<p><strong>ಚಿಕ್ಕಮಗಳೂರು</strong>: ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮುಖ್ಯ ಸಮಸ್ಯೆಯಾದ ಮಾನ್ಯತೆ ನವೀಕರಣ ವಿಚಾರವನ್ನು ಚರ್ಚಿಸಿ ಒಂದು ವಾರದಲ್ಲಿ ರಾಜ್ಯ ಮಟ್ಟದಲ್ಲಿ ತೀರ್ಮಾನಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಶಿಕ್ಷಕರ ಸಮಸ್ಯೆ ಕುರಿತು ಸಭೆಯಲ್ಲಿ ಮಾತನಾಡಿದ ಅವರು, ‘ಭವಿಷ್ಯದ ಪೀಳಿಗೆಗೆ ಜ್ಞಾನ ಬಿತ್ತುವ ಕೆಲಸ ಮಾಡುತ್ತಿರುವ ಶಿಕ್ಷಕರು ಯಾವುದೇ ಸಮಸ್ಯೆಗಳಿಂದ ಬಳಲಬಾರದು. ಸಮಸ್ಯೆಗಳನ್ನು ಸರಿಪಡಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದರು.</p>.<p>ಸರ್ಕಾರಿ ಕಚೇರಿಗಳಲ್ಲಿ ಶಿಕ್ಷಕರಿಗೆ ಗೌರವ ಸೂಚಿಸುವುದು ಅಧಿಕಾರಿಗಳ ಕರ್ತವ್ಯ. ಶಿಕ್ಷಕರಿಗೆ ಅಗೌರವ ತೋರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಕೆಲ ಸರ್ಕಾರಿ ಶಾಲೆಗಳಲ್ಲಿ ಸ್ಥಳೀಯ ಕೆಲ ಪುಂಡರು ಮದ್ಯದ ಬಾಟಲಿಗಳನ್ನು ಶಾಲಾ ಆವರಣದಲ್ಲಿ ಬಿಸಾಡಿ ಹೋಗುತ್ತಿದ್ದಾರೆ. ಅದಕ್ಕೆ ಅವಕಾಶ ನೀಡದೆ ಸ್ಥಳೀಯವಾಗಿ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>ಸರ್ಕಾರಿ ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಅವಶ್ಯ. ಇದು ಅನೈತಿಕ ಚಟುವಟಿಕೆಗಳನ್ನು ಮಟ್ಟಹಾಕಲು ಸಹಾಯವಾಗಲಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.</p>.<p>ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮರಾಜು, ಶಿಕ್ಷಣಾಧಿಕಾರಿ ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮುಖ್ಯ ಸಮಸ್ಯೆಯಾದ ಮಾನ್ಯತೆ ನವೀಕರಣ ವಿಚಾರವನ್ನು ಚರ್ಚಿಸಿ ಒಂದು ವಾರದಲ್ಲಿ ರಾಜ್ಯ ಮಟ್ಟದಲ್ಲಿ ತೀರ್ಮಾನಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಶಿಕ್ಷಕರ ಸಮಸ್ಯೆ ಕುರಿತು ಸಭೆಯಲ್ಲಿ ಮಾತನಾಡಿದ ಅವರು, ‘ಭವಿಷ್ಯದ ಪೀಳಿಗೆಗೆ ಜ್ಞಾನ ಬಿತ್ತುವ ಕೆಲಸ ಮಾಡುತ್ತಿರುವ ಶಿಕ್ಷಕರು ಯಾವುದೇ ಸಮಸ್ಯೆಗಳಿಂದ ಬಳಲಬಾರದು. ಸಮಸ್ಯೆಗಳನ್ನು ಸರಿಪಡಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದರು.</p>.<p>ಸರ್ಕಾರಿ ಕಚೇರಿಗಳಲ್ಲಿ ಶಿಕ್ಷಕರಿಗೆ ಗೌರವ ಸೂಚಿಸುವುದು ಅಧಿಕಾರಿಗಳ ಕರ್ತವ್ಯ. ಶಿಕ್ಷಕರಿಗೆ ಅಗೌರವ ತೋರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಕೆಲ ಸರ್ಕಾರಿ ಶಾಲೆಗಳಲ್ಲಿ ಸ್ಥಳೀಯ ಕೆಲ ಪುಂಡರು ಮದ್ಯದ ಬಾಟಲಿಗಳನ್ನು ಶಾಲಾ ಆವರಣದಲ್ಲಿ ಬಿಸಾಡಿ ಹೋಗುತ್ತಿದ್ದಾರೆ. ಅದಕ್ಕೆ ಅವಕಾಶ ನೀಡದೆ ಸ್ಥಳೀಯವಾಗಿ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>ಸರ್ಕಾರಿ ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಅವಶ್ಯ. ಇದು ಅನೈತಿಕ ಚಟುವಟಿಕೆಗಳನ್ನು ಮಟ್ಟಹಾಕಲು ಸಹಾಯವಾಗಲಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.</p>.<p>ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮರಾಜು, ಶಿಕ್ಷಣಾಧಿಕಾರಿ ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>