<p><strong>ಚಿಕ್ಕಮಗಳೂರು</strong>: ಶಿಕ್ಷಣ, ಆರೋಗ್ಯ, ಅಭಿವೃದ್ಧಿಗೆ ಪೂರಕವಾಗಿರುವ ರಾಜ್ಯ ಸರ್ಕಾರ, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹50 ಕೋಟಿ ವಿಶೇಷ ಅನುದಾನ ನೀಡಿದ್ದಾರೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.</p>.<p>ಸೋಮವಾರ ನಲ್ಲೂರು ಪಕ್ಕದ ಕ್ರಿಶ್ಚಿಯನ್ ಬಡಾವಣೆಗೆ ಪಿಆರ್ಡಿಆರ್ ಯೋಜನೆಯಡಿ ₹50 ಲಕ್ಷ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>ಬಡವರಿಗೆ ಬದುಕು ಕಟ್ಟಿಕೊಡುವಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡಿ, ವಾರ್ಷಿಕ ₹57 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಜಾತ್ಯಾತೀತ, ಸಮಾಜವಾದಿ ಸಿದ್ಧಾಂತದ ಸಿದ್ದರಾಮಯ್ಯ ಅವರು, ಯಾವುದೇ ಧರ್ಮಕ್ಕೂ ಭೇದ ಮಾಡದೆ ದೀನ ದಲಿತರ, ಹಿಂದುಳಿದ, ಶೋಷಿತರು ಬಡವರ ಬದುಕಿಗೆ ಆದ್ಯತೆ ನೀಡಿದ್ದಾರೆ ಎಂದರು.</p>.<p>ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಕಳೆದ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ₹100 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಇನ್ನೊಂದು ವರ್ಷದ ಒಳಗೆ ಈ ಆಸ್ಪತ್ರೆ ಬಡವರಿಗೆ ಲೋಕಾರ್ಪಣೆಯಾಗಲಿದೆ ಎಂದರು.</p>.<p>ಈಗಾಗಲೇ ತಲಾ ₹4 ಕೋಟಿ ವೆಚ್ಚದಲ್ಲಿ ಕ್ಷೇತ್ರಕ್ಕೆ 3 ಕೆಪಿಎಸ್ ಶಾಲೆ ಮಂಜೂರಾಗಿ ಆರಂಭಗೊಂಡಿವೆ. 500 ವಿದ್ಯಾರ್ಥಿಗಳಿರುವ ಈ ಶಾಲೆಗೆ ಮೂಲಸೌಕರ್ಯಗಳನ್ನು ಕಲ್ಪಿಸಿ ಒಂದರಿಂದ ಹತ್ತನೇ ತರಗತಿವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.</p>.<p>ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಅದರ ಬಿಸಿ ಪ್ರಪಂಚದಾದ್ಯಂತ ತಲುಪುತ್ತಿದೆ. ಬುದ್ಧ, ಬಸವ, ಅಂಬೇಡ್ಕರ್, ಕನಕದಾಸ, ನಾರಾಯಣಗುರು ಮುಂತಾದ ಮಹಾನ್ ದಾರ್ಶನಿಕರ ಹೋರಾಟದ ಫಲವಾಗಿ ಭಾರತ ದೇಶದಲ್ಲಿ ಇಂದು ಶಾಂತಿ ನೆಲೆಸಿದೆ ಎಂದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಕಾಂಗ್ರೆಸ್ ಪಕ್ಷದ ಮುಖಂಡರಾದ ಬೆಟ್ಟಗೆರೆ ಪ್ರವೀಣ್, ಜಯರಾಜ್ ಅರಸ್, ಜೇಮ್ಸ್ ಡಿಸೋಜ, ಸಿಲ್ವೆಸ್ಟರ್, ಐ.ಡಿ ಚಂದ್ರಶೇಖರ್, ಮಹೇಶ್ವರಯ್ಯ, ಚೇತನ್, ರೇವಣ್ಣ, ಸಂಜಯ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಶಿಕ್ಷಣ, ಆರೋಗ್ಯ, ಅಭಿವೃದ್ಧಿಗೆ ಪೂರಕವಾಗಿರುವ ರಾಜ್ಯ ಸರ್ಕಾರ, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹50 ಕೋಟಿ ವಿಶೇಷ ಅನುದಾನ ನೀಡಿದ್ದಾರೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.</p>.<p>ಸೋಮವಾರ ನಲ್ಲೂರು ಪಕ್ಕದ ಕ್ರಿಶ್ಚಿಯನ್ ಬಡಾವಣೆಗೆ ಪಿಆರ್ಡಿಆರ್ ಯೋಜನೆಯಡಿ ₹50 ಲಕ್ಷ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>ಬಡವರಿಗೆ ಬದುಕು ಕಟ್ಟಿಕೊಡುವಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡಿ, ವಾರ್ಷಿಕ ₹57 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಜಾತ್ಯಾತೀತ, ಸಮಾಜವಾದಿ ಸಿದ್ಧಾಂತದ ಸಿದ್ದರಾಮಯ್ಯ ಅವರು, ಯಾವುದೇ ಧರ್ಮಕ್ಕೂ ಭೇದ ಮಾಡದೆ ದೀನ ದಲಿತರ, ಹಿಂದುಳಿದ, ಶೋಷಿತರು ಬಡವರ ಬದುಕಿಗೆ ಆದ್ಯತೆ ನೀಡಿದ್ದಾರೆ ಎಂದರು.</p>.<p>ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಕಳೆದ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ₹100 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಇನ್ನೊಂದು ವರ್ಷದ ಒಳಗೆ ಈ ಆಸ್ಪತ್ರೆ ಬಡವರಿಗೆ ಲೋಕಾರ್ಪಣೆಯಾಗಲಿದೆ ಎಂದರು.</p>.<p>ಈಗಾಗಲೇ ತಲಾ ₹4 ಕೋಟಿ ವೆಚ್ಚದಲ್ಲಿ ಕ್ಷೇತ್ರಕ್ಕೆ 3 ಕೆಪಿಎಸ್ ಶಾಲೆ ಮಂಜೂರಾಗಿ ಆರಂಭಗೊಂಡಿವೆ. 500 ವಿದ್ಯಾರ್ಥಿಗಳಿರುವ ಈ ಶಾಲೆಗೆ ಮೂಲಸೌಕರ್ಯಗಳನ್ನು ಕಲ್ಪಿಸಿ ಒಂದರಿಂದ ಹತ್ತನೇ ತರಗತಿವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.</p>.<p>ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಅದರ ಬಿಸಿ ಪ್ರಪಂಚದಾದ್ಯಂತ ತಲುಪುತ್ತಿದೆ. ಬುದ್ಧ, ಬಸವ, ಅಂಬೇಡ್ಕರ್, ಕನಕದಾಸ, ನಾರಾಯಣಗುರು ಮುಂತಾದ ಮಹಾನ್ ದಾರ್ಶನಿಕರ ಹೋರಾಟದ ಫಲವಾಗಿ ಭಾರತ ದೇಶದಲ್ಲಿ ಇಂದು ಶಾಂತಿ ನೆಲೆಸಿದೆ ಎಂದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಕಾಂಗ್ರೆಸ್ ಪಕ್ಷದ ಮುಖಂಡರಾದ ಬೆಟ್ಟಗೆರೆ ಪ್ರವೀಣ್, ಜಯರಾಜ್ ಅರಸ್, ಜೇಮ್ಸ್ ಡಿಸೋಜ, ಸಿಲ್ವೆಸ್ಟರ್, ಐ.ಡಿ ಚಂದ್ರಶೇಖರ್, ಮಹೇಶ್ವರಯ್ಯ, ಚೇತನ್, ರೇವಣ್ಣ, ಸಂಜಯ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>