<p>ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳನ್ನು ತಿದ್ದುವ ಮೂಲಕ ಬಿಜೆಪಿ ಗೆಲುವು ಪಡೆದುಕೊಂಡಿದೆ. ಆ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಆರೋಪಿಸಿದರು.</p>.<p>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಪ್ರಭುಗಳು. ಅವರು ನೀಡಿರುವ ತೀರ್ಪಿಗೆ ವಿರುದ್ಧವಾಗಿ ಮತಪತ್ರ ತಿದ್ದುವ ಮೂಲಕ ಫಲಿತಾಂಶ ಪಡೆದುಕೊಳ್ಳಲಾಗಿದೆ. ಮುಗ್ಧರಾದ ರಾಜೇಗೌಡ ಅವರಿಗೂ ಮೋಸ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ದೂರಿದರು.</p>.<p>2023ರಲ್ಲಿ ನಡೆದ ವಿಧಾನಸಭೆ ಮತ ಎಣಿಕೆ ಸಂದರ್ಭದಲ್ಲಿ ಎಲ್ಲಾ ಅಭ್ಯರ್ಥಿಗಳ ಪರವಾಗಿ ಇದ್ದ ಎಣಿಕೆ ಏಜೆಂಟರ ಸಮ್ಮುಖದಲ್ಲಿ ಅಂಚೆ ಮತಗಳನ್ನು ಎಣಿಸಲಾಗಿದೆ. ಟಿ.ಡಿ. ರಾಜೇಗೌಡ ಅವರ ಪರವಾಗಿ ಸಿಂಧುವಾಗಿದ್ದ 255 ಮತಗಳು 3 ವರ್ಷದ ಬಳಿಕ ಅಸಿಂಧುವಾಗಿವೆ ಎಂದರೆ ನಂಬಲು ಅಸಾಧ್ಯ. ಅಂಚೆ ಮತಗಳನ್ನು ಬಹುತೇಕ ಸರ್ಕಾರಿ ನೌಕರರೇ ಹಾಕಿದ್ದಾರೆ. ಅವರು ಇಬ್ಬರಿಗೂ ಮತ ಹಾಕುವಂತಹ ಕೆಲಸ ಮಾಡಿರುವುದಿಲ್ಲ. ಮತಪತ್ರಗಳನ್ನು ತಿದ್ದಿರುವುದರಲ್ಲಿ ಸಂಶಯ ಇಲ್ಲ ಎಂದರು.</p>.<p>ಒಂದೇ ಕಟ್ಟಿನಲ್ಲಿ ಇದ್ದ 170 ಮತಗಳನ್ನು ಉದ್ದೇಶಪೂರ್ವಕವಾಗಿ ತಿದ್ದುಪಡಿ ಮಾಡಲಾಗಿದೆ. ಅವುಗಳಲ್ಲಿ ಎರಡೆರಡು ಗೆರೆ ಎಳೆದವರು ಯಾರು, ಸ್ಟ್ರಾಂಗ್ ರೂಮಿನಲ್ಲಿದ್ದ ಪೆಟ್ಟಿಗೆಗಳ ಸೀಲ್ ತೆಗೆದು ಅಕ್ರಮ ಎಸಗಿದವರು ಯಾರು, ನಾಪತ್ತೆಯಾಗಿದ್ದ ಮತಗಳು ಎಲ್ಲಿ ಹೋದವು ಎಂಬ ಸತ್ಯ ಹೊರಗೆ ಬರಬೇಕಾಗಿದೆ. ಹೀಗಾಗಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.</p>.<p>ಚುನಾವಣಾಧಿಕಾರಿಗೆ ವಕೀಲರು ಹಾಗೂ ಚುನಾವಣಾ ಆಯೋಗದ ಮೂಲಕ ಒತ್ತಡ ಹೇರಲಾಗಿದೆ. ಈ ಪ್ರಕರಣದಲ್ಲಿ ಅಕ್ರಮ ನಡೆದಿರುವ ಬಗ್ಗೆ ಆಯೋಗಕ್ಕೆ ಜಿಲ್ಲಾಧಿಕಾರಿ ದೂರು ಸಲ್ಲಿಸಬೇಕು ಎಂದರು.</p>.<p>ಜೀವರಾಜ್ ಪ್ರಕರಣದಲ್ಲಿ ಇಷ್ಟೊಂದು ತುರ್ತಾಗಿ ತೀರ್ಮಾನ ತೆಗೆದುಕೊಂಡಿರುವ ನ್ಯಾಯಾಲಯ, ಗಾಯತ್ರಿ ಶಾಂತೇಗೌಡ ಅವರ ಪ್ರಕರಣದಲ್ಲಿ ಮೀನಮೇಷ ಎಣಿಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಮುಖಂಡರಾದ ರಾಮಚಂದ್ರ, ಶಾಂತಕುಮಾರ್, ಕುಸುಮಾ ಭರತ್, ಸಿಡಿಎ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಎಂ.ಡಿ.ರಮೇಶ್, ಶಾದಬ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-126-1152450733</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳನ್ನು ತಿದ್ದುವ ಮೂಲಕ ಬಿಜೆಪಿ ಗೆಲುವು ಪಡೆದುಕೊಂಡಿದೆ. ಆ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಆರೋಪಿಸಿದರು.</p>.<p>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಪ್ರಭುಗಳು. ಅವರು ನೀಡಿರುವ ತೀರ್ಪಿಗೆ ವಿರುದ್ಧವಾಗಿ ಮತಪತ್ರ ತಿದ್ದುವ ಮೂಲಕ ಫಲಿತಾಂಶ ಪಡೆದುಕೊಳ್ಳಲಾಗಿದೆ. ಮುಗ್ಧರಾದ ರಾಜೇಗೌಡ ಅವರಿಗೂ ಮೋಸ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ದೂರಿದರು.</p>.<p>2023ರಲ್ಲಿ ನಡೆದ ವಿಧಾನಸಭೆ ಮತ ಎಣಿಕೆ ಸಂದರ್ಭದಲ್ಲಿ ಎಲ್ಲಾ ಅಭ್ಯರ್ಥಿಗಳ ಪರವಾಗಿ ಇದ್ದ ಎಣಿಕೆ ಏಜೆಂಟರ ಸಮ್ಮುಖದಲ್ಲಿ ಅಂಚೆ ಮತಗಳನ್ನು ಎಣಿಸಲಾಗಿದೆ. ಟಿ.ಡಿ. ರಾಜೇಗೌಡ ಅವರ ಪರವಾಗಿ ಸಿಂಧುವಾಗಿದ್ದ 255 ಮತಗಳು 3 ವರ್ಷದ ಬಳಿಕ ಅಸಿಂಧುವಾಗಿವೆ ಎಂದರೆ ನಂಬಲು ಅಸಾಧ್ಯ. ಅಂಚೆ ಮತಗಳನ್ನು ಬಹುತೇಕ ಸರ್ಕಾರಿ ನೌಕರರೇ ಹಾಕಿದ್ದಾರೆ. ಅವರು ಇಬ್ಬರಿಗೂ ಮತ ಹಾಕುವಂತಹ ಕೆಲಸ ಮಾಡಿರುವುದಿಲ್ಲ. ಮತಪತ್ರಗಳನ್ನು ತಿದ್ದಿರುವುದರಲ್ಲಿ ಸಂಶಯ ಇಲ್ಲ ಎಂದರು.</p>.<p>ಒಂದೇ ಕಟ್ಟಿನಲ್ಲಿ ಇದ್ದ 170 ಮತಗಳನ್ನು ಉದ್ದೇಶಪೂರ್ವಕವಾಗಿ ತಿದ್ದುಪಡಿ ಮಾಡಲಾಗಿದೆ. ಅವುಗಳಲ್ಲಿ ಎರಡೆರಡು ಗೆರೆ ಎಳೆದವರು ಯಾರು, ಸ್ಟ್ರಾಂಗ್ ರೂಮಿನಲ್ಲಿದ್ದ ಪೆಟ್ಟಿಗೆಗಳ ಸೀಲ್ ತೆಗೆದು ಅಕ್ರಮ ಎಸಗಿದವರು ಯಾರು, ನಾಪತ್ತೆಯಾಗಿದ್ದ ಮತಗಳು ಎಲ್ಲಿ ಹೋದವು ಎಂಬ ಸತ್ಯ ಹೊರಗೆ ಬರಬೇಕಾಗಿದೆ. ಹೀಗಾಗಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.</p>.<p>ಚುನಾವಣಾಧಿಕಾರಿಗೆ ವಕೀಲರು ಹಾಗೂ ಚುನಾವಣಾ ಆಯೋಗದ ಮೂಲಕ ಒತ್ತಡ ಹೇರಲಾಗಿದೆ. ಈ ಪ್ರಕರಣದಲ್ಲಿ ಅಕ್ರಮ ನಡೆದಿರುವ ಬಗ್ಗೆ ಆಯೋಗಕ್ಕೆ ಜಿಲ್ಲಾಧಿಕಾರಿ ದೂರು ಸಲ್ಲಿಸಬೇಕು ಎಂದರು.</p>.<p>ಜೀವರಾಜ್ ಪ್ರಕರಣದಲ್ಲಿ ಇಷ್ಟೊಂದು ತುರ್ತಾಗಿ ತೀರ್ಮಾನ ತೆಗೆದುಕೊಂಡಿರುವ ನ್ಯಾಯಾಲಯ, ಗಾಯತ್ರಿ ಶಾಂತೇಗೌಡ ಅವರ ಪ್ರಕರಣದಲ್ಲಿ ಮೀನಮೇಷ ಎಣಿಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಮುಖಂಡರಾದ ರಾಮಚಂದ್ರ, ಶಾಂತಕುಮಾರ್, ಕುಸುಮಾ ಭರತ್, ಸಿಡಿಎ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ಎಂ.ಡಿ.ರಮೇಶ್, ಶಾದಬ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-126-1152450733</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>