<p><strong>ಚಿಕ್ಕಮಗಳೂರು</strong>: ‘ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಯಾರೇ ಸಾಮರಸ್ಯ ಕದಡಿದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮಾ ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋಮು ಸಾಮರಸ್ಯ ಕಾಪಾಡುವುದು ಕೇವಲ ಪೊಲೀಸ್ ಇಲಾಖೆ ಜವಾಬ್ದಾರಿ ಅಲ್ಲ. ಎಲ್ಲರ ಹೊಣೆಗಾರಿಕೆ’ ಎಂದರು.</p>.<p>ಮಾಹಿತಿ ತಂತ್ರಜ್ಞಾನದ ಜತೆಗೆ ಕೃತಕ ಬುದ್ಧಿಮತ್ತೆ ಆಧರಿಸಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಣ್ಗಾವಲು ಇರಿಸಲಾಗುವುದು. ನೈತಿಕ ಪೊಲೀಸ್ ಗಿರಿ ಮತ್ತು ದ್ವೇಷ ಭಾಷಣ ಮಾಡುವುದನ್ನು ಸಹಿಸುವುದಿಲ್ಲ. ಮುಲಾಜಿಲ್ಲದೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಪ್ರಕರಣಗಳ ನಿಯಂತ್ರಣ ಹಾಗೂ ಸಂಚಾರ ದಟ್ಟಣೆ ನಿರ್ವಹಣೆಗೂ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>‘ಅಪರಾಧ ಪ್ರಕರಣ ನಿಯಂತ್ರಣ ಸಂಬಂಧ ಜಿಲ್ಲೆಯ ಎಲ್ಲ ಠಾಣೆಗಳಿಗೆ ಸೂಚನೆ ನೀಡಲಾಗಿದೆ. ಅದರಲ್ಲೂ ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಪಟ್ಟ ಯಾವುದೇ ಪ್ರಕರಣಗಳು ದಾಖಲಾದರೂ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಈ ವಿಚಾರದಲ್ಲಿ ವಿಳಂಬ ಮಾಡದಂತೆ ತಿಳಿಸಲಾಗಿದೆ’ ಎಂದರು.</p>.<p>ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣ ಕುರಿತು ಜಿಲ್ಲಾಡಳಿತ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಬ್ಬಂದಿ ಜತೆ ಸಮಾಲೋಚನೆ ನಡೆಸಿ ಕ್ರಮ ಜರುಗಿಸಲಾಗುವುದು ಎಂದು ವಿವರಿಸಿದರು.</p>.<p>ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಯಾರೇ ಸಾಮರಸ್ಯ ಕದಡಿದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮಾ ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋಮು ಸಾಮರಸ್ಯ ಕಾಪಾಡುವುದು ಕೇವಲ ಪೊಲೀಸ್ ಇಲಾಖೆ ಜವಾಬ್ದಾರಿ ಅಲ್ಲ. ಎಲ್ಲರ ಹೊಣೆಗಾರಿಕೆ’ ಎಂದರು.</p>.<p>ಮಾಹಿತಿ ತಂತ್ರಜ್ಞಾನದ ಜತೆಗೆ ಕೃತಕ ಬುದ್ಧಿಮತ್ತೆ ಆಧರಿಸಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಣ್ಗಾವಲು ಇರಿಸಲಾಗುವುದು. ನೈತಿಕ ಪೊಲೀಸ್ ಗಿರಿ ಮತ್ತು ದ್ವೇಷ ಭಾಷಣ ಮಾಡುವುದನ್ನು ಸಹಿಸುವುದಿಲ್ಲ. ಮುಲಾಜಿಲ್ಲದೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಪ್ರಕರಣಗಳ ನಿಯಂತ್ರಣ ಹಾಗೂ ಸಂಚಾರ ದಟ್ಟಣೆ ನಿರ್ವಹಣೆಗೂ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>‘ಅಪರಾಧ ಪ್ರಕರಣ ನಿಯಂತ್ರಣ ಸಂಬಂಧ ಜಿಲ್ಲೆಯ ಎಲ್ಲ ಠಾಣೆಗಳಿಗೆ ಸೂಚನೆ ನೀಡಲಾಗಿದೆ. ಅದರಲ್ಲೂ ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಪಟ್ಟ ಯಾವುದೇ ಪ್ರಕರಣಗಳು ದಾಖಲಾದರೂ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಈ ವಿಚಾರದಲ್ಲಿ ವಿಳಂಬ ಮಾಡದಂತೆ ತಿಳಿಸಲಾಗಿದೆ’ ಎಂದರು.</p>.<p>ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣ ಕುರಿತು ಜಿಲ್ಲಾಡಳಿತ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಬ್ಬಂದಿ ಜತೆ ಸಮಾಲೋಚನೆ ನಡೆಸಿ ಕ್ರಮ ಜರುಗಿಸಲಾಗುವುದು ಎಂದು ವಿವರಿಸಿದರು.</p>.<p>ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>