಗಳು ನಿರ್ಮಾಣಗೊಂಡಿದ್ದರೂ, ಲೋಕೋಪಯೋಗಿ ಇಲಾಖೆ ಹಸ್ತಾಮತರ ಮಾಡಿಲ್ಲ. ಆದ್ದರಿಂದ ಅಲ್ಲಿ ತರಗತಿ ನಡೆಸಲು ಸಾಧ್ಯವಾಗುತ್ತಿಲ್ಲ. ಎರಡು ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ₹34.3 ಲಕ್ಷ ಮಂಜೂರಾಗಿದ್ದು, ಜೂನ್ ತಿಂಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವರದಿ ಸಲ್ಲಿಸಿದ್ದಾರೆ.</p>.<p>ದೇವದಾನ ಶಾಲೆಯ ದುಸ್ಥಿತಿ ಕುರಿತು ಮಾ.19 ರಂದು ‘ಪ್ರಜಾವಾಣಿ’ ವಿಸೃತ ವರದಿ ಪ್ರಕಟಿಸಿತ್ತು. ಉಪನಿರ್ದೇಶಕರು ಕೇಳಿದ್ದ ಮಾಹಿತಿ ಆಧರಿಸಿ ಬಿಇಒ ಅವರು ವರದಿ ಸಲ್ಲಿಸಿದ್ದಾರೆ.</p>.<p>2022-23ರಲ್ಲಿ ವಿವೇಕ ಯೋಜನೆ ಯಡಿ 4 ಕೊಠಡಿನಿರ್ಮಾಣಗೊಂಡಿವೆ. ಹಸ್ತಾಂತರ ಮಾಡುವಂತೆ 2026ರ ಜ.29ರಂದು ಮತ್ತೊಮ್ಮೆ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆಯಲಾಗಿದೆ. ಆದರೂ, ಹಸ್ತಾಂತರವಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.</p>.<p>ಸದ್ಯ ತರಗತಿಗಳು ನಡೆಯುತ್ತಿರುವ ಕಟ್ಟಡ ಮುಖ್ಯ ರಸ್ತೆಗೆ ಹೊಂದಿಕೊಂಡಿದೆ. ರಸ್ತೆ ವಿಸ್ತರಣೆ ಸಂದರ್ಭದಲ್ಲಿ ಕಟ್ಟಡ ತೆರವಾಗುವ ಸಾಧ್ಯತೆ ಇರುವುದರಿಂದ ಹಿಂಭಾಗದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಈ ಕೊಠಡಿಗೆ ತರಗತಿಗಳ ಸ್ಥಳಾಂತರ ಮಾಡಲು ಎಸ್ಡಿಎಂಸಿ ಸಭೆಯಲ್ಲೂ ಸಮ್ಮತಿ ದೊರ ಕಿಲ್ಲ ಎಂದು ಹೇಳಿದ್ದಾರೆ.</p>.<p>ನರೇಗಾ ಯೋಜನೆ ಅಡಿಯಲ್ಲಿ ಪ್ರೌಢಶಾಲೆ ಹಿಂಭಾಗದಲ್ಲಿ ನಿರ್ಮಾಣಗೊಂಡಿರುವ ಹೊಸ ಕೊಠಡಿಗಳ ಬಳಿಯಲ್ಲಿ ಶೌಚಾಲಯ ನಿರ್ಮಿಸಲಾಗಿದೆ. ಹಳೆಯ ಕಟ್ಟಡದಲ್ಲಿ ಇರುವ ಶೌಚಾಲಯ ಕೂಡ ಬಳಕೆಗೆ ಯೋಗ್ಯವಾಗಿದೆ ಎಂದು ಮುಖ್ಯ ಶಿಕ್ಷಕರು ತಿಳಿಸಿದ್ದಾರೆ. ಕೊಠಡಿಗಳ ದುರಸ್ತಿಗೆ 2025-26ನೇ ಸಾಲಿನಲ್ಲಿ ₹2 ಲಕ್ಷ ಮಂಜೂರಾಗಿದ್ದು, ತುರ್ತು ಅಗತ್ಯ ಇರುವ ಶಾಲಾ ಕೊಠಡಿ ದುರಸ್ತಿಗೆ ಕ್ರಮ ವಹಿಸಲಾಗಿದೆ. ಎರಡು ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ₹34.3 ಲಕ್ಷ ಮಂಜೂರಾಗಿದ್ದು, ಜೂನ್ ತಿಂಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ವಿವರಿಸಿದ್ದಾರೆ.</p>.<p>ತಾಲ್ಲೂಕು ಪಂಚಾಯಿತಿ ವತಿಯಿಂದ ಅಡುಗೆ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಹೊಸ ಕಟ್ಟಡದ ಬಳಿ ಗ್ರಾಮ ಪಂಚಾಯಿತಿಯಿಂದ ನಿರ್ಮಾಣಗೊಂಡಿರುವ ಶೌಚಾಲಯ ಹಸ್ತಾಂತರ ಮಾಡಲು ಹಾಗೂ ಅಲ್ಲಿ ಬೆಳೆದಿರುವ ಗಿಡ ತೆರವುಗೊಳಿಸಲು ಕೋರಲಾಗಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-126-1573240231</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>