<p><strong>ಚಿಕ್ಕಮಗಳೂರು:</strong> ಮಲೆನಾಡು ಭಾಗದ ಐದು ತಾಲ್ಲೂಕುಗಳ 1,500ಕ್ಕೂ ಹೆಚ್ಚು ಜನವಸತಿಗಳಿಗೆ ತುಂಗಾ, ಭದ್ರಾ, ಹೇಮಾವತಿ ನದಿಗಳಿಂದ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ನೀರು ಹರಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಯೋಜನೆ ಸಿದ್ಧಪಡಿಸಿದೆ.</p>.<p>ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ, ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಒಟ್ಟು 1,537 ಜನವಸತಿಗೆ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಮೂಡಿಗೆರೆ, ಎನ್.ಆರ್.ಪುರ, ಶೃಂಗೇರಿ ಪಟ್ಟಣಗಳಿಗೂ ಕುಡಿಯುವ ನೀರು ಪೂರೈಸಲು ಬಹುಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಅವಕಾಶ ಮಾಡಿಕೊಳ್ಳಲಾಗಿದೆ. </p>.<p>ಒಟ್ಟಾರೆ ₹918.95 ಕೋಟಿ ಮೊತ್ತದ ಯೋಜನೆಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯಬೇಕಿದೆ. ಎರಡೂ ಸರ್ಕಾರಕ್ಕೆ ಸ್ಥಳೀಯ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ.</p>.<p>ಶೃಂಗೇರಿ ಪಟ್ಟಣ ಮತ್ತು ತಾಲ್ಲೂಕಿನ ಬಂಡಿಗಾಡಿ, ಚಾವಲಮನೆ, ಹರಿಹರಪುರ ಸುತ್ತಮುತ್ತಲ 694 ಜನವಸತಿಗೆ ಮತ್ತು ಕೊಪ್ಪ ತಾಲ್ಲೂಕಿನ 514 ಜನವಸತಿಗಳಿಗೆ ತುಂಗಾ ನದಿಯಿಂದ ಪೂರೈಸಲು ₹500 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. </p>.<p>ಎನ್.ಆರ್.ಪುರ ತಾಲ್ಲೂಕಿನ ಬನ್ನೂರು, ಬಿ.ಕನಬೂರು, ಮಾಗುಂದಿ ಸೇರಿ 73 ಜನವಸತಿಗೆ ಭದ್ರಾ ನದಿಯಿಂದ ನೀರು ಪೂರೈಸಲು ಮತ್ತೊಂದು ಯೋಜನೆ ಸಿದ್ಧವಾಗಿದೆ. ಈ ಯೋಜನೆಗೆ ₹135.95 ಕೋಟಿ ಮೊತ್ತವನ್ನು ಅಂದಾಜಿಸಲಾಗಿದೆ. </p>.<p>ಎನ್.ಆರ್.ಪುರ ಪಟ್ಟಣ ಮತ್ತು ತಾಲ್ಲೂಕಿನ ಮುತ್ತಿನಕೊಪ್ಪ ಸುತ್ತಮುತ್ತಲ 124 ಹಳ್ಳಿಗಳಿಗೆ ತುಂಗಾ ನದಿಯಿಂದ ನೀರು ಹರಿಸಲು ₹102 ಕೋಟಿ ಮೊತ್ತದ ಯೋಜನೆ ರೂಪುಗೊಂಡಿದೆ. ಮೂಡಿಗೆರೆ ಪಟ್ಟಣ ಮತ್ತು ತಾಲ್ಲೂಕಿನ ಹಳೇ ಮೂಡಿಗೆರೆ, ಹೆಸಗಲ್ ಸೇರಿ 60 ಹಳ್ಳಿಗಳ್ಳಿ ಹೇಮಾವತಿ ನೀರು ತರಲು ₹90 ಕೋಟಿ ಮೊತ್ತದ ಯೋಜನೆ ಸಿದ್ಧಪಡಿಸಲಾಗಿದೆ. ಈ ನಾಲ್ಕು ಯೋಜನೆಗಳಿಂದ ಮೂರು ಪಟ್ಟಣ ಮತ್ತು ನಾಲ್ಕು ತಾಲ್ಲೂಕಿನ 1,455 ಹಳ್ಳಿಗಳಿಗೆ ಅನುಕೂಲ ಆಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಮಲೆನಾಡು ಭಾಗದ ಐದು ತಾಲ್ಲೂಕುಗಳ 1,500ಕ್ಕೂ ಹೆಚ್ಚು ಜನವಸತಿಗಳಿಗೆ ತುಂಗಾ, ಭದ್ರಾ, ಹೇಮಾವತಿ ನದಿಗಳಿಂದ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ನೀರು ಹರಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಯೋಜನೆ ಸಿದ್ಧಪಡಿಸಿದೆ.</p>.<p>ಕೊಪ್ಪ, ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ, ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಒಟ್ಟು 1,537 ಜನವಸತಿಗೆ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಮೂಡಿಗೆರೆ, ಎನ್.ಆರ್.ಪುರ, ಶೃಂಗೇರಿ ಪಟ್ಟಣಗಳಿಗೂ ಕುಡಿಯುವ ನೀರು ಪೂರೈಸಲು ಬಹುಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಅವಕಾಶ ಮಾಡಿಕೊಳ್ಳಲಾಗಿದೆ. </p>.<p>ಒಟ್ಟಾರೆ ₹918.95 ಕೋಟಿ ಮೊತ್ತದ ಯೋಜನೆಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯಬೇಕಿದೆ. ಎರಡೂ ಸರ್ಕಾರಕ್ಕೆ ಸ್ಥಳೀಯ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ.</p>.<p>ಶೃಂಗೇರಿ ಪಟ್ಟಣ ಮತ್ತು ತಾಲ್ಲೂಕಿನ ಬಂಡಿಗಾಡಿ, ಚಾವಲಮನೆ, ಹರಿಹರಪುರ ಸುತ್ತಮುತ್ತಲ 694 ಜನವಸತಿಗೆ ಮತ್ತು ಕೊಪ್ಪ ತಾಲ್ಲೂಕಿನ 514 ಜನವಸತಿಗಳಿಗೆ ತುಂಗಾ ನದಿಯಿಂದ ಪೂರೈಸಲು ₹500 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. </p>.<p>ಎನ್.ಆರ್.ಪುರ ತಾಲ್ಲೂಕಿನ ಬನ್ನೂರು, ಬಿ.ಕನಬೂರು, ಮಾಗುಂದಿ ಸೇರಿ 73 ಜನವಸತಿಗೆ ಭದ್ರಾ ನದಿಯಿಂದ ನೀರು ಪೂರೈಸಲು ಮತ್ತೊಂದು ಯೋಜನೆ ಸಿದ್ಧವಾಗಿದೆ. ಈ ಯೋಜನೆಗೆ ₹135.95 ಕೋಟಿ ಮೊತ್ತವನ್ನು ಅಂದಾಜಿಸಲಾಗಿದೆ. </p>.<p>ಎನ್.ಆರ್.ಪುರ ಪಟ್ಟಣ ಮತ್ತು ತಾಲ್ಲೂಕಿನ ಮುತ್ತಿನಕೊಪ್ಪ ಸುತ್ತಮುತ್ತಲ 124 ಹಳ್ಳಿಗಳಿಗೆ ತುಂಗಾ ನದಿಯಿಂದ ನೀರು ಹರಿಸಲು ₹102 ಕೋಟಿ ಮೊತ್ತದ ಯೋಜನೆ ರೂಪುಗೊಂಡಿದೆ. ಮೂಡಿಗೆರೆ ಪಟ್ಟಣ ಮತ್ತು ತಾಲ್ಲೂಕಿನ ಹಳೇ ಮೂಡಿಗೆರೆ, ಹೆಸಗಲ್ ಸೇರಿ 60 ಹಳ್ಳಿಗಳ್ಳಿ ಹೇಮಾವತಿ ನೀರು ತರಲು ₹90 ಕೋಟಿ ಮೊತ್ತದ ಯೋಜನೆ ಸಿದ್ಧಪಡಿಸಲಾಗಿದೆ. ಈ ನಾಲ್ಕು ಯೋಜನೆಗಳಿಂದ ಮೂರು ಪಟ್ಟಣ ಮತ್ತು ನಾಲ್ಕು ತಾಲ್ಲೂಕಿನ 1,455 ಹಳ್ಳಿಗಳಿಗೆ ಅನುಕೂಲ ಆಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>